ಹೊಸಕೋಟೆ: ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘ ಕಳೆದ 15ವರ್ಷಗಳಿಂದ ಸಾಮಾಜಿಕ ಕಳಕಳಿ ಜೊತೆಗೆ ಸಮುದಾಯದ ಮಕ್ಕಳ ಶೈಕ್ಷಣಿಕ ಪ್ರಗತಿಗೆಪ್ರತಿಭಾ ಪುರಸ್ಕಾರವನ್ನು ಶರಣ ಮೇಳದ ಹೆಸರಲ್ಲಿ ಆಚರಿಸುತ್ತಿದ್ದೇವೆ ಎಂದು ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಡಿ.ಎಸ್.ರಾಜ್ ಕುಮಾರ್ ತಿಳಿಸಿದರು.
ನಂದಗುಡಿ ಗ್ರಾಪಂ ಸದಸ್ಯ ವೀರರಾಜು ಮಾತನಾಡಿ, ಪೋಷಕರು ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಕೊಡುವ ಮೂಲಕ ಸಮಾಜದ ಸತ್ಪ್ರಜೆಗಳಾಗಿ ರೂಪುಗೊಳ್ಳುವಂತೆ ಮಾಡಬೇಕು. ವೀರಶೈವ ಸಮುದಾಯದಲ್ಲಿ ಎಲೆಮರೆ ಕಾಯಿಯಂತೆ ಸಮುದಾಯದ ಅಭಿವೃದ್ಧಿಗೆ ಕೆಲಸ ಮಾಡುವವರು ಸಾಕಷ್ಟು ಜನರಿದ್ದಾರೆ. ಡಿಎಸ್.ರಾಜ್ಕುಮಾರ್ ಅವರು ಸಹ ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರ ಮಕ್ಕಳ ಶೈಕ್ಷಣಿಕ ಪ್ರಗತಿ ಜೊತೆಗೆ ಹಲವಾರು ರೀತಿಯಲ್ಲಿ ಸಮಾಜದ ಅಭಿವೃದ್ಧಿಗೆ ನಿರಂತರ ಶ್ರಮಿಸುತ್ತಿದ್ದಾರೆ. ಆದ್ದರಿಂದ ಸಮುದಾಯ ಸಂಘಟಿತರಾಗಿ ಪರಸ್ಪರ ಅಭಿವೃದ್ಧಿ ಹೊಂದಬೇಕು ಎಂದರು.
ನಗರಸಭೆ ಸದಸ್ಯೆ ಗಾಯತ್ರಿ ವಿಜಯ್ ಕುಮಾರ್, ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಉಪಾಧ್ಯಕ್ಷ ನಾಗರಾಜ್, ಕಾರ್ಯದರ್ಶಿ ಕುಮಾರ್, ಸಂಘದ ಹಿರಿಯ ಸದಸ್ಯರಾದ ಚಂದ್ರಶೇಖರ್ ಆರಾದ್ಯ, ಮಲ್ಲೆಶ್, ಬನಹಳ್ಳಿ ಶಿವಣ್ಣ, ತಾವರೆಕೆರೆ ನಂದಕುಮಾರ್, ಜನಪದರು ಶಿವಣ್ಣ, ಹಿರೇಮಠ್ ಸೇರಿದಂತೆ ಸಂಘದ ಸದಸ್ಯರು ಹಾಜರಿದ್ದರು.ಫೋಟೋ: 1 ಹೆಚ್ಎಸ್ಕೆ 4
ಹೊಸಕೋಟೆಯಲ್ಲಿ ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಮ್ಮಿಕೊಂಡಿದ್ದ ಶರಣ ಮೇಳದಲ್ಲಿ ಪ್ರತಿಭಾ ವಿದ್ಯಾರ್ಥಿಗಳಿಗೆ ಸಂಘದ ಅಧ್ಯಕ್ಷ ಡಿ.ಎಸ್.ರಾಜ್ಕುಮಾರ್ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿದರು.