ಪತ್ರಿಕಾ ರಂಗ ಜವಾಬ್ದಾರಿ ಹೊಂದಿರುವ ಅಂಗ: ಅಶೋಕ್ ಸಂಗಪ್ಪ ಆಲೂರ

KannadaprabhaNewsNetwork |  
Published : Nov 10, 2025, 02:00 AM IST
ಚಿತ್ರ :  4ಎಂಡಿಕೆ3 :  ಪತ್ರಿಕಾ ಭವನ ಟ್ರಸ್ಟ್ ನ 24ನೇ ವಾರ್ಷಿಕೋತ್ಸವ ಸಮಾರಂಭ  ಉದ್ಘಾಟನೆ.  | Kannada Prabha

ಸಾರಾಂಶ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾರಂಗ ಅತ್ಯಂತ ಮಹತ್ವದ ಜವಾಬ್ದಾರಿ ಹೊಂದಿರುವ ಅಂಗವಾಗಿದೆ ಎಂದು ಗಣ್ಯರು ಹೇಳಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾ ರಂಗ ಅತ್ಯಂತ ಮಹತ್ವದ ಜವಾಬ್ದಾರಿಯನ್ನು ಹೊಂದಿರುವ ಅಂಗವಾಗಿದ್ದು, ಸಾಮಾಜಿಕ ವ್ಯವಸ್ಥೆಯ ಓರೆಕೋರೆಗಳನ್ನು ತಿದ್ದಿ, ಜನರ ಆಶೋತ್ತರಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಪರ್ತಕರ್ತರು ಕೆಲಸ ಮಾಡಬೇಕು ಎಂದು ಚಿಕ್ಕ ಅಳುವಾರ ಕೊಡಗು ವಿಶ್ವ ವಿದ್ಯಾಲಯದ ಉಪಕುಲಪತಿ ಅಶೋಕ್ ಸಂಗಪ್ಪ ಆಲೂರ ಅಭಿಪ್ರಾಯ ವ್ಯಕ್ತಪಡಿಸಿದರು.ನಗರದ ಪತ್ರಿಕಾ ಭವನದಲ್ಲಿ ಆಯೋಜಿತ ಕೊಡಗು ಪತ್ರಿಕಾ ಭವನ ಟ್ರಸ್ಟ್ ನ 24ನೇ ವಾರ್ಷಿಕೋತ್ಸವ ಸಮಾರಂಭವನ್ನು ಜ್ಯೋತಿ ಬೆಳಗಿ ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದ ಆಗುಹೋಗುಗಳನ್ನು ತಿಳಿಸಿ ಸಮಾಜವನ್ನು ಸರಿದಾರಿಗೆ ತರುವ ಕೆಲಸ ಪತ್ರಕರ್ತರಿಂದ ಆಗುತ್ತಿದೆ. ಗ್ರಾಮೀಣ ಭಾಗದ ಜನರ ಧ್ವನಿಯಾಗಿ ಕೆಲಸ ಮಾಡುವ ಹೆಚ್ಚಿನ ಜವಾಬ್ದಾರಿ ಪತ್ರಕರ್ತರ ಮೇಲಿದೆ. ಪತ್ರಕರ್ತರು ಜನರನ್ನು ಸನ್ಮಾರ್ಗದತ್ತ ಕೊಂಡೊಯ್ಯುವ ಚಿಂತನೆ ಹೊಂದಿರಬೇಕು ಎಂದರು.ಹಲವು ಸವಾಲು ಎದುರಿಸಬೇಕಾಗಿದೆ:

ಆಧುನಿಕ ಡಿಜಿಟಲ್ ಯುಗದಲ್ಲಿ ಪತ್ರಕರ್ತರು ಹಲವು ಸವಾಲುಗಳನ್ನು ಎದುರಿಸಬೇಕಾಗಿದೆ. ಇವುಗಳನ್ನು ಮೆಟ್ಟಿನಿಂತು ತಾಂತ್ರಿಕವಾಗಿ ಮುಂದುವರೆಯುವಂತೆ ಆಗಬೇಕು. ಹೊಸ ಪೀಳಿಗೆಯ ಪತ್ರಕರ್ತರನ್ನು ಬೆಳೆಸುವಂತಾಗಬೇಕು. ಈ ದಿಸೆಯಲ್ಲಿ ಚಿಕ್ಕ ಅಳುವಾರದಲ್ಲಿ ಸಮೂಹ ಸಂವಹನ ಪತ್ರಿಕೋದ್ಯಮ ಆರಂಭಿಸಲಾಗಿದೆಯೆಂದು ತಿಳಿಸಿದ ಅವರು, ಪತ್ರಿಕೋದ್ಯಮದ ವಿದ್ಯಾರ್ಥಿಗಳು ಹಾಗೂ ಪತ್ರಕರ್ತರ ಅನುಕೂಲಕ್ಕಾಗಿ ''''''''ವಿಜ್ಞಾನ ಹಾಗೂ ತಂತ್ರಜ್ಞಾನ'''''''' ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಲಾಗುತ್ತದೆಂದು ತಿಳಿಸಿದರು.ಮೈಸೂರು ವಿಜಯ ಕರ್ನಾಟಕ ಪತ್ರಿಕೆಯ ಸ್ಥಾನೀಯ ಸಂಪಾದಕರಾದ ಐತಿಚಂಡ ರಮೇಶ್ ಉತ್ತಪ್ಪ ಮಾತನಾಡಿ, ಪತ್ರಿಕೋದ್ಯಮದ ಪವಿತ್ರ ನೆಲೆ ಎಂದರೆ ಅದು ಕೊಡಗು ಎಂದು ಬಣ್ಣಿಸಿ, ನಮ್ಮ ಪ್ರತಿಭೆಯ ಹಿಂದೆ ಸಾಕಷ್ಟು ಹಿರಿಯರ ಕೊಡುಗೆ ಇರುತ್ತದೆ. ನಮ್ಮನ್ನು ಪ್ರೋತ್ಸಾಹಿಸಿ ಬೆನ್ನು ತಟ್ಟುವವರು ಕೂಡ ಗುರುಗಳಾಗುತ್ತಾರೆ. ಯಾರು ಗುರುವನ್ನು ನೆನೆಯುವುದಿಲ್ಲವೊ, ಗೌರವಿಸುವುದಿಲ್ಲವೊ ಅವರು ಪತ್ರಕರ್ತರಾಗಲು ಸಾಧ್ಯವಿಲ್ಲ ಎಂದರು.ಇಂದು ಪತ್ರಕರ್ತರು ನಿರ್ದಿಷ್ಟ ಗುರಿ ಇಲ್ಲದೆ, ಗುರುವಿಲ್ಲದೆ ಮುನ್ನುಗುತ್ತಿದ್ದಾರೆ. ಯುವ ಪತ್ರಕರ್ತರನ್ನು ಗುರಿ ತಪ್ಪಿಸುವ ಕೆಲಸವಾಗುತ್ತಿದೆ. ಗುರುವಿಗೆ ಬೆಲೆ ನೀಡಿದರೆ ಮಾತ್ರ ಉತ್ತಮ ಭವಿಷ್ಯ ದೊರೆಯಲು ಸಾಧ್ಯ. ಆ ದಿಸೆಯಲ್ಲಿ ಮುಂದಿನ ದಿನಗಳಲ್ಲಿ ಗುರುವಂದನಾ ಕಾರ್ಯಕ್ರಮಗಳನ್ನು ಆಯೋಜಿಸುವ ಚಿಂತನೆ ಇದೆ ಎಂದರು.ಸಮಾಜದ ನಡುವೆ ಕೆಲಸ ಮಾಡಬೇಕು:

ಬರೆಯುವವರೆಲ್ಲರೂ ಪತ್ರಕರ್ತರಾಗಲು ಸಾಧ್ಯವಿಲ್ಲ. ಪತ್ರಕರ್ತರು ಸುದ್ದಿಗೆ ಮಾತ್ರ ಸೀಮಿತವಾಗಬಾರದು. ಸುದ್ದಿಗೆ ಹೊರತಾಗಿ ಸಮಾಜದ ನಡುವೆ ಕೆಲಸ ಮಾಡಬೇಕು. ಪತ್ರಿಕೋದ್ಯಮ ಇಲ್ಲದಿದ್ದರೆ ಪ್ರಜಾಪ್ರಭುತ್ವ ವ್ಯವಸ್ಥೆಯ ಪ್ರಮುಖ ಅಂಗಗಳು ವಿಫಲವಾಗುವ, ಆ ಮುಖೇನ ಅರಾಜಕತೆ ನಿರ್ಮಾಣವಾಗುವ ಅಪಾಯವಿದೆಯೆಂದು ಎಚ್ಚರಿಸಿ, ಸಮಾಜವನ್ನು ಉತ್ತಮ ಮಾರ್ಗದಲ್ಲಿ ಕೊಂಡೊಯ್ಯುವ ನಿಟ್ಟಿನಲ್ಲಿ ಸದಾ ಜನತೆಯನ್ನು ಎಚ್ಚರಿಸುವ ಕೆಲಸವನ್ನು ಪತ್ರಕರ್ತರು ಮಾಡಬೇಕು ಎಂದರು.ಪ್ರಾಸ್ತಾವಿಕವಾಗಿ ಮಾತನಾಡಿದ ಕೊಡಗು ಪತ್ರಿಕಾ ಭವನದ ಸಂಸ್ಥಾಪಕ ಮ್ಯಾನೇಜಿಂಗ್ ಟ್ರಸ್ಟಿಗಳಾದ ಟಿ.ಪಿ.ರಮೇಶ್ ಮಾತನಾಡಿ, ಕೊಡಗು ಪತ್ರಿಕಾ ಭವನ ಟ್ರಸ್ಟ್ 24ನೇ ವಾರ್ಷಿಕೋತ್ಸವವನ್ನು ಆಚರಿಸಿಕೊಂಡು ಬೆಳ್ಳಿ ಹಬ್ಬದ ಆಚರಣೆಗೆ ಸಿದ್ಧತೆಯನ್ನು ನಡೆಸುತ್ತಿದೆ. 2001ರಲ್ಲಿ ಕೊಡಗು ಪತ್ರಿಕಾ ಭವನವನ್ನು ಸ್ಥಾಪಿಸುವ ಮೂಲಕ ಪತ್ರಕರ್ತರ ಕಾರ್ಯಚಟುವಟಿಕೆಗಳಿಗೆ ನೆರವಾಗುವ, ಸಮಾಜಕ್ಕೆ ಕೊಡುಗೆ ನೀಡುವ ಕಾರ್ಯವನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ. ಸಮಾಜ ಮುಖಿಯಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮುನ್ನಡೆಯುತ್ತಿರುವುದಾಗಿ ತಿಳಿಸಿದರು. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ.ಮಾತನಾಡಿ, ಪ್ರಸ್ತುತ ದಿನಗಳಲ್ಲಿ ದೃಶ್ಯ ಮಾಧ್ಯಮಗಳು ಟಿಆರ್‌ಪಿ ಪೈಪೋಟಿಯಿಂದಾಗಿ ಋಣಾತ್ಮಕ ವಿಚಾರಗಳಿಗೆ, ಸಮಾಜಕ್ಕೆ ಅನಗತ್ಯವಾದ ವೈಯಕ್ತಿಕ ನಿಂದನೆಯ ವಿಚಾರಗಳಿಗೆ ಹೆಚ್ಚಿನ ಒತ್ತು ನಿಡುತ್ತಿವೆ. ಇವುಗಳ ನಡುವೆಯೂ ಪತ್ರಿಕೆಗಳು ಸಮಾಜಕ್ಕೆ ಒಳಿತನ್ನು ಉಂಟುಮಾಡುವ ವಿಚಾರಗಳತ್ತ ಹೆಚ್ಚಿನ ಒತ್ತು ನಿಡುವ ಮೂಲಕ ಜೀವಂತವಾಗಿದೆ. ಪತ್ರಿಕೋದ್ಯಮ ಕ್ಷೇತ್ರಕ್ಕೆ ಯುವ ಪೀಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕು ಎಂದು ಹೇಳಿದರು.ವಿಶ್ವಾಸಗಳು ಸದಾ ನೆಲೆಸಿದೆ:

ಹಿರಿಯ ಟ್ರಸ್ಟಿಗಳಾದ ಜಿ. ಚಿದ್ವಿಲಾಸ್ ಅವರು ಮಾತನಾಡಿ, ಕೊಡಗಿನ ಪತ್ರಿಕೋದ್ಯಮದಲ್ಲಿನ ಪೈಪೋಟಿಗಳ ನಡುವೆಯೂ ಪರಸ್ಪರರ ಬಗ್ಗೆ ಗೌರವ, ವಿಶ್ವಾಸಗಳು ಸದಾ ನೆಲೆಸಿದೆ. ಮತ್ತೊಂದು ಪತ್ರಿಕೆಯಲ್ಲಿನ ಉತ್ತಮ ವಿಚಾರಗಳನ್ನು ಮೆಚ್ಚಿಕೊಳ್ಳುವ, ಪತ್ರಕರ್ತರ ಉತ್ತಮ ಕಾರ್ಯಗಳನ್ನು ಶ್ಲಾಘಿಸುವಂತಹ ಮನಸ್ಥಿತಿಯನ್ನು ಉಳಿಸಿಕೊಂಡಿರುವ ಬಗ್ಗೆ ಹೆಮ್ಮೆಯನ್ನು ವ್ಯಕ್ತಪಡಿಸಿದರು. ಕೊಡಗು ಪತ್ರಿಕಾ ಭವನ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಿ.ಕೇಶವ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೊಡಗು ಪತ್ರಿಕಾ ಭವನ ಟ್ರಸ್ಟ್ ಇದೀಗ ಬೆಳ್ಳಿ ಹಬ್ಬದ ವರ್ಷವನ್ನು ಪ್ರವೇಶಿಸುತ್ತಿದೆ. ಈ ಹಿನ್ನೆಲೆ ಟ್ರಸ್ಟ್ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ನಡೆಸುವ ಚಿಂತನೆಯನ್ನು ಹೊಂದಿದ್ದು, ಇದಕ್ಕೆ ಸರ್ವರ ಸಹಕಾರವನ್ನು ಕೋರಿದರು.ಕಾರ್ಯಕ್ರಮದಲ್ಲಿ ಕೊಡಗು ವಿಶ್ವ ವಿದ್ಯಾನಿಲಯದ ಉಪಕುಲಪತಿ ಅಶೋಕ್ ಸಂಗಪ್ಪ ಆಲೂರ, ಮೈಸೂರು ವಿಜಯ ಕರ್ನಾಟಕ ಸ್ಥಾನೀಯ ಸಂಪಾದಕರಾದ ಐತಿಚಂಡ ರಮೇಶ್ ಉತ್ತಪ್ಪ, ಟ್ರಸ್ಟಿ ಹಾಗೂ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಕೊಡಗು ಪತ್ರಿಕಾ ಭವನದ 24ನೇ ವಾರ್ಷಿಕೋತ್ಸವದ ಪ್ರಯುಕ್ತ ಪತ್ರಕರ್ತರು ಹಾಗೂ ಪತ್ರಕರ್ತರ ಕುಟುಂಬದವರಿಗೆ ನಡೆದ ಟೇಬಲ್ ಟೆನ್ನಿಸ್, ಕೇರಂ, ಚೆಸ್ ಪಂದ್ಯಾವಳಿಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮವನ್ನು ಟ್ರಸ್ಟಿ ಮಧೋಶ್ ಪೂವಯ್ಯ ನಡೆಸಿಕೊಟ್ಟರು.ಕಾರ್ಯಕ್ರಮದಲ್ಲಿ ರಜತ್ ರಾಜ್ ಪ್ರಾರ್ಥಿಸಿದರು, ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಎಸ್.ಜಿ.ಉಮೇಶ್ ಸ್ವಾಗತಿಸಿದರು, ಕೋಶಾಧಿಕಾರಿ ಕೆ.ತಿಮ್ಮಪ್ಪ ನಿರೂಪಿದರು, ಟ್ರಸ್ಟಿ ವಿ.ಪಿ.ಸುರೇಶ್ ವಂದಿಸಿದರು. ಜೀವನ್ ಚಿಣ್ಣಪ್ಪ ಅತಿಥಿಗಳ ಪರಿಚಯ ಮಾಡಿದರು.

PREV

Recommended Stories

ಇಂದು ಹಂಡ್ಲಿ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ
ಯಯೂದಿ ತತ್ವಗಳಿಗೂ, ಗೀತೆಗೂ ಸಾಮ್ಯತೆ ಇದೆ: ಪ್ರೊ.ಆ್ಯಲನ್‌