ನಿವೃತ್ತ ನೌಕರರ ಹಿತರಕ್ಷಣೆಗೆ ಸಂಘ ಸದಾ ಸಿದ್ಧ

KannadaprabhaNewsNetwork |  
Published : Jul 06, 2025, 01:48 AM IST
5ಎಚ್‌ಯುಬಿ23ನವಲಗುಂದ ಸರಕಾರಿ ನೌಕರರ ಭವನದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದಿಂದ ಜಿಲ್ಲಾಧ್ಯಕ್ಷ ಶಂಭು ಪಾಟೀಲ್ ನಲವಡಿಯವರನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಸಮಾಜಕ್ಕೆ ಹಾಗೂ ಯುವಜನತೆಗೆ ಸೂಕ್ತ ಮಾರ್ಗದರ್ಶನ ನೀಡುವುದರ ಜತೆಗೆ ತಮ್ಮ ಅನುಭವಗಳನ್ನು ಸಮಾಜದ ಅಭಿವೃದ್ಧಿಗಾಗಿ ಬಳಸುತ್ತಿರುವುದರಿಂದ ಜನರ ಮೆಚ್ಚುಗೆಗೂ ಪಾತ್ರ

ನವಲಗುಂದ: ಸಂಘದ ಬೆಳವಣಿಗೆಗೆ ಎಲ್ಲ ಸದಸ್ಯರ ಸಹಕಾರ ಅಗತ್ಯವಾಗಿದೆ. ಸಂಘ ಹಲವಾರು ರಚನಾತ್ಮಕ ಚಟುವಟಿಕೆ ಹಮ್ಮಿಕೊಂಡು ಕ್ರಿಯಾಶೀಲವಾಗಿದೆ. ಎಲ್ಲ ಸದಸ್ಯರು ಸಂಘದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಶಂಭು ಪಾಟೀಲ್ ನಲವಡಿ ಹೇಳಿದರು.

ಪಟ್ಟಣದ ಸರ್ಕಾರಿ ನೌಕರರ ಭವನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಸಭೆ ಉದ್ದೇಶಿಸಿ ಮಾತನಾಡಿದರು.

ಸಮಾಜಕ್ಕೆ ಹಾಗೂ ಯುವಜನತೆಗೆ ಸೂಕ್ತ ಮಾರ್ಗದರ್ಶನ ನೀಡುವುದರ ಜತೆಗೆ ತಮ್ಮ ಅನುಭವಗಳನ್ನು ಸಮಾಜದ ಅಭಿವೃದ್ಧಿಗಾಗಿ ಬಳಸುತ್ತಿರುವುದರಿಂದ ಜನರ ಮೆಚ್ಚುಗೆಗೂ ಪಾತ್ರವಾಗಿದೆ.

ನಿವೃತ್ತ ಸರ್ಕಾರಿ ನೌಕರರ ಸಂಘಕ್ಕೆ ಕಚೇರಿ ಅವಶ್ಯಕತೆ ಇದ್ದು, ಇದಕ್ಕಾಗಿ ಜಾಗ ಮಂಜೂರಾತಿಗಾಗಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗುತ್ತದೆ. ನಿವೃತ್ತ ನೌಕರರ ಹಿತರಕ್ಷಣೆಗಾಗಿ ಸಂಘ ಸದಾ ಸಿದ್ಧ ಎಂದರು.ಇದೆ ವೇಳೆ ಅವರನ್ನು ಸನ್ಮಾನಿಸಲಾಯಿತು.

ತಾಲೂಕಾಧ್ಯಕ್ಷ ಕಲ್ಲಯ್ಯ ಹೊಸಮನಿ ಮಾತನಾಡಿ, ಸಂಘದ ಎಲ್ಲ ಚಟುವಟಿಕೆಗಳು ಪಾರದರ್ಶಕವಾಗಿದ್ದು, ಪದಾಧಿಕಾರಿಗಳು ಪ್ರಾಮಾಣಿಕವಾಗಿ ಹಾಗೂ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಿ ಸಂಘದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇವೆ ಎಂದರು.

ಆರಂಭದಲ್ಲಿ ಮೃತಪಟ್ಟಿರುವ ನಿವೃತ್ತ ನೌಕರರಿಗೆ ಮೌನಾಚರಣೆ ಮೂಲಕ ಸಂತಾಪ ಸೂಚಿಸಲಾಯಿತು.

ಸಂಘದ ಗೌರವ ಅಧ್ಯಕ್ಷ ಎ.ಎಂ. ನದಾಫ್, ಪಿ.ಎಸ್. ಹಿರೇಮಠ, ಉಪಾಧ್ಯಕ್ಷ ಆರ್.ಬಿ. ಬಾಳನಗೌಡ, ಕಾರ್ಯದರ್ಶಿ ಎಸ್.ವಿ. ಕುಲಕರ್ಣಿ, ಖಜಾಂಚಿ ಎಸ್.ಆರ್. ಬಡೇಕಾನ ಸೇರಿ ಸಂಘದ ಮಹಿಳಾ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹರಿಹರ ಪ್ರಮುಖ ರಸ್ತೆಗಳಲ್ಲಿ ಬೀದಿದೀಪ, ಸಿಸಿ ಕ್ಯಾಮೆರಾ ಅಳವಡಿಸಿ
ಪ್ರೀತಿಸುವಂತೆ ಪೊಲೀಸ್‌ ಇನ್‌ಸ್ಪೆಕ್ಟರ್‌ಬೆನ್ನತ್ತಿದ್ದ ಮಹಿಳೆ ಈಗ ಜೈಲು ಪಾಲು