ಸೇತುವೆ ಮೇಲಿನ ಸಿಸಿ ರಸ್ತೆ ಕಿತ್ತು ಸಂಚಾರಕ್ಕೆ ಅಡಚಣೆ

KannadaprabhaNewsNetwork |  
Published : Sep 04, 2024, 01:47 AM IST
ಚಿತ್ತಾಪುರ ತಾಲೂಕಿನ ದಂಡೊತಿ ಹೊರವಲಯದಲ್ಲಿರುವ ಕಾಗೀಣ ನದಿಯ ಸೇತುವೆ ಮೇಲಿನ ಸಿಸಿ ರಸ್ತೆ ಕಿತ್ತು ಹೊಗಿರುವದರಿಂದ ಕಂದಾಯ ಮತ್ತು ಪೊಲಿಸ್ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿರುವದು. | Kannada Prabha

ಸಾರಾಂಶ

ಕಳೆದ ಮರ‍್ನಾಲ್ಕು ದಿನಗಳಿಂದ ಸತತವಾಗಿ ಸುರಿಯುತ್ತಿದ್ದ ಮಳೆಯಿಂದ ದಂಡೊತಿ ಗ್ರಾಮದ ಹೊರವಲಯದಲ್ಲಿರುವ ಸೇತುವೆಯ ಸಿಸಿ ರಸ್ತೆ ಕಿತ್ತು ಹೊಗಿದ್ದರಿಂದ ರಸ್ತೆ ಸಂಚಾರ ನಿಂತಿದ್ದರಿಂದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಡೂರ ಶ್ರೀನಿವಾಸಲು ಸೇತುವೆ ಪರಿಶೀಲನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಚಿತ್ತಾಪುರ

ತಾಲೂಕಿನಲ್ಲಿ ಕಳೆದ ಮರ‍್ನಾಲ್ಕು ದಿನಗಳಿಂದ ಸತತವಾಗಿ ಸುರಿಯುತ್ತಿದ್ದ ಮಳೆಯಿಂದ ದಂಡೊತಿ ಗ್ರಾಮದ ಹೊರವಲಯದಲ್ಲಿರುವ ಸೇತುವೆಯ ಸಿಸಿ ರಸ್ತೆ ಕಿತ್ತು ಹೊಗಿದ್ದರಿಂದ ರಸ್ತೆ ಸಂಚಾರ ನಿಂತಿದ್ದರಿಂದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಡೂರ ಶ್ರೀನಿವಾಸಲು ಸೇತುವೆ ಪರಿಶೀಲನೆ ನಡೆಸಿದರು.

ಸೇತುವೆ ಮೇಲೆ ಸತತ ಎರಡು ದಿನಗಳು ನೀರು ಹರಿದಿದ್ದರಿಂದ ನೀರಿನ ರಭಸಕ್ಕೆ ಸೇತುವೆ ಮೇಲಿನ ಸಿಸಿ ರಸ್ತೆ ಮತ್ತು ಸುರಕ್ಷತೆಗಾಗಿ ಹಾಕಿರುವ ಕಂಬಗಳು ಕಿತ್ತು ಹೊಗಿರುವುದರಿಂದ ಸೇತುವೆ ಮೇಲೆ ಸಿಸಿ ರಸ್ತೆಯು ಚಲ್ಲಾಪಿಲ್ಲಿಯಾಗಿ ಸೇತುವೆಯ ತುಂಬಾ ಬಿದ್ದಿದ್ದರಿಂದ ವಾಹನಗಳು ಸಂಚರಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಸಾರ್ವಜನಿಕರ ಸುರಕ್ಷತೆಯ ಹಿನ್ನಲೆಯಲ್ಲಿ ಸೇತುವೆ ಮೇಲೆ ಬಿದ್ದಿರುವ ಸಿಸಿ ರಸ್ತೆಯ ತೆಗೆಯುವವರೆಗೂ ಮತ್ತು ಸೇತುವೆ ಸುರಕ್ಷತೆ ಬಗ್ಗೆ ಅಧಿಕಾರಿಗಳು ಸ್ಪಷ್ಟೀಕರಣ ನೀಡುವವರೆಗೆ ಸೇತುವೆ ಮೇಲಿನ ರಸ್ತೆ ಸಂಚಾರವನ್ನು ನಿಲ್ಲಿಸಲಾಗಿದೆ. ಲೊಕೋಪಯೊಗಿ ಅಧಿಕಾರಿಗಳು ಸೇತುವೆ ಸುರಕ್ಷತೆ ಬಗ್ಗೆ ವರದಿ ನೀಡಿದ ನಂತರ ಸಾರ್ವಜನಿಕರಿಗೆ ಸಂಚಾರದ ವ್ಯವಸ್ಥೆ ಕಲ್ಪಿಸಲಾಗುವದು ಎಂದು ಡಿವೈಎಸ್‌ಪಿ ಶಂಕರಗೌಡ ಪಾಟೀಲ್ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!