ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಮಂಗಳವಾರ ಮಾನವಿಕ ವಿಭಾಗಗಳು ಹಮ್ಮಿಕೊಂಡ ‘ರಾಷ್ಟ್ರೀಯ ಸಂವಿಧಾನ ದಿನ’ ಆಚರಣೆಯಲ್ಲಿ ಅವರು ಮಾತನಾಡಿದರು. ಸಂವಿಧಾನ ಕುರಿತು ಅದರ ರಚನೆ ಸಂದರ್ಭದಲ್ಲಿಯೇ ಆರೋಪಗಳು ಬಂದಿದ್ದವು. ಆದರೆ, ಅದಕ್ಕೆ ರಚನಾ ಸಮಿತಿ ವಿಸ್ತೃತವಾಗಿ ಉತ್ತರಿಸಿತ್ತು ಎಂದರು.
ಸಂವಿಧಾನಗಳ ಸರಾಸರಿ ಜೀವಿತಾವಧಿ 17 ವರ್ಷವಾಗಿದೆ. ಆದರೆ, 76ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಭಾರತದ ಸಂವಿಧಾನ ಜಗತ್ತಿನ ಅತಿದೊಡ್ಡ ಮಾತ್ರವಲ್ಲ ಅತ್ಯುತ್ತಮ ಸಂವಿಧಾನ. 106 ತಿದ್ದುಪಡಿ ಆಗಿದ್ದರೂ ಸ್ಥಿರವಾಗಿದೆ ಎಂದರು.ಥಾಮಸ್ ಗಿನ್ಸ್ ಬರ್ಗ್ ನಡೆಸಿದ ಅಧ್ಯಯನದ ಪ್ರಕಾರ ಸಂವಿಧಾನದ ಸರಾಸರಿ ಜೀವಿತಾವಧಿ 17 ವರ್ಷ. ವಿಶ್ವದ 798 ಸಂವಿಧಾನ ವ್ಯವಸ್ಥೆಯನ್ನು ಅವರು ಅಧ್ಯಯನ ನಡೆಸಿದ್ದು, ಈ ಪೈಕಿ 192 ಮಾತ್ರ ಇನ್ನೂ ಅನುಷ್ಠಾನದಲ್ಲಿವೆ ಎಂದರು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ನಮ್ಮ ಆಲೋಚನಾ ಕ್ರಮ ಬದಲಾಗಬೇಕಾಗಿದೆ. ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗವನ್ನು ಸಮಾನಂತರವಾಗಿ ಕಾಣಬೇಕು. ಪ್ರಸ್ತುತ ಸಮಾಜದಲ್ಲಿ ಔದ್ಯೋಗಿಕ ಕೊರತೆಗಿಂತ ಹೆಚ್ಚಾಗಿ, ಬೇಡಿಕೆ ಅನುಗುಣವಾಗಿ ವಿಷಯ ಆಯ್ಕೆಯ ಸಮತೋಲನ ಆಗುತ್ತಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.
ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಡಿ, ಕುಲಸಚಿವ (ಶೈಕ್ಷಣಿಕ) ಡಾ.ಟಿ.ಕೆ. ರವೀಂದ್ರನ್ ಇದ್ದರು. ವಿದ್ಯಾರ್ಥಿನಿ ಅನುಷಾ ಮತ್ತು ಶ್ರೀವಲ್ಲಿ ಕಾರ್ಯಕ್ರಮ ನಿರೂಪಿಸಿದರು. ದಿಶಾ ಸ್ವಾಗತಿಸಿದರು. ರಕ್ಷಾ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು. ತೇಜಸ್ವಿನಿ ವಂದಿಸಿದರು.