ಬಳ್ಳಾರಿ ಪ್ರಕರಣ ಸಿಬಿಐ ತನಿಖೆಗೆ ಒಪ್ಪಿಸಿ: ರೇಣು ಆಗ್ರಹ

KannadaprabhaNewsNetwork |  
Published : Jan 07, 2026, 01:45 AM IST
6ಕೆಡಿವಿಜಿ7-ದಾವಣಗೆರೆಯಲ್ಲಿ ಮಂಗಳವಾರ ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ಸಿಎಂ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ನಾಯಕ, ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಸುದೀರ್ಘ ಅವಧಿ ಅಧಿಕಾರ ನಡೆಸಿದ ದಾಖಲೆ ಮುರಿದಿದ್ದಲ್ಲ. ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಿದ್ದೇ ಸಿದ್ದರಾಮಯ್ಯ ಸರ್ಕಾರದ ಸಾಧನೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದ್ದಾರೆ.

ದಾವಣಗೆರೆ: ಸಿಎಂ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ನಾಯಕ, ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಸುದೀರ್ಘ ಅವಧಿ ಅಧಿಕಾರ ನಡೆಸಿದ ದಾಖಲೆ ಮುರಿದಿದ್ದಲ್ಲ. ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಿದ್ದೇ ಸಿದ್ದರಾಮಯ್ಯ ಸರ್ಕಾರದ ಸಾಧನೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಹತ್ಯೆಗೆ ಯತ್ನಿಸಲಾಗಿದೆ. ಬಳ್ಳಾರಿ ಅಭಿವೃದ್ಧಿಗೆ ಜನಾರ್ದನ ರೆಡ್ಡಿ, ಶ್ರೀರಾಮುಲು ಕೊಡುಗೆ ಅಪಾರವಾಗಿದೆ. ಆದರೆ, ಜನಾರ್ದನ ರೆಡ್ಡಿ, ಶ್ರೀರಾಮುಲು ಮೇಲೆ ಪೊಲೀಸರು ಸುಮೋಟೋ ಕೇಸ್ ಮಾಡಿದ್ದಾರೆ. ಕಾಂಗ್ರೆಸ್‌ನ ಮೃತ ಕಾರ್ಯಕರ್ತ ರಾಜಶೇಖರ ರೆಡ್ಡಿ ಶವ ಪರೀಕ್ಷೆಯನ್ನು 2 ಸಲ ಮಾಡಿಸಲಾಗಿದೆ. ಶಾಸಕ ನಾ.ರ. ಭರತ್ ರೆಡ್ಡಿ, ಸತೀಶ ರೆಡ್ಡಿ ಹಾಗೂ ಬೆಂಬಲಿಗರ ಮೇಲೆ ಯಾಕೆ ಇದೇ ಬಳ್ಳಾರಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿಲ್ಲ ಎಂದು ಪ್ರಶ್ನಿಸಿದರು.

ಗಲಾಟೆಯಲ್ಲಿ ಅಮಾಯಕ ಕಾಂಗ್ರೆಸ್ ಕಾರ್ಯಕರ್ತನ ಜೀವ ಬಲಿಯಾಗಿದೆ. ಸಚಿವ ಜಮೀರ್ ಅಹಮ್ಮದ್ ಮೃತನ ಮನೆಗೆ ಹೋಗಿ ₹25 ಲಕ್ಷ ಪರಿಹಾರ ಕೊಟ್ಟು, ಮನೆ ಕಟ್ಟಿ ಕೊಡಿ ಅಂದ ಮಾತ್ರಕ್ಕೆ ಮೃತಪಟ್ಟ ಮನೆಯ ಮಗ ವಾಪಸ್‌ ಬರುತ್ತಾನಾ? ಸಚಿವ ಜಮೀರ್ ಅಹಮ್ಮದ್‌ಗೆ ನಿಜವಾದ ಕಾಳಜಿ ಇದ್ದರೆ ಇಡೀ ಪ್ರಕರಣದ ಪಾರದರ್ಶಕ ತನಿಖೆಗೆ ಒತ್ತಾಯಿಸಬೇಕಾಗಿತ್ತು ಎಂದರು.

ಬಳ್ಳಾರಿ ನೂತನ ಎಸ್‌ಪಿ ಅವರನ್ನು ಅಮಾನತುಪಡಿಸಿದ್ದು ಸರಿಯಲ್ಲ. ಭರತ್ ರೆಡ್ಡಿಯನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕು. ಇಡೀ ಪ್ರಕರಣ‍ನ್ನು ಮುಚ್ಚಿ ಹಾಕಲು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ. ಸಿಐಡಿ ತನಿಖೆ ಬಗ್ಗೆ ನಮಗೆ ನಂಬಿಕೆ ಇಲ್ಲ. ಬಳ್ಳಾರಿ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಮುಖಂಡರಾದ ಅರಕೆರೆ ನಾಗರಾಜ, ಜೆ.ಕೆ.ಸುರೇಶ, ಪ್ರವೀಣ ಜಾಧವ್, ರಾಜು ವೀರಣ್ಣ, ಅಜಯಕುಮಾರ, ಪಂಜು ಪೈಲ್ವಾನ್, ರವಿಗೌಡ, ಕೆ.ಎನ್.ವೆಂಕಟೇಶ ಇತರರು ಇದ್ದರು.

- - -

-6ಕೆಡಿವಿಜಿ7:

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ