ಕಮಲಾಪುರ, ನಾಗರಮಕ್ಕಿ ಸರ್ಕಾರಿ ಶಾಲೆಗೆ ಶಾಲಾ ಬ್ಯಾಗ್,ಛತ್ರಿ ವಿತರಣೆ
ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಸಂಸ್ಥೆ ಉದ್ದೇಶವಾಗಿದೆ ಎಂದು ದಾನಿ ಹಾಗೂ ಶಿವಮೊಗ್ಗ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ವಿ.ಸುಬ್ರಮಣ್ಯ ತಿಳಿಸಿದರು.
ನಾಗರಮಕ್ಕಿ ಹಾಗೂ ಕಮಲಾಪುರ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಸಂಸ್ಥೆಯಿಂದ ಶಾಲಾ ಬ್ಯಾಗ್, ಛತ್ರಿ ಹಾಗೂ ಇತರ ಶಾಲಾ ಪರಿಕರ ವಿತರಿಸುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.ಸೀನಿಯರ್ ಚೇಂಬರ್ ಸಮಾಜಮುಖಿ ಕೆಲಸ ಮಾಡುತ್ತಿದೆ.ಇಂದಿನ ಮಕ್ಕಳೇ ಮುಂದಿನ ಪ್ರಜೆಗಳಾಗಿದ್ದು ದಾನವಾಗಿ ನೀಡಿರುವ ಶಾಲಾ ಪರಿಕರಗಳನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಂಡು ಶಿಕ್ಷಣ ಬಗ್ಗೆ ಹೆಚ್ಚು ಗಮನ ನೀಡಿ ಉತ್ತಮ ಅಂಕ ಪಡೆಯಿರಿ.ಇತ್ತೀಚಿಗೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗಿ ರುತ್ತಿರುವುದು ವಿಷಾದದ ಸಂಗತಿ ಎಂದರು.ಇನ್ನೊಬ್ಬ ದಾನಿ ಹಾಗೂ ಶಿವಮೊಗ್ಗದ ಸರ್ಕಾರಿ ಶ್ರೀ ಗಂಧ ಕೋಠಿ ವಲಯ ಅರಣ್ಯಾಧಿಕಾರಿ ಬಿ.ಸಿ.ಲೋಕೇಶ್ ಮಾತನಾಡಿ, ಮಕ್ಕಳು ದೇವರಿಗೆ ಸಮಾನರಾಗಿದ್ದಾರೆ. ಪೋಷಕರು ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ ಸಮಾಜದ ಆಸ್ತಿಯನ್ನಾಗಿ ಮಾಡಬೇಕು ಎಂದು ಪೋಷಕರಿಗೆ ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಶಾಲಾ ಪರಿಕರದ ದಾನಿಗಳಾದ ಶಿವಮೊಗ್ಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ವಿ.ಸುಬ್ರಮಣ್ಯ ಹಾಗೂ ಶಿವಮೊಗ್ಗ ವಲಯ ಅರಣ್ಯಾಧಿಕಾರಿ ಬಿ.ಸಿ.ಲೋಕೇಶ್ ಅವರನ್ನು ಸನ್ಮಾನಿಸಲಾಯಿತು.