ಸ್ಟೇರಿಂಗ್ ರಾಡ್ ಕಟ್ಟಾಗಿ ದಿಬ್ಬಕ್ಕೆ ಡಿಕ್ಕಿ ಹೊಡೆದ ಬಸ್

KannadaprabhaNewsNetwork |  
Published : Oct 19, 2024, 01:35 AM IST
18ಮಾಗಡಿ1 : ಮಾಗಡಿತಾಲ್ಲೂಕಿನ ಅತ್ತಿಂಗೆರೆ ಸಮೀಪದ ಚಂದಹಸಿ ಕಟೆಯ ಮಣ್ಣಿನ ದಿಬ್ಬಕ್ಕೆ ಡಿಕ್ಕಿ ಹೊಡೆದ್ದಿದ್ದು ಬಸ್ .18ಮಾಗಡಿ2 : ಮಾಗಡಿ ಸರ್ಕಾರಿ ಆಸಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರಯಾಣಿಕರು. | Kannada Prabha

ಸಾರಾಂಶ

ಮಾಗಡಿ: ರಾಮನಗರ ಮಾರ್ಗವಾಗಿ ಮಾಗಡಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಸ್ಟೇರಿಂಗ್ ರಾಡ್ ಕಟ್ಟಾದ ಪರಿಣಾಮ ದಿಬ್ಬಕ್ಕೆ ಡಿಕ್ಕಿ ಹೊಡೆದು ಚಾಲಕ, ನಿರ್ವಾಹಕರು ಸೇರಿದಂತೆ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.

ಮಾಗಡಿ: ರಾಮನಗರ ಮಾರ್ಗವಾಗಿ ಮಾಗಡಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಸ್ಟೇರಿಂಗ್ ರಾಡ್ ಕಟ್ಟಾದ ಪರಿಣಾಮ ದಿಬ್ಬಕ್ಕೆ ಡಿಕ್ಕಿ ಹೊಡೆದು ಚಾಲಕ, ನಿರ್ವಾಹಕರು ಸೇರಿದಂತೆ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.

ಬಸ್ಸಿನ ಸ್ಟೇರಿಂಗ್ ರಾಡ್ ಕಟ್ಟಾದ ಕಾರಣ ಚಾಲಕ ಬಸ್ಸನ್ನು ನಿಯಂತ್ರಿಸಲು ಸಾಧ್ಯವಾಗದೆ ತಾಲೂಕಿನ ಅತ್ತಿಂಗೆರೆ ಸಮೀಪದ ಚಂದಹಸಿ ಕಟೆಯ ಮಣ್ಣಿನ ದಿಬ್ಬಕ್ಕೆ ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿದ್ದ ವಿವಿಧ ಸರ್ಕಾರಿ ಇಲಾಖೆಗಳ ನೌಕರರಿಗೆ ಹಾಗೂ ಮಹಿಳೆಯರು ಸೇರಿ 19ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸೊಂಟ, ಮುಖ, ತಲೆ ಭಾಗಕ್ಕೆ ಗಾಯಗಳಾಗಿವೆ. ಮಾಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ್ದು, ಓರ್ವ ಮಹಿಳೆಗೆ ತಲೆಗೆ ಗಂಭೀರ ಗಾಯವಾಗಿ ಬೆಂಗಳೂರಿನ ನಿಮ್ಹಾನ್ಸ್‌ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಡಿವೈಎಸ್ಪಿ ಪ್ರವೀಣ್, ಪೊಲೀಸ್ ಇನ್ಸ್‌ಪೆಕ್ಟರ್ ಗಿರಿರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ