ಧಾರವಾಡ:
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಮೇಲಿನ ಪ್ರಕರಣ ಮರಳಿ ಪಡೆದರೆ ಸರಿ. ಆದರೆ, ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣ ಹಿಂಪಡೆಯುವುದು ಸರಿಯಲ್ಲ. ಇದು ಮತ್ತಷ್ಟು ಕಾನೂನು ಸುವ್ಯವಸ್ಥೆ ಹದಗೆಡಲು ಕಾರಣವೂ ಆಗಲಿದೆ ಎಂದು ಎಚ್ಚರಿಸಿದರು.
ಪ್ರಕರಣ ಹಿಂಪಡೆಯುವ ಮುನ್ನ ಕೈ ಸರ್ಕಾರ ಯೋಚಿಸದೆ, ಮುಸ್ಲಿಮರ ತುಷ್ಟೀಕರಣ ಮಾಡಿದೆ. ಸೂಕ್ಷ್ಮವಾಗಿ ಗಮನಿಸಿದರೆ ಪ್ರಕರಣ ಹಿಂಪಡೆಯಲು ಬರುವುದಿಲ್ಲ. ಆದಾಗ್ಯೂ ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿದೆ. ಇದು ಕಾನೂನು ಬಾಹಿರವಾಗಿದೆ ಎಂದರು.ಪ್ರಕರಣ ಹಿಂಪಡೆದ ಬಗ್ಗೆ ಕೋರ್ಟ್ನಲ್ಲಿ ಯಾರಾದರೂ ಪ್ರಶ್ನಿಸಿದರೆ ಈ ನಿರ್ಧಾರ ಗಟ್ಟಿಯಾಗಿ ನಿಲ್ಲುವುದಿಲ್ಲ. ರಾಜಕೀಯ ಲಾಭಕ್ಕಾಗಿ ವ್ಯವಸ್ಥೆ ಹದಗೆಡಿಸುವುದು ಕಾಂಗ್ರೆಸ್ ಹುನ್ನಾರವಿದೆ. ಕೈ ಸರ್ಕಾರ ತಪ್ಪು ನಿರ್ಧಾರ ಕೈಗೊಂಡಿದೆ ಎಂದು ಹೇಳಿದರು.
ಅದು ಬಿಟ್ಟು ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ ಜತೆ ಪೊಲೀಸರ ಮೇಲೆ ಗುಂಡಾಗಿರಿ ಮಾಡಿದ ಪ್ರಕರಣ ಹಿಂಪಡೆದ ಸರ್ಕಾರದ ನಿರ್ಧಾರ ನಾಚಿಗೇಡು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದರು.