ಕೇಂದ್ರದಿಂದ ಮತ್ತೆ ರೈತ ವಿರೋಧಿ ಕೃಷಿ ಕಾಯ್ದೆ ಜಾರಿಗೆ ಯತ್ನ

KannadaprabhaNewsNetwork |  
Published : Dec 14, 2025, 02:15 AM IST
ಫೋಟೋ 13ಎಚ್‌ಎಸ್‌ಡಿ5 : ಕೇಂದ್ರ ಸರ್ಕಾರ ದ ರೈತ ವಿರೋಧಿ ಕಾಯಿದೆ  ಜಾರಿಗೆ ತರಲು ಹೊರಟಿರುವುದನ್ನು ಖಂಡಿಸಿ ಚಿತ್ರದುರ್ಗದಪ್ರವಾಸಿ ಮಂದಿರದಲ್ಲಿ ಬಡಗಲಪುರ ನಾಗೇಂದ್ರ ಸುದ್ದಿಗೋಷ್ಠಿ ನಡೆಸಿದರು, | Kannada Prabha

ಸಾರಾಂಶ

ಕೇಂದ್ರ ಸರ್ಕಾರದ ರೈತ ವಿರೋಧಿ ಕಾಯಿದೆ ಜಾರಿ ಖಂಡಿಸಿ ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ಬಡಗಲಪುರ ನಾಗೇಂದ್ರ ಸುದ್ದಿಗೋಷ್ಠಿ ನಡೆಸಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ರೈತರಿಗೆ ಮಾರಕವಾಗಿದ್ದ ಮೂರು ಕೃಷಿ ಕಾಯಿದೆಗಳನ್ನು ಹಿಂದಕ್ಕೆ ಪಡೆಯುವಂತೆ ದೆಹಲಿಯಲ್ಲಿ 384 ದಿನಗಳ ಕಾಲ ರೈತರು ನಡೆಸಿದ ಚಳುವಳಿಗೆ ಮಣಿದು ಕಾಯಿದೆಗಳನ್ನು ವಾಪಸ್ ಪಡೆದ ಕೇಂದ್ರ ಸರ್ಕಾರ ಈಗ ಮತ್ತೆ ಮೂರು ರೈತ ವಿರೋಧಿ ಕಾಯಿದೆಗಳನ್ನು ಜಾರಿಗೆ ತರಲು ಹೊರಟಿರುವುದಕ್ಕೆ ನಮ್ಮ ವಿರೋಧವಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ಲಿಖಿತವಾಗಿ ನೀಡಿದ ಭರವಸೆಯಂತೆ ನಡೆದುಕೊಳ್ಳದ ಕೇಂದ್ರ ಸರ್ಕಾರ ಕೃಷಿ ಮಾರುಕಟ್ಟೆ ಚೌಕಟ್ಟು ನೀತಿ. ಸೀಡ್ ಆಕ್ಟ್, ವಿದ್ಯುಚ್ಚಕ್ತಿ ಕಾಯಿದೆ ಜಾರಿಗೆ ತರಲು ಮುಂದಾಗಿರುವುದು ಅನ್ನದಾತ ರೈತನಿಗೆ ಬಹುದೊಡ್ಡ ಪೆಟ್ಟು ನೀಡಲಿದೆ. ರಾಜ್ಯದಲ್ಲಿ ಈ ಕಾಯಿದೆಯನ್ನು ಜಾರಿಗೆ ತರಬಾರದು. ಭೂ ಸುಧಾರಣೆ ಕಾಯಿದೆ ತಿದ್ದುಪಡಿ ಮಾಡಿದ ನಂತರ ಹಿಂದಕ್ಕೆ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿ ಇದುವರೆವಿಗೂ ವಾಪಸ್ ಪಡೆದಿಲ್ಲ. ಇದಕ್ಕಾಗಿ ನಮ್ಮ ಹೋರಾಟ ಎಂದು ಹೇಳಿದರು.

ಡಿ.20, 21ರಂದು ಎನ್.ಡಿ.ಸುಂದರೇಶ್‍ರವರ ನೆನಪಿನ ದಿನ ಆಚರಿಸುತ್ತೇವೆ. ನೂರು ಯುವಕ-ಯುವತಿಯರಿಗೆ ಎರಡು ದಿನಗಳ ಕಾಲ ಎಂಟು ಗೋಷ್ಠಿಗಳು ನಡೆಯಲಿದ್ದು, ಒಂದು ಸಾವಿರ ಯುವಕರಿಗೆ ಎರಡು ವರ್ಷಗಳ ಕಾಲ ಆರು ಶಿಬಿರ ಆಯೋಜಿಸಿ ವೈಚಾರಿಕ ಚಳುವಳಿಯ ಕುರಿತು ಪ್ರಜ್ಞೆ ಮೂಡಿಸುವುದು ನಮ್ಮ ಉದ್ದೇಶ. ರೈತ ನಾಯಕ ಕೆ.ಎಸ್.ಪುಟ್ಟಣ್ಣಯ್ಯನವರ ಜನ್ಮದಿನಾಚರಣೆಯನ್ನು ಮೈಸೂರು ತಾಲೂಕಿನ ಇಲವಾಲದಲ್ಲಿ ಆಚರಿಸಲಾಗುವುದು. ಇದೆ ಸಂದರ್ಭದಲ್ಲಿ ಅವರ ಪ್ರತಿಮೆ ಅನಾವರಣಗೊಳಿಸಲಾಗುವುದು ಎಂದರು.

ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ರೈತ ವಿರೋಧಿ ಕಾಯಿದೆಗಳನ್ನು ರಾಜ್ಯ ಸರ್ಕಾರ ಹಿಂದಕ್ಕೆ ಪಡೆದಿಲ್ಲ. ಅದಕ್ಕಾಗಿ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಒತ್ತಾಯಿಸುತ್ತೇವೆ ಎಂದರು.

ಪ್ರತಿ ಹಳ್ಳಿಗಳಲ್ಲಿಯೂ ನಮ್ಮ ಚಿಂತನೆಗಳನ್ನು ತಲುಪಿಸಿ ರೈತ ಸಮುದಾಯವನ್ನು ಮೇಲಕ್ಕೆತ್ತಲಾಗುವುದು. ಕೋ-ಆಪರೇಟಿವ್ ಸೊಸೈಟಿಗಳ ಮೂಲಕ ರೈತರಿಗೆ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ. ರೈತರು ಬೆಳೆ ಬೆಳೆಯುವ ಪದ್ದತಿ ನೀರು ಬಳಕೆಯನ್ನು ಬದಲಾವಣೆ ಮಾಡಬೇಕಿದೆ. ಮಣ್ಣಿನ ಫಲವತ್ತತೆ, ಆಹಾರ ಸುರಕ್ಷತೆ ದೊಡ್ಡ ಸಮಸ್ಯೆಯಾಗಿರುವುದರಿಂದ ಹೆಚ್ಚಿನ ಒತ್ತು ಕೊಡಲಾಗುವುದು ಎಂದರು.

ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷರಾದ ಕೆ.ಪಿ.ಭೂತಯ್ಯ, ಶಿವಾನಂದ ಕುಗ್ವೆ, ಎ.ಎಲ್.ಕೆಂಪೆಗೌಡ, ಜಿಲ್ಲಾಧ್ಯಕ್ಷ ಧನಂಜಯ ಹಂಪಯ್ಯನ ಮಾಳಿಗೆ ಉಪಾಧ್ಯಕ್ಷ ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ರೈತ ಮುಖಂಡರಾದ ಬಸ್ತಿಹಳ್ಳಿ ಜಿ.ಸುರೇಶ್‍ಬಾಬು, ಹೊರಕೇರಪ್ಪ ಸೇರಿ ರೈತರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ