ಕೊಡಗರಹಳ್ಳಿ: ರಕ್ತೇಶ್ವರಿ ಪರಿವಾರ ದೇವರ 46ನೇ ವಾರ್ಷಿಕ ಮಹೋತ್ಸವ ಚಾಲನೆ

KannadaprabhaNewsNetwork |  
Published : Apr 30, 2024, 02:13 AM IST
ಮಹೋತ್ಸವ | Kannada Prabha

ಸಾರಾಂಶ

46ನೇ ವಾರ್ಷಿಕ ಮಹೋತ್ಸವ 29ರಿಂದ 1ರ ವರೆಗೆ ವಿವಿಧ ಪೂಜೆ, ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿದ್ಯುಕ್ತವಾಗಿ ನಡೆಯಲಿದೆ. 29ರಂದು ಗಣಪತಿ ಹೋಮ ಮತ್ತು ಕೊಡಿ ಏರಿಸುವುದರೊಂದಿಗೆ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಕೊಡಗರಹಳ್ಳಿಯ ಕುಂದೂರುಮೊಟ್ಟೆ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ ಶ್ರೀ ಮಹಾವಿಷ್ಣು, ಶ್ರೀ ಚಾಮುಂಡೇಶ್ವರಿ, ರಕ್ತೇಶ್ವರಿ ಪರಿವಾರ ದೇವರ 46 ನೇ ವಾರ್ಷಿಕ ಮಹೋತ್ಸವಕ್ಕೆ 29 ರಿಂದ 1 ರವರೆಗೆ ವಿವಿಧ ಪೂಜೆ ಮತ್ತು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿದ್ಯುಕ್ತವಾಗಿ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

29 ರಂದು ಪೂರ್ವಾಹ್ನ ಗಣಪತಿ ಹೋಮ ಮತ್ತು ಕೊಡಿ ಏರಿಸುವುದರೊಂದಿಗೆ ಪೂಜಾ ಕಾರ್ಯಕ್ರಮಗಳು ಚಾಲನೆ ನೀಡಲಾಯಿತು. ಅನಂತರ ಸಂಜೆ 7 ಗಂಟೆಯಿಂದ ದೀಪರಾಧನೆ ಏಳು ಸುತ್ತಿನ ಪ್ರದಕ್ಷಿಣೆ ಹಾಗೂ ಶ್ರೀ ಚಾಮುಂಡಿ ತಂಡದಿಂದ ಚಂಡೆ ಮೇಳ ಜರುಗಲಿದೆ. ಮಂಗಳವಾರ ಶ್ರೀ ಚಾಮುಂಡೇಶ್ವರಿ ದೇವಿಯ ಅಭಿಷೇಕ ಪೂಜೆ ನಡೆಯಲಿದೆ. ಗ್ರಾಮದ ಮಂಗಳವಾರ ರಾತ್ರಿಯಿಂದ ವಿವಿಧ ದೈವಗಳ ಕೋಲ ನಡೆಯಲ್ಲಿದ್ದು 30 ರಂದು ಪೂರ್ವಾಹ್ನ ಅಜ್ಜಪ್ಪ ಕೋಲ ವಿಷ್ಣುಮೂರ್ತಿ ಕೋಲ, ರಕ್ತೇಶ್ವರಿ ಹಾಗೂ ಚಾಮುಂಡೇಶ್ವರಿ ಕೋಲದೊಂದಿಗೆ ರಾತ್ರಿ 8 ಗಂಟೆಗೆ ಶ್ರೀದೇವಿ ನೈವೇದ್ಯದೊಂದಿಗೆ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ ಎಂದು ಶ್ರೀಕುಂದುರುಮೊಟ್ಟೆ ಚಾಮುಂಡೇಶ್ವರಿ ದೇವಾಲಯ ಸಮಿತಿ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು