ಸ್ಕಿಡ್‌ ಆಗಿ ರಸ್ತೆಗೆ ಬಿದ್ದ ಬೈಕ್‌ ಸವಾರನ ಮೇಲೆ ಹರಿದ ಬಸ್‌

KannadaprabhaNewsNetwork |  
Published : Jun 03, 2024, 01:15 AM ISTUpdated : Jun 03, 2024, 09:25 AM IST
ಅಪಘಾತ | Kannada Prabha

ಸಾರಾಂಶ

ದ್ವಿಚಕ್ರ ವಾಹನ ಸವಾರನ ಮೇಲೆ ಬಿಎಂಟಿಸಿ ಬಸ್‌ ಚಕ್ರ ಹರಿದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿರುವುದು.

  ಬೆಂಗಳೂರು :  ದ್ವಿಚಕ್ರ ವಾಹನ ಸವಾರನ ಮೇಲೆ ಬಿಎಂಟಿಸಿ ಬಸ್‌ ಚಕ್ರ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆಡುಗೋಡಿ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುದ್ದುಗುಂಟೆಪಾಳ್ಯ ನಿವಾಸಿ ಜಗದೀಶ್ವರ(42) ಮೃತ ಸವಾರ.

ಆಂಧ್ರಪ್ರದೇಶ ಮೂಲದ ಜಗದೀಶ್ವರ ಕಳೆದ ಹಲವು ವರ್ಷಗಳಿಂದ ನಗರದಲ್ಲಿ ನೆಲೆಸಿದ್ದರು. ಕ್ಯಾಬ್‌ ಚಾಲಕರಾಗಿದ್ದ ಜಗದೀಶ್ವರ ಸ್ನೇಹಿತನ ಬಳಿ ಕಾರು ಪಡೆದುಕೊಳ್ಳಲು ದ್ವಿಚಕ್ರ ವಾಹನದಲ್ಲಿ ತೆರಳಿದ್ದರು. ರಾತ್ರಿ 9 ಗಂಟೆಗೆ ಹೊಸೂರು ರಸ್ತೆಯ ಯುಕೋ ಬ್ಯಾಂಕ್‌ ಸಿಗ್ನಲ್‌ ಬಳಿ ತೆರಳುವಾಗ ದ್ವಿಚಕ್ರ ವಾಹನ ಸ್ಕಿಡ್‌ ಆಗಿ ನಿಯಂತ್ರಣ ತಪ್ಪಿ ರಸ್ತೆಯ ಬಲಭಾಗಕ್ಕೆ ಬಿದ್ದಿದ್ದಾರೆ. ಇದೇ ವೇಳೆ ಪಕ್ಕದಲ್ಲೇ ಸಂಚರಿಸುತ್ತಿದ್ದ ಬಿಎಂಟಿಸಿ ಬಸ್‌ನ ಹಿಂಭಾಗದ ಚಕ್ರ ಜಗದೀಶ್ವರ ಮೇಲೆ ಉರುಳಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಬಂದ ಸಂಚಾರ ಪೊಲೀಸರು, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಭಾನುವಾರ ಬೆಳಗ್ಗೆ ಮರಣೋತ್ತರ ಪರೀಕ್ಷೆ ಮಾಡಿಸಿ ಮೃತದೇಹವನ್ನು ವಾರಸುದಾರರಿಗೆ ಒಪ್ಪಿಸಿದ್ದಾರೆ. ಘಟನೆ ಸಂಬಂಧ ಬಿಎಂಟಿಸಿ ಬಸ್‌ ಜಪ್ತಿ ಮಾಡಿದ್ದು, ಅದರ ಚಾಲಕನನ್ನು ಬಂಧಿಸಲಾಗಿದೆ. ಆಡುಗೋಡಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ಬೀದಿ ನಾಯಿಗಳು ಶೀಘ್ರ ಶೆಲ್ಟರ್‌ಗೆ : ರಾವ್‌
ಸಿದ್ದು ಅಹಿಂದ ಲೀಡರ್‌ ಆಗಿದ್ದರೆ ಪುತ್ರ ಕ್ಷೇತ್ರ ಆಯ್ಕೆ ಏಕೆ?: ಗೌಡ