- ರಾಜ್ಯಮಟ್ಟದ ವಿಚಾರ ಸಂಕಿರಣ । 2027ರ ಹೊತ್ತಿಗೆ ದೇಶದಲ್ಲಿ ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ₹17 ಬಿಲಿಯನ್ ಹೂಡಿಕೆ ನಿರೀಕ್ಷೆ
ವಿಶ್ವವ್ಯಾಪಿ ಕೃತಕ ಬುದ್ಧಿಮತ್ತೆಯೇ ಈಗ ಬಹುಚರ್ಚಿತ ವಿಷಯವಾಗಿದೆ. ಕೃತಕ ಬುದ್ಧಿಮತ್ತೆಯ ಕ್ರಾಂತಿಯನ್ನು ಯಾರೂ ಅಲಕ್ಷಿಸುವಂತಿಲ್ಲ ಎಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯದ ರಿಜಿಸ್ಟ್ರಾರ್ ಡಾ. ಬಿ.ಇ.ರಂಗಸ್ವಾಮಿ ಅಭಿಪ್ರಾಯಪಟ್ಟರು.
ನಗರದ ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಹೈಟೆಕ್ ಎಜುಕೇಷನ್ನ ವಾಣಿಜ್ಯ ವಿಭಾಗ ಹಮ್ಮಿಕೊಂಡಿದ್ದ ಪ್ರಜ್ಞಾ 3.0 ಕೃತಕ ಬುದ್ಧಿಮತ್ತೆ ಉದ್ಭವ ಹಾಗೂ ಅವಕಾಶಗಳ ರೂಪಾಂತರ ವಿಷಯವಾಗಿ ವಿದ್ಯಾರ್ಥಿಗಳ ರಾಜ್ಯಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. 2027ರ ವೇಳೆಗೆ ದೇಶದ ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ₹17 ಬಿಲಿಯನ್ ಹೂಡಿಕೆ ಯೋಜನೆಗಳ ನಿರೀಕ್ಷೆ ಇದೆ ಎಂದರು.ಕೆಲ ವಿಜ್ಞಾನಿಗಳು 1956ರಲ್ಲೇ ಸಭೆ ಮಾಡಿ, ಯಂತ್ರಗಳೇ ಮಾನವರಂತೆ ಕಾರ್ಯಗೈಯ್ಯುವ ಕೃತಕ ಬುದ್ಧಿಮತ್ತೆಯ ಅನ್ವೇಷಣೆ ಬಗ್ಗೆ ಚರ್ಚೆ ಹುಟ್ಟು ಹಾಕಿದ್ದರು. ಈಗ ಆರೇಳು ದಶಕಗಳ ನಂತರ ಅದೆಲ್ಲವೂ ಅನುಷ್ಠಾನಕ್ಕೆ ಬರುತ್ತಿದೆ. ಪರಿಣಾಮ ಮಾನವ ಉದ್ಯೋಗಕ್ಕೆ ಸಂಚಕಾರ ಬರುತ್ತಿದೆಯೆಂಬ ಆತಂಕವಿದೆ. ಆದರೂ, ಅದನ್ನೇ ಬಳಸಿಕೊಂಡು, ಹೊಸ ಆವಿಷ್ಕಾರಗಳ ಉದ್ಯೋಗಗಳನ್ನು ಸೃಷ್ಟಿಸಿಕೊಳ್ಳುವ ಅವಕಾಶವೂ ಇದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜು ಅಧ್ಯಕ್ಷ ಅಥಣಿ ಎಸ್.ವೀರಣ್ಣ ಮಾತನಾಡಿ, ಮುಂಬರುವ ವರ್ಷದ ವೇಳೆಗೆ ಕೃತಕ ಬುದ್ಧಿಮತ್ತೆಯು ಶಿಕ್ಷಣದಲ್ಲೂ ಪ್ರಧಾನ ವಿಷಯವಾಗಬಹುದು. ದೇಶದ 140 ಕೋಟಿ ಜನಸಂಖ್ಯೆಯಲ್ಲಿ ಕೃತಕ ಬುದ್ಧಿಮತ್ತೆಯ ಕ್ಷೇತ್ರದ ತಜ್ಞ ಎಂಜಿನಿಯರ್ಗಳ ಸಂಖ್ಯೆ ಕಡಿಮೆ ಇದೆ. ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಅಲ್ಲದೇ, ಸಾಮಾನ್ಯ ಪದವಿಯಲ್ಲೂ ಕೃತಕ ಬುದ್ಧಿಮತ್ತೆಯ ಶಿಕ್ಷಣ ಅಗತ್ಯವಿದೆ ಎಂದರು.
ಪ್ರಾಚಾರ್ಯ ಡಾ. ಬಿ.ವೀರಪ್ಪ, ಬೋಧಕ-ಬೋಧಕೇತರ ಸಿಬ್ಬಂದಿ ಇದ್ದರು. ಎಂ.ಕೆ.ಆದಿತ್ಯ, ವಿ.ಎನ್. ಸಂಜನಾ ಕಾರ್ಯಕ್ರಮ ನಿರೂಪಣೆ ಮಾಡಿದರು. ಎನ್.ಸಿ.ಪ್ರಜ್ಞಾ ಪ್ರಾರ್ಥಿಸಿದರು. ಮೆಹತಾಜ್, ಉಜ್ಮಾ ನಾಜ್ ಅತಿಥಿಗಳ ಪರಿಚಯ ಮಾಡಿದರು.
- - -
- ಡಾ. ಬಿ.ಇ.ರಂಗಸ್ವಾಮಿ, ರಿಜಿಸ್ಟ್ರಾರ್, ಬೆಳಗಾವಿ ವಿಟಿಯು
ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಹೈಟೆಕ್ ಎಜುಕೇಷನ್ನಲ್ಲಿ ಪ್ರಜ್ಞಾ 3.0 ಕೃತಕ ಬುದ್ಧಿಮತ್ತೆ ಉದ್ಭವ ಹಾಗೂ ಅವಕಾಶಗಳ ರೂಪಾಂತರ ವಿಷಯವಾಗಿ ವಿದ್ಯಾರ್ಥಿಗಳ ರಾಜ್ಯಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಅಥಣಿ ಎಸ್.ವೀರಣ್ಣ, ಡಾ.ಬಿ.ಇ.ರಂಗಸ್ವಾಮಿ ಉದ್ಘಾಟಿಸಿದರು.