- ಭಾರತದ ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವ ಉದ್ದೇಶದಿಂದ ಮಾಡಿದ ಕೃತ್ಯ: ಜೋಶಿ
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರವನ್ನು ಪ್ರತಿಪಕ್ಷಗಳು ಅನಗತ್ಯವಾಗಿ ರಾಜಕೀಕರಣಗೊಳಿಸುತ್ತಿವೆ. ರಾಜಕೀಯ ಮಾಡಬಾರದು. ಕಳೆದೆರಡು ದಿನಗಳಿಂದ ಸದನ ನಡೆಯಲು ಬಿಡುತ್ತಿಲ್ಲ. ಹಿಂದಿನ ಇಂತಹ ಘಟನೆಗಳಿಗೆ ಹೋಲಿಸುವುದು ಸರಿಯಲ್ಲ. ಪ್ರಧಾನಿ ಮೋದಿ ಸರ್ಕಾರ ಮುಖ್ಯ ಉದ್ದೇಶ ಭಯೋತ್ಪಾದನೆ ನಿಗ್ರಹ ಮಾಡುವುದಾಗಿದೆ. ಈ ಹಿಂದೆಯೂ ಇಂತಹ ಘಟನೆಗಳು ನಡೆದಿವೆ. ಆಗ ಪಿಸ್ತೂಲ್ ಹಾಗೂ ಡ್ರ್ಯಾಗರ್ ತೆಗೆದುಕೊಂಡು ಸದನಕ್ಕೆ ಬಂದಿದ್ದರು. ಇದರಲ್ಲಿ ರಾಜಕೀಯ ಮಾಡಿಲ್ಲ ಎಂದರು.
ಇಂತಹ ವಿಚಾರಗಳನ್ನು ಪಕ್ಷ ಸಂವೇದನಶೀಲವಾಗಿ ತೆಗೆದುಕೊಂಡಿದೆ. ಉನ್ನತ ತನಿಖೆ ಮಾಡಲು ಸ್ಪೀಕರ್ ಆದೇಶಿಸಿದ್ದು, ಮುಂದೆ ಇಂತಹ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು ಎಂದರು.ಹೊಸ ಸಂಸತ್ ಭವನದಲ್ಲಿ ಭಿತ್ತಿ ಪತ್ರ ತರಬಾರದು. ಬಾವಿಗಿಳಿಯಬಾರದು ಎಂಬ ಕಾಯ್ದೆ ಜಾರಿಗೆ ತರಲಾಗಿದೆ. ಆದರೂ ಭಿತ್ತಿಪತ್ರ ತಂದರು. ಸಂಸದರ ಅನುಶಾಸನ ರಹಿತವಾದ ವರ್ತನೆಗೆ ಅವರನ್ನು ಅಮಾನತ್ತು ಮಾಡಲಾಗಿದೆ ಎಂದು ತಿಳಿಸಿದರು.
ಬೆಳಗಾವಿ ಜಿಲ್ಲೆಯ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಘಟನೆಗೆ ಸಂಬಂಧಪಟ್ಟಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ದೇಶದಲ್ಲಿ ಕಾಂಗ್ರೆಸ್ ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ನಾಗರಿಕ ಸಮಾಜ ತಲೆ ತಗ್ಗಿಸುವ ಪ್ರಕರಣಗಳು ನಡೆಯುತ್ತಲೇ ಇವೆ. ಇದಕ್ಕೆ ಬೆಳಗಾವಿ ಜಿಲ್ಲೆಯ ಹೊಸ ವಂಟಮೂರಿ ಗ್ರಾಮದ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣವೇ ಜ್ವಲಂತ ಉದಾಹರಣೆ. ಈ ಹಿಂದೆಯೂ ರಾಜಸ್ಥಾನದಲ್ಲಿಯೂ ಇಂತಹದೇ ಘಟನೆಗಳು ನಡೆಯುತ್ತಿದ್ದವು. ಭ್ರಷ್ಟಾಚಾರ, ಅನೈತಿಕ ಚಟುವಟಿಕೆ, ಅಪರಾಧ ಜಗತ್ತಿನೊಂದಿಗೆ ಕಾಂಗ್ರೆಸ್ ಅವಿನಾಭಾವ ಸಂಬಂಧ ಹೊಂದಿದೆ ಎಂದು ವಾಗ್ದಾಳಿ ನಡೆಸಿದರು.
ಟಿಪ್ಪು ಹೆಸರಿಗೆ ಕಿಡಿ:
25 ಸ್ಥಾನದಲ್ಲಿ ಬಿಜೆಪಿ ಗೆಲವು ನಿಶ್ಚಿತ
ನಾಳೆ ರಾಜ್ಯಾಧ್ಯಕ್ಷರ ಭೇಟಿ
ಕಾಂಗ್ರೆಸ್ ಔತಣಕೂಟದಲ್ಲಿ ಬಿಜೆಪಿಯ ಮೂವರು ಶಾಸಕರು ಪಾಲ್ಗೊಂಡಿದ್ದರ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಕಾಂಗ್ರೆಸ್ ಪರಿಸ್ಥಿತಿ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಠಿಣವಾಗುತ್ತಿದೆ. ಅವರಲ್ಲೇ ಸಿಕ್ಕಾಪಟ್ಟೆ ಆಂತರಿಕ ಕಚ್ಚಾಟ ನಡೆದಿದೆ. ಈಗ ಅಲ್ಲಿ ಇದ್ದವರಿಗೆ ಸಚಿವ ಸ್ಥಾನ ಕೊಡುವುದಕ್ಕೆ ಆಗುತ್ತಿಲ್ಲ. ನನಗೆ ಮುಖ್ಯಮಂತ್ರಿ ಮಾಡಿಲ್ಲ. ಸಚಿವಗಿರಿ ನೀಡಿಲ್ಲ. ನಿಗಮ ಮಂಡಳಿ ಕೊಟ್ಟಿಲ್ಲ ಎಂದು ಜಗಳ ಶುರುವಾಗಿದೆ. ಇದರಿಂದಾಗಿ ರಾಜ್ಯ ಸರ್ಕಾರದ ಆಡಳಿತ ಯಂತ್ರ ಸಂಪೂರ್ಣ ಕುಸಿದು ಹೋಗಿದೆ. ಇನ್ನು ಬೇರೆ ಪಕ್ಷದಲ್ಲಿರುವವರನ್ನು ಕರೆದುಕೊಂಡು ಏನು ಮಾಡುತ್ತಾರೋ ಎಂದು ಪ್ರಶ್ನಿಸಿದರು.