ಸಾಧಕರ ಸಾಧನೆ ಕಿರಿಯರಿಗೆ ಪ್ರೇರಣೆ: ಗುರುರಾಜ್ ಗಂಟಿಹೊಳೆ

KannadaprabhaNewsNetwork |  
Published : Feb 25, 2026, 03:00 AM IST
ಬೈಂದೂರಿನಲ್ಲಿ ಅಡಿಗರ 108ನೇ ಜನ್ಮ ದಿನೋತ್ಸವ ಮತ್ತು ಕಾರಂತರ ಕುರಿತು ಉಪನ್ಯಾಸ ನಡೆಯಿತು | Kannada Prabha

ಸಾರಾಂಶ

ಸಾಧಕರ ಸಾಧನೆ ಕಿರಿಯರಿಗೆ ಪ್ರೇರಣೆಯಾಗಬೇಕು. ಗ್ರಾಮೀಣ ಭಾಗದಲ್ಲಿ ವಿದ್ಯಾಭ್ಯಾಸ ಮಾಡಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ ವ್ಯಕ್ತಿಗಳನ್ನು ಶಾಲೆಗೆ ಕರೆಸಿ ಕಾರ್ಯಕ್ರಮಗಳನ್ನು ಮಾಡಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಬೇಕು ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.

ಬೈಂದೂರು: ಸಾಧಕರ ಸಾಧನೆ ಕಿರಿಯರಿಗೆ ಪ್ರೇರಣೆಯಾಗಬೇಕು. ಗ್ರಾಮೀಣ ಭಾಗದಲ್ಲಿ ವಿದ್ಯಾಭ್ಯಾಸ ಮಾಡಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ ವ್ಯಕ್ತಿಗಳನ್ನು ಶಾಲೆಗೆ ಕರೆಸಿ ಕಾರ್ಯಕ್ರಮಗಳನ್ನು ಮಾಡಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಬೇಕು ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.

ಬೈಂದೂರು ಸರ್ಕಾರಿ ಮಾದರಿ ಹಿರಿಯ ಪ್ರಥಮಿಕ ಶಾಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಗೋಪಾಲಕೃಷ್ಣ ಅಡಿಗ ಸ್ಮಾರಕ ಟ್ರಸ್ಟ್ ಬೆಂಗಳೂರು ಇವುಗಳ ಸಹಯೋಗದಲ್ಲಿ ಕವಿ ಗೋಪಾಲಕೃಷ್ಣ ಅಡಿಗರ 108ನೇ ಜನ್ಮ ದಿನೋತ್ಸವದ ಪ್ರಯುಕ್ತ ಅಡಿಗ ಸಂಸ್ಮರಣೆ ಮತ್ತು ಕಾರಂತರ ಕುರಿತು ಉಪನ್ಯಾಸ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪುರಸ್ಕರಿಸಿ ಮಾತನಾಡಿದರು. ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಗಣನಾಥ ಎಕ್ಕಾರು ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಶತಮಾನ ಪೂರೈಸಿದ ಅಡಿಗರು ಕಲಿತ ಮಾಧ್ಯಮಿಕ ಶಾಲೆಯ ಬಗ್ಗೆ ಮುಖ್ಯೋಪಾಧ್ಯಾಯ ಗಣಪತಿ ಹೋಬಳಿದಾರ್ ಮಾತನಾಡಿದರು.

ಈ ಸಂದರ್ಭದಲ್ಲಿ ಮೂಗೇರಿ ಸಮಷ್ಟಿ ಪುರಸ್ಕಾರ ಶಾಶ್ವತ ಫಲಕವನ್ನು ಕೆ. ಪುಂಡಲೀಕ್ ನಾಯಕ್ ಅವರಿಗೆ ನೀಡಲಾಯಿತು. ಶಾಲಾ ಮಕ್ಕಳಿಗೆ ರಂಗೋಲಿ ಪ್ರಾತ್ಯಕ್ಷಿಕೆ ಮಾಡಿ ರಂಗೋಲಿ ಸ್ಪರ್ಧೆಯನ್ನು ಡಾ. ಭಾರತಿ ಮರವಂತೆ ನೆರವೇರಿಸಿದರು.ಕಾರ್‍ಯಕ್ರಮದಲ್ಲಿ ಜೆಸಿಐ ಬೈಂದೂರು ಸಿಟಿ ಅಧ್ಯಕ್ಷ ಚೈತ್ರಾ ಸತೀಶ್, ಅರಣ್ಯ ಇಲಾಖೆ ಗಸ್ತು ಅರಣ್ಯಪಾಲಕ ವಿಜಯ್, ಶಾಲಾಭಿವೃದ್ಧಿ ಉಸ್ತುವಾರಿ ಸಮಿತಿ ಅಧ್ಯಕ್ಷ ಭಾಸ್ಕರ್ ದೇವಾಡಿಗ ಉಪಸ್ಥಿತರಿದ್ದರು. ವೀಣಾ ಹೆಗಡೆ ಮತ್ತು ಜಯ ನಿರೂಪಿಸಿ, ಶಾಲಾ ಸಹಶಿಕ್ಷಕಿ ಶಶಿರೇಖಾ ವಂದಿಸಿದರು.ಸಮಾರೋಪ ಸಮಾರಂಭದಲ್ಲಿ ಚಿಂತಕಿ ಡಾ. ರೇಖಾ ಬನ್ನಾಡಿ ಮತ್ತು ವಿಮರ್ಶಕ ರಾಜೀವ ನಾಯಕ್ ಉಪನ್ಯಾಸ ನೀಡಿದರು. ಸಾಹಿತಿ ಗಣೇಶ್ ಅಡಿಗರ ಕವಿತ್ವದ ಬಗ್ಗೆ ಮಾತನಾಡಿದರು. ಹಿರಿಯ ಕೃಷಿಕ ಭದ್ರಪ್ಪ ಗೌಡ ಕವಿ ಗೋಪಾಲಕೃಷ್ಣ ಅಡಿಗರ ಹಾಡುಗಳನ್ನು ಹಾಡಿದರು. ಡಾ. ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ. ಗಣನಾಥ ಎಕ್ಕಾರು ಅವರು ಸಮಾರಂಭದ ಆಶಯ ನುಡಿಗಳನ್ನಾಡಿದರು. ಕಾಲೇಜಿನ ಪ್ರಿನ್ಸಿಪಾಲ್‌ ವೆಂಕಟರಮಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಚಂದ್ರಶೇಖರ ಸ್ವಾಗತಿಸಿದರು, ಕಾಲೇಜಿನ ಉಪಪ್ರಾಂಶುಪಾಲ ಪಿ. ಪದ್ಮನಾಭ, ಡಾ. ಶಿವರಾಮ ಕಾರಂತ ಟ್ರಸ್ಟ್ ಡಾ. ಚೇತನ್ ಶೆಟ್ಟಿ ಕೋವಾಡಿ, ಅಡಿಗ ಟ್ರಸ್ಟ್ ಪ್ರವರ್ತಕ ಜಯರಾಮ ಉಪಸ್ಥಿತರಿದ್ದರು. ಉಪನ್ಯಾಸಕರಾದ ಸತೀಶ್ ನಿರೂಪಿಸಿದರು. ಭರತ್ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

2 ವರ್ಷದೊಳಗೆ ಪುತ್ತೂರು ದೇವಳ ಬ್ರಹ್ಮಕಲಶ ಗುರಿ: ಅಶೋಕ್‌ ರೈ
ದೇಶಕ್ಕಾಗಿ ರಕ್ತ ಬಲಿದಾನ ನೀಡಿದವರು ಬಿಗ್‌ ಬಾಸ್‌: ದೋ. ಕೇಶವಮೂರ್ತಿ