ಬ್ರಿಟಿಷರಿಂದಲೇ ದೇಶ ವಿಭಜನೆ: ರಾಯರಡ್ಡಿ

KannadaprabhaNewsNetwork |  
Published : Aug 16, 2025, 12:00 AM IST
೧೫ ವೈಎಲ್‌ಬಿ ೦೧ಯಲಬುರ್ಗಾದ ಸಂಗೊಳ್ಳಿ ರಾಯಣ್ಣ ತಾಲೂಕು ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ೭೯ನೇ ಸ್ವಾತಂತ್ರ‍್ಯ ದಿನಾಚರಣೆ ಸಮಾರಂಭದಲ್ಲಿ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಮಾತನಾಡಿದರು. | Kannada Prabha

ಸಾರಾಂಶ

ಸ್ವಾತಂತ್ರ‍್ಯಕ್ಕಾಗಿ ತ್ಯಾಗ, ಬಲಿದಾನಗೈದ ಮಹನೀಯರನ್ನು ಸ್ಮರಿಸಬೇಕು. ಅವರ ತ್ಯಾಗದ ಫಲದಿಂದ ಸ್ವಾತಂತ್ರ‍್ಯ ಸಿಕ್ಕಿದೆ ಎನ್ನುವುದನ್ನು ಮರೆಯಬಾರದು. ಮುಸ್ಲಿಂರಿಗೆ ಪ್ರತ್ಯೇಕ ರಾಷ್ಟ್ರದ ಸಲುವಾಗಿ ಬ್ರಿಟಿಷರಿಂದ ದೇಶ ವಿಭಜನೆ ಆಗಿದೆ ಹೊರತು ಭಾರತೀಯರಿಂದಲ್ಲ ಎನ್ನುವ ಇತಿಹಾಸ ತಿಳಿದು ಮಾತನಾಡಬೇಕು.

ಯಲಬುರ್ಗಾ:

ವಿದ್ಯಾರ್ಥಿಗಳು ದೇಶದ ಇತಿಹಾಸ ಮತ್ತು ಸ್ವಾತಂತ್ರ‍್ಯದ ಬಗ್ಗೆ ತಿಳಿದುಕೊಳ್ಳಬೇಕು ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕಾಡಳಿತ ಏರ್ಪಡಿಸಿದ್ದ ೭೯ನೇ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸ್ವಾತಂತ್ರ‍್ಯಕ್ಕಾಗಿ ತ್ಯಾಗ, ಬಲಿದಾನಗೈದ ಮಹನೀಯರನ್ನು ಸ್ಮರಿಸಬೇಕು. ಅವರ ತ್ಯಾಗದ ಫಲದಿಂದ ಸ್ವಾತಂತ್ರ‍್ಯ ಸಿಕ್ಕಿದೆ ಎನ್ನುವುದನ್ನು ಮರೆಯಬಾರದು. ಮುಸ್ಲಿಂರಿಗೆ ಪ್ರತ್ಯೇಕ ರಾಷ್ಟ್ರದ ಸಲುವಾಗಿ ಬ್ರಿಟಿಷರಿಂದ ದೇಶ ವಿಭಜನೆ ಆಗಿದೆ ಹೊರತು ಭಾರತೀಯರಿಂದಲ್ಲ ಎನ್ನುವ ಇತಿಹಾಸ ತಿಳಿದು ಮಾತನಾಡಬೇಕು ಎಂದರು.

ದೇಶದಲ್ಲಿ ದಲಿತರಿಗೆ ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಸೌಲಭ್ಯ ದೊರೆಯಲು ಒಳ ಮೀಸಲಾತಿ ಸಿಗಬೇಕು. ಈ ಬಗ್ಗೆ ಜಸ್ಟಿಸ್ ನಾಗಮೋಹನದಾಸ್ ಸಮಿತಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ ವರದಿ ವೈಜ್ಞಾನಿಕವಾಗಿದೆ. ಸಿಎಂ ಸಿದ್ದರಾಮಯ್ಯ, ಸಂಪುಟದ ಮಂತ್ರಿಮಂಡಲ ಅದನ್ನು ಶೀಘ್ರ ಜಾರಿಗೊಳಿಸಲಿದೆ ಎಂದರು.

ಎಂಬಿಬಿಎಸ್ ಮಾಡಿದವರು ಗ್ರಾಮಾಂತರ ಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಲು ಕಾನೂನು ಜಾರಿಗೆ ತರಲಾಗುತ್ತದೆ. ಜನರಿಗೆ ಒಳ್ಳೆಯದಾಗುತ್ತೆ ಎಂದರೆ ನಾನು ಯಾರಿಗೂ ಹೆದರದೆ ಕೆಲಸ ಮಾಡಲು ಸಿದ್ಧನಿದ್ದೇನೆ ಎಂದ ಅವರು, ಓಡಿಸ್ಸಾ ರಾಜ್ಯದಲ್ಲಿರುವ ಸ್ಕಿಲ್ ಡೆವೆಲಪ್ಮೆಂಟ್ ಸೆಂಟರ್‌ಗಿಂತ ನನ್ನ ಕ್ಷೇತ್ರದಲ್ಲಿ ದೇಶದ ಗಮನ ಸೆಳೆಯುವಂತಹ ಕೌಶಲ್ಯ ಅಭಿವೃದ್ಧಿ ಕೇಂದ್ರ ಮಾಡುತ್ತೇನೆ. ಅಭಿವೃದ್ಧಿ ಕೆಲಸಗಳಿಗೆ ರಾಜಕಾರಣಿಗಳು ಸಹಕಾರ ನೀಡಬೇಕು. ನಾನು ಅಭಿವೃದ್ಧಿ ಕೆಲಸದಲ್ಲಿ ಯಾವುದೇ ರಾಜಿ ಆಗುವುದಿಲ್ಲ ಎಂದು ತಿಳಿಸಿದರು.

ತಹಸೀಲ್ದಾರ್ ಬಸವರಾಜ ತೆನ್ನಳ್ಳಿ ಸಂದೇಶ ಭಾಷಣ ಮಾಡಿದರು. ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ, ಸಾಧಕರಿಗೆ ಸನ್ಮಾನ ನಡೆಯಿತು.ಈ ವೇಳೆ ಪಪಂ ಅಧ್ಯಕ್ಷ ಅಂದಯ್ಯ ಕಳ್ಳಿಮಠ, ತಾಪಂ ಇಒ ಸಂತೋಷ ಪಾಟೀಲ್, ಪಪಂ ಮುಖ್ಯಾಧಿಕಾರಿ ನಾಗೇಶ, ಸದಸ್ಯರಾದ ಡಾ. ನಂದಿತಾ ಶಿವನಗೌಡ ದಾನರಡ್ಡಿ, ಅಮರೇಶ ಹುಬ್ಬಳ್ಳಿ, ರೇವಣಪ್ಪ ಹಿರೇಕುರುಬರ, ಹನುಮಂತ ಭಜಂತ್ರಿ, ರಿಯಾಜ್‌ಅಹ್ಮದ್ ಖಾಜಿ, ಪ್ರಭಾರ ಬಿಇಒ ಅಶೋಕ ಗೌಡರ, ಸಿಡಿಪಿಒ ಬೆಟ್ಟದೇಶ ಮಾಳೆಕೊಪ್ಪ, ಪ್ರಮುಖರಾದ ಶೇಖರಗೌಡ ಉಳ್ಳಾಗಡ್ಡಿ, ಕೆರಿಬಸಪ್ಪ ನಿಡಗುಂದಿ, ಮಹೇಶ ಹಳ್ಳಿ, ಶರಣಪ್ಪ ಗಾಂಜಿ, ಆನಂದ ಉಳ್ಳಾಗಡ್ಡಿ, ಈರಪ್ಪ ಕುಡಗುಂಟಿ, ಹಂಪಯ್ಯಸ್ವಾಮಿ ಹಿರೇಮಠ, ಶರಣಮ್ಮ ಪೂಜಾರ, ಸಾವಿತ್ರಿ ಗೊಲ್ಲರ ಸೇರಿದಂತೆ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ
ಬೆಂಗಳೂರಿಂದ ಪುಣೆಗೆ ಹೊಸ ಹೈಸ್ಪೀಡ್‌ ರೈಲು ಘೋಷಣೆ?