ರೈತರ, ಕಾರ್ಮಿಕರ ಸಮಸ್ಯೆಗೆ ಸ್ಪಂದಿಸದ ಕೇಂದ್ರ ಸರ್ಕಾರ

KannadaprabhaNewsNetwork |  
Published : Oct 28, 2024, 12:46 AM IST
27ಎಚ್‌ಪಿಟಿ2- ಹೊಸಪೇಟೆಯ ಅಂಬೇಡ್ಕರ್‌ ಭವನದಲ್ಲಿ ಭಾನುವಾರ ನಡೆದ ಸಿಪಿಐಎಂ ಪಕ್ಷದ 12ನೇ ಹೊಸಪೇಟೆ ತಾಲೂಕು ಸಮ್ಮೇಳನ ಉದ್ಘಾಟಿಸಿ ಸಿಪಿಐಎಂ ಪಕ್ಷದ ವಿಜಯನಗರ ಜಿಲ್ಲಾ ಮುಖಂಡ ಆರ್‌. ಭಾಸ್ಕರ್‌ ರೆಡ್ಡಿ ಮಾತನಾಡಿದರು. | Kannada Prabha

ಸಾರಾಂಶ

ಕಾರ್ಮಿಕರು, ಬಡ, ಮಧ್ಯಮ ವರ್ಗದವರ ಸಮಸ್ಯೆಗಳಿಗೆ ಪರಿಹಾರ ನೀಡುತ್ತಿಲ್ಲ.

ಹೊಸಪೇಟೆ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ರೈತರು, ಕಾರ್ಮಿಕರು, ಬಡ, ಮಧ್ಯಮ ವರ್ಗದವರ ಸಮಸ್ಯೆಗಳಿಗೆ ಪರಿಹಾರ ನೀಡುತ್ತಿಲ್ಲ. ಬೆಲೆ ಏರಿಕೆ ಗಗನಕ್ಕೇರಿದರೂ ನಿಯಂತ್ರಣ ಮಾಡುತ್ತಿಲ್ಲ ಎಂದು ಸಿಪಿಎಂ ಪಕ್ಷದ ವಿಜಯನಗರ ಜಿಲ್ಲಾ ಮುಖಂಡ ಆರ್‌. ಭಾಸ್ಕರ್‌ ರೆಡ್ಡಿ ಹೇಳಿದರು.

ನಗರದ ಅಂಬೇಡ್ಕರ್‌ ಭವನದಲ್ಲಿ ಭಾನುವಾರ ನಡೆದ ಸಿಪಿಎಂ ಪಕ್ಷದ 12ನೇ ಹೊಸಪೇಟೆ ತಾಲೂಕು ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ದೇಶದ ಯುವಕರು, ಕಾರ್ಮಿಕರು ಹಾಗೂ ರೈತರಿಗೆ ನೀಡಿದ ಭರವಸೆಗಳಿಂದ ವಿಮುಖರಾಗಿದ್ದಾರೆ. ಹಾಗಾಗಿ ಈ ಬಾರಿ ಬಿಜೆಪಿ ಕೇಂದ್ರದಲ್ಲಿ ಬಹುಮತ ಪಡೆದಿಲ್ಲ. ಈಗ ಮಿತ್ರಪಕ್ಷಗಳೊಂದಿಗೆ ಎನ್‌ಡಿಎ ಮೈತ್ರಿಕೂಟದ ಸರ್ಕಾರ ನಡೆಯುತ್ತಿದೆ. ದೇಶದ ಜನರಿಗೆ ಬಿಜೆಪಿ ಸುಳ್ಳು ಭರವಸೆಗಳು ಗೊತ್ತಾಗಿದೆ. ಮುಂಬರುವ ದಿನಗಳಲ್ಲಿ ಕಮ್ಯುನಿಷ್ಟ್‌ ಪಾರ್ಟಿಗೆ ಉತ್ತಮ ಭವಿಷ್ಯ ಇದೆ ಎಂದರು.

ದೇಶದಲ್ಲಿ ಸರ್ಕಾರಿ ಸಂಸ್ಥೆಗಳನ್ನು ಬಂದ್‌ ಮಾಡಲಾಗುತ್ತಿದೆ. ವಿಮಾನ ನಿಲ್ದಾಣ, ಬಂದರುಗಳನ್ನು ಖಾಸಗಿಯವರಿಗೆ

ನೀಡಲಾಗುತ್ತಿದೆ. ಸರ್ಕಾರಿ ಉದ್ಯೋಗಗಳನ್ನು ಕಡಿತ ಮಾಡಲಾಗುತ್ತಿದೆ. ಇದರಿಂದ ನಿರುದ್ಯೋಗ ತಾಂಡವವಾಡುತ್ತಿದೆ ಎಂದು ದೂರಿದರು.

ರೈತರು ಬೆಳೆದ ಬೆಳೆಗಳಿಗೆ ಸರಿಯಾಗಿ ಬೆಂಬಲ ಬೆಲೆ ದೊರೆಯುತ್ತಿಲ್ಲ. ರೈತರ ಸಾಲಮನ್ನಾ ಮಾಡುತ್ತಿಲ್ಲ. ಬದಲಿಗೆ ಕಾರ್ಪೊರೇಟ್‌ ಸಂಸ್ಥೆಗಳ ₹17 ಲಕ್ಷ ಕೋಟಿ ಸಾಲಮನ್ನಾ ಮಾಡಲಾಗಿದೆ ಎಂದು ದೂರಿದರು.

ಚುನಾವಣೆಯಲ್ಲಿ ಪ್ರತಿಯೊಬ್ಬರ ಖಾತೆಗೆ ₹15 ಲಕ್ಷ ಜಮೆ ಮಾಡಲಾಗುವುದು. ಬೆಲೆ ಏರಿಕೆ ನಿಯಂತ್ರಿಸಲಾಗುವುದು, ರೈತರ ಆದಾಯ ದ್ವಿಗುಣಗೊಳಿಸಲಾಗುವುದು. ಪ್ರತಿ ವರ್ಷ ₹2 ಕೋಟಿ ಉದ್ಯೋಗ ನೀಡಲಾಗುವುದು ಎಂದು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ದೇಶದ ಜನರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಶಿಕ್ಷಣ ವ್ಯಾಪಾರಿಕರಣ ಮಾಡಲಾಗಿದೆ. ನಿವೇಶನ, ಬೆಲೆ ಗಗನಕ್ಕೇರಿದೆ. ಬಡವರಿಗೆ ಮನೆ ನಿರ್ಮಿಸಿಕೊಳ್ಳಲು ಆಗುತ್ತಿಲ್ಲ. ಹೀಗಿದ್ದರೂ ಕೇಂದ್ರದ ಮೋದಿ ಸರ್ಕಾರ ಜನಪರ ಯೋಜನೆಗಳನ್ನು ರೂಪಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡರಾದ ಕರುಣಾನಿಧಿ, ಎಂ. ಜಂಬಯ್ಯ ನಾಯಕ, ಎನ್‌. ಯಲ್ಲಾಲಿಂಗ, ಕೆ. ನಾಗರತ್ನಮ್ಮ, ಎಂ. ಗೋಪಾಲ್‌, ವಿ. ಸ್ವಾಮಿ, ಹೇಮಂತ್‌ ನಾಯ್ಕ, ಶಕುಂತಲಮ್ಮ, ಯಲ್ಲಮ್ಮ, ರಮೇಶ್‌ಕುಮಾರ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!