ಮುಸ್ಲಿಮರ ತುಷ್ಟೀಕರಣಕ್ಕೆ ಕೇಸ್‌ ವಾಪಾಸ್‌: ಜಗದೀಶ ಶೆಟ್ಟರ್‌

KannadaprabhaNewsNetwork |  
Published : Oct 13, 2024, 01:07 AM IST
5554 | Kannada Prabha

ಸಾರಾಂಶ

ಪ್ರಕರಣ ಹಿಂಪಡೆಯುವ ಮುನ್ನ ಕೈ ಸರ್ಕಾರ ಯೋಚಿಸದೆ, ಮುಸ್ಲಿಮರ ತುಷ್ಠೀಕರಣ ಮಾಡಿದೆ. ಸೂಕ್ಷ್ಮವಾಗಿ ಗಮನಿಸಿದರೆ ಪ್ರಕರಣ ಹಿಂಪಡೆಯಲು ಬರುವುದಿಲ್ಲ. ಆದಾಗ್ಯೂ ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿದೆ. ಇದು ಕಾನೂನು ಬಾಹಿರವಾಗಿದೆ.

ಧಾರವಾಡ:

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದ ರಾಜ್ಯ ಸರ್ಕಾರದ ನಿರ್ಧಾರ ಅಕ್ಷಮ್ಯ. ಯಾವ ಪ್ರಕರಣ ಮರಳಿ ಪಡೆಯಬೇಕು ಎಂಬ ಕನಿಷ್ಠ ಜ್ಞಾನವೂ ಕೈ ಸರ್ಕಾರಕ್ಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಕಿಡಿ ಕಾರಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಮೇಲಿನ ಪ್ರಕರಣ ಮರಳಿ ಪಡೆದರೆ ಸರಿ. ಆದರೆ, ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣ ಹಿಂಪಡೆಯುವುದು ಸರಿಯಲ್ಲ. ಇದು ಮತ್ತಷ್ಟು ಕಾನೂನು ಸುವ್ಯವಸ್ಥೆ ಹದಗೆಡಲು ಕಾರಣವೂ ಆಗಲಿದೆ ಎಂದು ಎಚ್ಚರಿಸಿದರು.

ಪ್ರಕರಣ ಹಿಂಪಡೆಯುವ ಮುನ್ನ ಕೈ ಸರ್ಕಾರ ಯೋಚಿಸದೆ, ಮುಸ್ಲಿಮರ ತುಷ್ಟೀಕರಣ ಮಾಡಿದೆ. ಸೂಕ್ಷ್ಮವಾಗಿ ಗಮನಿಸಿದರೆ ಪ್ರಕರಣ ಹಿಂಪಡೆಯಲು ಬರುವುದಿಲ್ಲ. ಆದಾಗ್ಯೂ ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿದೆ. ಇದು ಕಾನೂನು ಬಾಹಿರವಾಗಿದೆ ಎಂದರು.

ಪ್ರಕರಣ ಹಿಂಪಡೆದ ಬಗ್ಗೆ ಕೋರ್ಟ್‌ನಲ್ಲಿ ಯಾರಾದರೂ ಪ್ರಶ್ನಿಸಿದರೆ ಈ ನಿರ್ಧಾರ ಗಟ್ಟಿಯಾಗಿ ನಿಲ್ಲುವುದಿಲ್ಲ. ರಾಜಕೀಯ ಲಾಭಕ್ಕಾಗಿ ವ್ಯವಸ್ಥೆ ಹದಗೆಡಿಸುವುದು ಕಾಂಗ್ರೆಸ್ ಹುನ್ನಾರವಿದೆ. ಕೈ ಸರ್ಕಾರ ತಪ್ಪು ನಿರ್ಧಾರ ಕೈಗೊಂಡಿದೆ ಎಂದು ಹೇಳಿದರು.

ಅನೇಕ ವರ್ಷಗಳಿಂದ ರೌಡಿಶೀಟರ್ ಇದ್ದಾರೆ. ಅವರು ಪರಿವರ್ತನೆ ಆದಾಗ್ಯೂ ರೌಡಿಶೀಟರ್ ಪಟ್ಟಿಯಲ್ಲಿಯೇ ಮುಂದುವರಿದಿದೆ. ಕೆಲವರು ಅಮಾಯಕರಿದ್ದು, ಅವರನ್ನು ರೌಡಿಶೀಟರ್‌ನಿಂದ ತೆಗೆದು, ಒಳ್ಳೆಯದು ಮಾಡಲಿ ಎಂದು ಸಲಹೆ ನೀಡಿದರು.

ಅದು ಬಿಟ್ಟು ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ ಜತೆ ಪೊಲೀಸರ ಮೇಲೆ ಗುಂಡಾಗಿರಿ ಮಾಡಿದ ಪ್ರಕರಣ ಹಿಂಪಡೆದ ಸರ್ಕಾರದ ನಿರ್ಧಾರ ನಾಚಿಗೇಡು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''