ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ಲಿಖಿತವಾಗಿ ನೀಡಿದ ಭರವಸೆಯಂತೆ ನಡೆದುಕೊಳ್ಳದ ಕೇಂದ್ರ ಸರ್ಕಾರ ಕೃಷಿ ಮಾರುಕಟ್ಟೆ ಚೌಕಟ್ಟು ನೀತಿ. ಸೀಡ್ ಆಕ್ಟ್, ವಿದ್ಯುಚ್ಚಕ್ತಿ ಕಾಯಿದೆ ಜಾರಿಗೆ ತರಲು ಮುಂದಾಗಿರುವುದು ಅನ್ನದಾತ ರೈತನಿಗೆ ಬಹುದೊಡ್ಡ ಪೆಟ್ಟು ನೀಡಲಿದೆ. ರಾಜ್ಯದಲ್ಲಿ ಈ ಕಾಯಿದೆಯನ್ನು ಜಾರಿಗೆ ತರಬಾರದು. ಭೂ ಸುಧಾರಣೆ ಕಾಯಿದೆ ತಿದ್ದುಪಡಿ ಮಾಡಿದ ನಂತರ ಹಿಂದಕ್ಕೆ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿ ಇದುವರೆವಿಗೂ ವಾಪಸ್ ಪಡೆದಿಲ್ಲ. ಇದಕ್ಕಾಗಿ ನಮ್ಮ ಹೋರಾಟ ಎಂದು ಹೇಳಿದರು.
ಡಿ.20, 21ರಂದು ಎನ್.ಡಿ.ಸುಂದರೇಶ್ರವರ ನೆನಪಿನ ದಿನ ಆಚರಿಸುತ್ತೇವೆ. ನೂರು ಯುವಕ-ಯುವತಿಯರಿಗೆ ಎರಡು ದಿನಗಳ ಕಾಲ ಎಂಟು ಗೋಷ್ಠಿಗಳು ನಡೆಯಲಿದ್ದು, ಒಂದು ಸಾವಿರ ಯುವಕರಿಗೆ ಎರಡು ವರ್ಷಗಳ ಕಾಲ ಆರು ಶಿಬಿರ ಆಯೋಜಿಸಿ ವೈಚಾರಿಕ ಚಳುವಳಿಯ ಕುರಿತು ಪ್ರಜ್ಞೆ ಮೂಡಿಸುವುದು ನಮ್ಮ ಉದ್ದೇಶ. ರೈತ ನಾಯಕ ಕೆ.ಎಸ್.ಪುಟ್ಟಣ್ಣಯ್ಯನವರ ಜನ್ಮದಿನಾಚರಣೆಯನ್ನು ಮೈಸೂರು ತಾಲೂಕಿನ ಇಲವಾಲದಲ್ಲಿ ಆಚರಿಸಲಾಗುವುದು. ಇದೆ ಸಂದರ್ಭದಲ್ಲಿ ಅವರ ಪ್ರತಿಮೆ ಅನಾವರಣಗೊಳಿಸಲಾಗುವುದು ಎಂದರು.ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ರೈತ ವಿರೋಧಿ ಕಾಯಿದೆಗಳನ್ನು ರಾಜ್ಯ ಸರ್ಕಾರ ಹಿಂದಕ್ಕೆ ಪಡೆದಿಲ್ಲ. ಅದಕ್ಕಾಗಿ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಒತ್ತಾಯಿಸುತ್ತೇವೆ ಎಂದರು.
ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷರಾದ ಕೆ.ಪಿ.ಭೂತಯ್ಯ, ಶಿವಾನಂದ ಕುಗ್ವೆ, ಎ.ಎಲ್.ಕೆಂಪೆಗೌಡ, ಜಿಲ್ಲಾಧ್ಯಕ್ಷ ಧನಂಜಯ ಹಂಪಯ್ಯನ ಮಾಳಿಗೆ ಉಪಾಧ್ಯಕ್ಷ ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ರೈತ ಮುಖಂಡರಾದ ಬಸ್ತಿಹಳ್ಳಿ ಜಿ.ಸುರೇಶ್ಬಾಬು, ಹೊರಕೇರಪ್ಪ ಸೇರಿ ರೈತರು ಉಪಸ್ಥಿತರಿದ್ದರು.