ಬಂಟ್ವಾಳ: ಸ್ನೇಹಿತರಿಬ್ಬರ ಹಳೆಯ ದ್ವೇಷಕ್ಕೆ ದ್ವಿಚಕ್ರ ವಾಹನವೊಂದು ಸುಟ್ಟು ಕರಕಲಾದ ಘಟನೆ ತಾಲೂಕಿನ ಕುಮ್ಡೇಲು ಎಂಬಲ್ಲಿ ನಡೆದಿದೆ.
ಘಟನೆ ವಿವರ:
ಅಮ್ಮುಂಜೆ ಪಾಂಡೀಲು ನಿವಾಸಿ ಚಂದ್ರಹಾಸ ಎಂಬವರು ಶಬರಿಮಲೆಗೆ ಹೋಗುವ ವೇಳೆ ಸ್ನೇಹಿತ ಕುಮ್ಡೆಲು ನಿವಾಸಿ ಸುಮಂತ್ ಅವರ ಮನೆಯ ಪಕ್ಕ ಬೈಕ್ ನಿಲ್ಲಿಸಿ ಕೀಯನ್ನು ಅವರಲ್ಲಿ ನೀಡಿ ಹೋಗಿದ್ದರು. ಈ ಮಧ್ಯೆ ಸುಮಂತ್ ಅವರು ಒಂದು ಬಾರಿ ಬೈಕನ್ನು ಬಳಕೆ ಮಾಡಿ ವಾಪಸ್ ಅದೇ ಜಾಗದಲ್ಲಿ ತಂದು ನಿಲ್ಲಿಸಿದ್ದರು.ಸುಮಂತ ಸಹೋದರ ಸುಜಿತ್ ಹಾಗೂ ಆರೋಪಿ ನಿತೇಶ್ ಅವರಿಗೆ ಕೆಲ ದಿನಗಳ ಹಿಂದೆ ಗಲಾಟೆ ನಡೆದಿದ್ದು, ಈ ಬಗ್ಗೆ ಮುಸುಕಿನ ಗುದ್ದಾಟ ನಡೆಯುತ್ತಿತ್ತು. ಸುಮಂತ ಬಳಕೆ ಮಾಡಿದ ಬೈಕ್ ಇವನದ್ದೇ ಎಂದು ಭಾವಿಸಿ ಆತನ ಮೇಲಿನ ಕೋಪದಿಂದ ಮನೆಯ ಸಮೀಪ ನಿಲ್ಲಿಸಲಾಗಿದ್ದ ಬೈಕನ್ನು ಸ್ವಲ್ಪ ದೂರ ದೂಡಿಕೊಂಡು ಹೋಗಿ ಬೆಂಕಿ ಹಚ್ಚಿದ್ದ. ಈತನ ಕೃತ್ಯವನ್ನು ನೋಡಿದ್ದ ಸ್ಥಳೀಯರು ಮಾಹಿತಿ ನೀಡಿದ್ದಾರೆ.