ಹುಬ್ಬಳ್ಳಿ: ಬಸ್ ಪ್ರಯಾಣ ದರ ಏರಿಕೆಗೆ ಕೇಂದ್ರ ಸರ್ಕಾರವೇ ನೇರ ಕಾರಣ. ಈ ಪ್ರಯಾಣ ದರ ಏರಿಕೆ ಅನಿವಾರ್ಯವಾಗಿತ್ತು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಆರೋಪಿಸಿದರು.
ಚರ್ಚೆಗೆ ನಾವು ಸಿದ್ಧ:
ಬಿಜೆಪಿಯವರು ದರ ಏರಿಕೆ ಕುರಿತು ಸುಮ್ಮನೆ ಮಾತನಾಡುತ್ತಿದ್ದಾರೆ. ಅವರು ಚರ್ಚೆಗೆ ಬಂದರೆ ನಾವು ಸಿದ್ಧರಿದ್ದೇವೆ. ಕೇಂದ್ರ ಸರ್ಕಾರ ಮನಸ್ಸು ಮಾಡಿದರೆ ಡೀಸೆಲ್ ಅನ್ನು ₹30ರಿಂದ ₹40ಕ್ಕೆ ಕೊಡಬಹುದು. ಈ ಹಿಂದೆ ಡಾ. ಮನಮೋಹನ ಸಿಂಗ್ ಅವರು ಪ್ರಧಾನಿಯಾಗಿದ್ದ ವೇಳೆ ₹103 ಡಾಲರ್ಗೆ 1 ಬ್ಯಾರಲ್ ಇಂಧನ ಖರೀದಿ ಮಾಡುತ್ತಿದ್ದರು. ₹90 ಸಾವಿರ ಕೋಟಿ ಸಬ್ಸಿಡಿ ಕೊಡುತ್ತಿದ್ದರು. ಇಂಧನ ಬೆಲೆ ಜಾಸ್ತಿಯಾದಾಗ ಎಲ್ಲ ವಸ್ತುಗಳ ಬೆಲೆ ಗಗನಕ್ಕೆರುತ್ತವೆ. ಸಾಗಾಟ ವೆಚ್ಚ ಜಾಸ್ತಿಯಾದಾಗ ಜನಸಾಮಾನ್ಯರ ಮೇಲೆ ಅದರ ಪರಿಣಾಮ ಬೀರುತ್ತದೆ ಎಂದರು.2004ರಿಂದ 2014ರ ವರೆಗೆ ₹60 ರಿಂದ ₹65 ಕ್ಕೆ ಇಂಧನ ಬೆಲೆ ಇತ್ತು. ಸದ್ಯ ಜಾಗತಿಕವಾಗಿ ಇಂಧನ ಬೆಲೆ ಇಳಿದಿದೆ. ನಮ್ಮ ದೇಶದಲ್ಲಿ ಸದ್ಯ ₹25-30ಕ್ಕೆ ಡೀಸೆಲ್, ಪೆಟ್ರೋಲ್ ಕೊಡಬಹುದು. ರಿಲಯನ್ಸ್ ಪೆಟ್ರೋಲ್ ಬಂಕ್ ಉಳಿಸಬೇಕು ಎನ್ನುವ ಉದ್ದೇಶದಿಂದ ಪ್ರಧಾನಿಗಳು ಕೊಡುತ್ತಿಲ್ಲ. ಕೇಂದ್ರದಲ್ಲಿ ಸಬ್ಸಿಡಿ ಜಾಸ್ತಿ ಮಾಡಿದರೆ, ರಿಲಯನ್ಸ್ ಪೆಟ್ರೋಲ್ ಬಂಕ್ ನಮ್ಮೊಂದಿಗೆ ಸ್ಪರ್ಧೆ ಮಾಡಲಾಗುವುದಿಲ್ಲ. ಮನಮೋಹನ ಸಿಂಗ್ ಕೊಟ್ಟಂತಹ ಸಬ್ಸಿಡಿ ಕೊಟ್ಟರೆ ಭಾರತದಲ್ಲಿರುವಂತಹ ರಿಲಯನ್ಸ್ ಬಂಕ್ಗಳೆಲ್ಲ ಮುಚ್ಚಿ ಹೋಗುತ್ತವೆ. ಕೇಂದ್ರ ಸಬ್ಸಿಡಿ ಕೊಟ್ಟರೆ ವಸ್ತುಗಳ ಬೆಲೆ ಕಡಿಮೆಯಾಗುತ್ತವೆ ಎಂದರು.
ಎಲ್ಲದಕ್ಕೂ ಪ್ರತಿಭಟನೆ ಮಾಡುವ ಬಿಜೆಪಿಯವರು ಜಿಎಸ್ಟಿಗಾಗಿ ಏಕೆ ಪ್ರತಿಭಟನೆ ಮಾಡುತ್ತಿಲ್ಲ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮೈ ಪ್ಯಾಜ್ ನಹಿ ಖಾತಿ ಹೂಂ ಎಂದು ಹೇಳಿದ್ದರು. ಕೇಂದ್ರ ಹಣಕಾಸು ಸಚಿವರು ಹೀಗೆ ಹೇಳಬಹುದೇ? ಬಿಜೆಪಿ ದೇಶವನ್ನು ಕೊಳ್ಳೆ ಹೊಡೆಯುತ್ತಿದೆ ಎಂದು ಆರೋಪಿಸಿದರು.
ಹುಬ್ಬಳ್ಳಿ:
ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವಿದೇಶ ಪ್ರವಾಸದಲ್ಲಿದ್ದಾರೆ. ಸಚಿವ ಸಂಪುಟ ಸಭೆ ಆದ ಬಳಿಕ ಸಚಿವ ಜಾರಕಿಹೊಳಿ ಅವರು ಔತಣಕೂಟ ಏರ್ಪಡಿಸಿದ್ದರು. ಹೋಗಿ ಊಟ ಮಾಡಿದ್ದೇವೆ. ಅಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಗ್ಗೆ ಚರ್ಚೆ ನಡೆಯಿತು ಎಂಬುದೆಲ್ಲ ಮಾಧ್ಯಮ ಸೃಷ್ಟಿ ಎಂದರು.
ಹು-ಧಾ ನಡುವೆ ಬಿಆರ್ಟಿಎಸ್ ಬದಲಿಗೆ ಲಘು ರೈಲು ಸಾರಿಗೆ (ಎಲ್ಆರ್ಟಿ) ಮಾದರಿ ಪರಿಚಯಿಸುವ ಕುರಿತು ಚಿಂತನೆ ನಡೆದಿದೆ. ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ (ಪಿಪಿಪಿ) ಅನುಷ್ಠಾನಗೊಳಿಸಬೇಕು, ಹೂಡಿಕೆ, ನಿರ್ವಹಣೆಯ ಎಲ್ಲ ಜವಾಬ್ದಾರಿಯನ್ನು ಅವರೇ ನಿರ್ವಹಿಸಬೇಕು ಎಂಬ ಕುರಿತು ಮಾತುಕತೆ ನಡೆದಿದೆ ಎಂದರು.