ಧರ್ಮ ರಕ್ಷಣೆಗಾಗಿ ಅಗ್ನಿಬನ್ನಿರಾಯರ ಜನನ

KannadaprabhaNewsNetwork |  
Published : Mar 30, 2025, 03:01 AM IST
ಪೋಟೋ, 28ಎಚ್‌ಎಸ್‌ಡಿ5: ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾದ ಶ್ರೀ ಅಗ್ನಿಬನ್ನಿರಾಯರ ಜಯಂತಿ ಕಾರ್ಯಕ್ರಮದಲ್ಲಿ  ಅಗ್ನಿಬನ್ನಿರಾಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಉಪವಿಭಾಗಾಧಿಕಾರಿ ಮಹಿಬೂಬ್ ಜಿಲಾನ್ ಮಾತಾಡಿದರು | Kannada Prabha

ಸಾರಾಂಶ

ಚಿತ್ರದುರ್ಗ: ಅಧರ್ಮ, ಅನೀತಿ, ಅರಾಜಕತೆ, ಅತ್ಯಾಚಾರಗಳು ಭೂಮಿಯ ಮೇಲೆ ಹೆಚ್ಚಾದಾಗ ದೇವರು ಅವತಾರ ಎತ್ತಿ, ಇವುಗಳಿಗೆ ಅಂತ್ಯಹಾಡಿ, ಧರ್ಮ ರಕ್ಷಣೆ ಮಾಡುತ್ತಾನೆ ಎಂದು ಹಿಂದು ಧರ್ಮ ಗ್ರಂಥಗಳಲ್ಲಿ ಉಲ್ಲೇಖಿಸಲಾಗಿದೆ. ಅಗ್ನಿಬನ್ನಿರಾಯರು ಸಹ ಧರ್ಮ ರಕ್ಷಣೆಗಾಗಿ ಜನಿಸಿದವರು ಎಂದು ಉಪವಿಭಾಗಾಧಿಕಾರಿ ಮಹಿಬೂಬ್ ಜಿಲಾನ್ ತಿಳಿಸಿದರು.

ಚಿತ್ರದುರ್ಗ: ಅಧರ್ಮ, ಅನೀತಿ, ಅರಾಜಕತೆ, ಅತ್ಯಾಚಾರಗಳು ಭೂಮಿಯ ಮೇಲೆ ಹೆಚ್ಚಾದಾಗ ದೇವರು ಅವತಾರ ಎತ್ತಿ, ಇವುಗಳಿಗೆ ಅಂತ್ಯಹಾಡಿ, ಧರ್ಮ ರಕ್ಷಣೆ ಮಾಡುತ್ತಾನೆ ಎಂದು ಹಿಂದು ಧರ್ಮ ಗ್ರಂಥಗಳಲ್ಲಿ ಉಲ್ಲೇಖಿಸಲಾಗಿದೆ. ಅಗ್ನಿಬನ್ನಿರಾಯರು ಸಹ ಧರ್ಮ ರಕ್ಷಣೆಗಾಗಿ ಜನಿಸಿದವರು ಎಂದು ಉಪವಿಭಾಗಾಧಿಕಾರಿ ಮಹಿಬೂಬ್ ಜಿಲಾನ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಚಿತ್ರದುರ್ಗ ನಗರಸಭೆ ಸಹಯೋಗದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾದ ಶ್ರೀ ಅಗ್ನಿಬನ್ನಿರಾಯರ ಜಯಂತಿ ಕಾರ್ಯಕ್ರಮದಲ್ಲಿ, ಅಗ್ನಿಬನ್ನಿರಾಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ವೇದಗಳು ಹಾಗೂ 18 ಪುರಾಣಗಳನ್ನು ಓದಿದಾಗ, ನಮಗೆ ದೇವರ ಅವತಾರ ಕುರಿತು ಸ್ಪಷ್ಟ ಚಿತ್ರಣ ದೊರೆಯುತ್ತದೆ. ದೇವಿಪುರಾಣ, ಶಿವಪುರಾಣ, ವಿಷ್ಣುಪುರಾಣಗಳಂತೆ, ಅಗ್ನಿಬನ್ನಿರಾಯ ಪುರಾಣವು ಅತಿ ಮುಖ್ಯವಾಗಿದೆ. ಅರಾಜಕತೆಯನ್ನು ಉಂಟುಮಾಡುವ ರಾಕ್ಷಸರ ವಧೆ ಮಾಡಿ ಅಗ್ನಿಬನ್ನಿರಾಯರು ಸಮಾಜದಲ್ಲಿ ಶಾಂತಿ ನೆಲಸುವಂತೆ ಮಾಡಿದರು ಎಂದು ಹೇಳಿದರು.

ಉಪನ್ಯಾಸಕ ಜಿ.ಎನ್.ಯಶೋಧರ್ ಮಾತನಾಡಿ, ಅಗ್ನಿವಂಶ ಕ್ಷತ್ರಿಯರ ಕುಲದೈವ ಅಥವಾ ಮೂಲಪುರುಷ ಎಂದು ಅಗ್ನಿಬನ್ನಿರಾಯರನ್ನು ಪೂಜಿಸಲಾಗುತ್ತದೆ. ಶಿವನ ಮೂರನೆ ಕಣ್ಣಿನಿಂದ ಜನಿಸಿದ ಅಗ್ನಿಬನ್ನಿರಾಯರು ಭೂ ಲೋಕದಲ್ಲಿನ ಅರಾಜಕತೆ ಕೊನೆಗಾಣಿಸಿದರು. ಇಂದ್ರನ ಮಗಳು ಮಂತ್ರಮಲೆಯನ್ನು ಮದುವೆಯಾದ ಅಗ್ನಿಬನ್ನಿರಾಯರ ಮುಂದಿನ ಸಂತತಿಯೇ ಅಗ್ನಿವಂಶ ಕ್ಷತ್ರಿಯರಾಗಿದ್ದಾರೆ ಎಂದು ಪುರಾಣಗಳಲ್ಲಿ ತಿಳಿಸಲಾಗಿದೆ. ಇವರನ್ನು ತಿಗಳ ಜನಾಂಗದವರು ಎಂದು ಸಹ ಕರೆಯಲಾಗುತ್ತದೆ ಎಂದು ತಿಳಿಸಿದರು.

ತುಮಕೂರು, ಮಧುಗಿರಿ, ಕೋಲಾರ, ಮುಳಬಾಗಿಲು, ಬೆಂಗಳೂರು ನಗರದಲ್ಲಿ ತಿಗಳರ ಜನಸಂಖ್ಯೆ ಹೆಚ್ಚಾಗಿದೆ. ಬುಡಕಟ್ಟು ಸಂಪ್ರದಾಯಗಳನ್ನು ಹೊಂದಿರುವ ಇವರ ಮೂಲ ತಮಿಳುನಾಡು. ಮೈಸೂರು ರಾಜ್ಯದ ಆಡಳಿತ ನಡೆಸುತ್ತಿದ್ದ ಹೈದರಾಲಿಯು, ತಮಿಳುನಾಡಿನಿಂದ ಕೃಷಿ ಹಾಗೂ ತೊಟಗಾರಿಕೆಯಲ್ಲಿ ಅನುಭವ ಹೊಂದಿದ್ದ ತಿಗಳರನ್ನು ಕರೆತಂದು ಬೆಂಗಳೂರಿನಲ್ಲಿ ಲಾಲ್‍ಬಾಗ್ ಉದ್ಯಾನವನ್ನು ನಿರ್ಮಿಸಿದರು ಎಂದು ಇತಿಹಾಸ ತಿಳಿಸುತ್ತದೆ. ಬೆಂಗಳೂರಿನಲ್ಲಿ ನಡೆಯುವ ಕರಗ ಉತ್ಸವವು ತಿಗಳರ ಸಾಂಸ್ಕೃತಿಕ ವೈವಿದ್ಯತೆಯನ್ನು ತೋರಿಸುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ಮಾಜಿ ಶಾಸಕ ಉಮಾಪತಿ ಸೇರಿದಂತೆ ಗಣ್ಯರು ಅಗ್ನಿಬನ್ನಿರಾಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ನಗರಸಭೆ ಸದಸ್ಯ ಭಾಷಾ, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂಧನ್, ಪೌರಾಯುಕ್ತೆ ಎಂ.ರೇಣುಕಾ, ಜಿ.ಪಂ.ಮಾಜಿ ಸದಸ್ಯ ಪಾಪಣ್ಣ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಪಾಲಿನ ಶ್ರೀರಾಮ : ಶಾಸಕ ಪ್ರದೀಪ್‌ ಈಶ್ವರ್‌
ಜಿ ರಾಮ್‌ ಜಿ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌ ಪಡೆ - ದುಡಿವ ಕೈಗಳ ಅನ್ನ ಕಸಿವ ಕಾಯ್ದೆ