ಕಾವೇರಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಬಹುತೇಕ ಕುಸಿತ

KannadaprabhaNewsNetwork |  
Published : Jun 04, 2025, 01:23 AM IST
ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಬಹುತೇಕ ಕುಸಿತ | Kannada Prabha

ಸಾರಾಂಶ

ಮಳೆ ಪ್ರಮಾಣ ಕ್ಷೀಣಗೊಂಡ ಹಿನ್ನೆಲೆಯಲ್ಲಿ ಕುಶಾಲನಗರ ಮೂಲಕ ಹರಿಯುವ ಕಾವೇರಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಬಹುತೇಕ ಕುಸಿತಗೊಂಡಿದೆ.

ಕುಶಾಲನಗರ: ಕಾವೇರಿ ನದಿ ತಟಗಳಲ್ಲಿ ಮಳೆಯ ಪ್ರಮಾಣ ಕ್ಷೀಣಗೊಂಡ ಹಿನ್ನೆಲೆಯಲ್ಲಿ ಕುಶಾಲನಗರ ಮೂಲಕ ಹರಿಯುವ ಕಾವೇರಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಬಹುತೇಕ ಕುಸಿತ ಕಂಡಿದೆ. ಕೆಲವು ದಿನಗಳ ಹಿಂದೆ 17 ಅಡಿಗಳಷ್ಟು ಎತ್ತರಕ್ಕೆ ಹರಿಯುತ್ತಿದ್ದ ಕಾವೇರಿಯಲ್ಲಿ ಇದೀಗ 6 ಅಡಿಗಳಷ್ಟು ಮಾತ್ರ ಹರಿವು ಕಾಣಬಹುದು.

-----------------------------

ಕೊಡಗಿನಲ್ಲಿ ಸಾಧಾರಣ ಮಳೆ

ಕನ್ನಡಪ್ರಭ ವಾರ್ತೆ ಮಡಿಕೇರಿಜಿಲ್ಲೆಯಾದ್ಯಂತ ಮಂಗಳವಾರ ಸಾಧಾರಣ ಮಳೆಯಾಗಿದೆ. ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಹಲವು ಕಡೆಗಳಲ್ಲಿ ಬಿಡುವು ನೀಡಿ ಮಳೆ ಸುರಿಯಿತು.

ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 25.37 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 4.48 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 767.43 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 339.58 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 34.38 ಮಿ.ಮೀ, ವಿರಾಜಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 51.05 ಮಿ.ಮೀ, ಪೊನ್ನಂಪೇಟೆ ತಾಲೂಕಿನಲ್ಲಿ 24.34 ಮಿ.ಮೀ, ಸೋಮವಾರಪೇಟೆ ತಾಲೂಕಿನಲ್ಲಿ 12.40 ಮಿ.ಮೀ, ಕುಶಾಲನಗರ ತಾಲೂಕಿನಲ್ಲಿ 4.70 ಮಿ.ಮೀ ಮಳೆಯಾಗಿದೆ.ಹೋಬಳಿ ವಿವರ : ಮಡಿಕೇರಿ ಕಸಬಾ 48, ನಾಪೋಕ್ಲು 25.40, ಸಂಪಾಜೆ 26.50, ಭಾಗಮಂಡಲ 37.60, ವಿರಾಜಪೇಟೆ 58.60, ಅಮ್ಮತ್ತಿ 43.50, ಹುದಿಕೇರಿ 23.30, ಶ್ರೀಮಂಗಲ 19, ಪೊನ್ನಂಪೇಟೆ 40, ಬಾಳೆಲೆ 15.04, ಸೋಮವಾರಪೇಟೆ 7.60, ಶನಿವಾರಸಂತೆ 14, ಶಾಂತಳ್ಳಿ 17, ಕೊಡ್ಲಿಪೇಟೆ 11, ಕುಶಾಲನಗರ 4.40, ಸುಂಟಿಕೊಪ್ಪ 5 ಮಿ.ಮೀ.ಮಳೆಯಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುರ್ಚಿ ಕಿತ್ತಾಟ ರಾಜ್ಯದವರೇ ಬಗೆಹರಿಸಿಕೊಳ್ಳಬೇಕು: ಖರ್ಗೆ
ಸದೃಢ ಆರೋಗ್ಯಕ್ಕೆ ಹಲ್ಲು ಸದೃಢವಾಗಿರಲಿ