ಜಿಪಂ ಅಧಿಕಾರಿ, ಸಿಬ್ಬಂದಿಗೆ ಸ್ವಚ್ಛತಾ ಟಾಸ್ಕ್‌ ನೀಡಿದ ಸಿಇಒ

KannadaprabhaNewsNetwork |  
Published : Apr 08, 2024, 01:00 AM IST
ಜಿಲ್ಲಾ ಪಂಚಾಯತ್ ಆವರಣದಲ್ಲಿ ಹಮ್ಮಿಕೊಂಡ ಸ್ವಚ್ಚತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಜಿಪಂ ಸಿಇಓ ರಿಶಿ ಆನಂದ | Kannada Prabha

ಸಾರಾಂಶ

ವಿಜಯಪುರ: ಸ್ವಚ್ಛತೆ ಎಂಬುದು ನಾಗರಿಕ ಜೀವನದ ಮೊದಲ ಆದ್ಯತೆಯಾಗಿರಬೇಕು. ನಾವು ವಾಸಿಸುವ ಸ್ಥಳವನ್ನು ಶುಚಿಯಾಗಿ ಇಟ್ಟುಕೊಂಡರೆ ಮಹಾತ್ಮ ಗಾಂಧೀಜಿಯವರ ಆಶಯ ಸ್ವಚ್ಚ ಭಾರತದ ಪರಿಕಲ್ಪನೆ ಸಾಕಾರವಾಗುತ್ತದೆ. ಹಾಗಾಗಿ ಇನ್ನು ಮುಂದೆ ಪ್ರತಿ ತಿಂಗಳ ಮೊದಲನೇ ಶನಿವಾರವನ್ನು ಸ್ವಚ್ಛ ಶನಿವಾರ ಎನ್ನುವ ಪರಿಕಲ್ಪನೆಯನ್ನು ಹಮ್ಮಿಕೊಂಡಿದ್ದೇವೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಶಿ ಆನಂದ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ: ಸ್ವಚ್ಛತೆ ಎಂಬುದು ನಾಗರಿಕ ಜೀವನದ ಮೊದಲ ಆದ್ಯತೆಯಾಗಿರಬೇಕು. ನಾವು ವಾಸಿಸುವ ಸ್ಥಳವನ್ನು ಶುಚಿಯಾಗಿ ಇಟ್ಟುಕೊಂಡರೆ ಮಹಾತ್ಮ ಗಾಂಧೀಜಿಯವರ ಆಶಯ ಸ್ವಚ್ಚ ಭಾರತದ ಪರಿಕಲ್ಪನೆ ಸಾಕಾರವಾಗುತ್ತದೆ. ಹಾಗಾಗಿ ಇನ್ನು ಮುಂದೆ ಪ್ರತಿ ತಿಂಗಳ ಮೊದಲನೇ ಶನಿವಾರವನ್ನು ಸ್ವಚ್ಛ ಶನಿವಾರ ಎನ್ನುವ ಪರಿಕಲ್ಪನೆಯನ್ನು ಹಮ್ಮಿಕೊಂಡಿದ್ದೇವೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಶಿ ಆನಂದ ಹೇಳಿದರು.

ಜಿಲ್ಲಾ ಪಂಚಾಯತಿ ಆವರಣದಲ್ಲಿ ಹಮ್ಮಿಕೊಂಡ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಿಲ್ಲಾ ಪಂಚಾಯತಿ ಕಾರ್ಯಾಲಯದ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಇನ್ನು ಮುಂದೆ ಕಚೇರಿಯಲ್ಲಿ ಸ್ವಚ್ಛ ಶನಿವಾರ ಎಂಬ ಪರಿಕಲ್ಪನೆಯನ್ನು ಪರಿಚಯಿಸುತ್ತಿದೆ. ಇದರ ಅಂಗವಾಗಿ ಪ್ರತಿ ತಿಂಗಳ ಮೊದಲನೆಯ ಶನಿವಾರದಂದು ಜಿಲ್ಲಾ ಪಂಚಾಯತಿಯ ಕಾರ್ಯಾಲಯದ ಎಲ್ಲ ಒಳ ಮತ್ತು ಹೊರ ಆವರಣವನ್ನು ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ವಚ್ಛಗೊಳಿಸಬೇಕು. ಈ ಮೂಲಕ ತಾವು ಇರುವ ಸ್ಥಳವನ್ನು ಶುಚಿಗೊಳಿಸಿ, ಮಾದರಿ ಕಚೇರಿಯನ್ನಾಗಿ ಮಾಡುವ ಸದುದ್ದೇಶದಿಂದ ಈ ಕಾರ್ಯಕ್ರಮ ಜಾರಿ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಸ್ವಚ್ಛತಾ ಕಾರ್ಯಕ್ಕೆ ಕಚೇರಿಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಪ್ರತಿ ತಿಂಗಳು ಮೊದಲನೇ ಶನಿವಾರ ಸಮಯಕ್ಕೆ ಸರಿಯಾಗಿ ಹಾಜರಿದ್ದು, ಕಾರ್ಯಾಲಯದ ಸೊಬಗನ್ನು ಹೆಚ್ಚಿಸಲು ನಾವೆಲ್ಲ ಕಾರ್ಯಪ್ರವೃತ್ತರಾಗೋಣ, ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛ ಹಾಗೂ ಸಂರಕ್ಷಣೆ ಮಾಡಿದರೆ ಮಾತ್ರ ಆರೋಗ್ಯವಾಗಿರಲಿ ಸಾಧ್ಯ. ಈ ಹಿನ್ನಲೆಯಲ್ಲಿ ಪ್ರತಿ ತಿಂಗಳ ಮೊದಲ ಶನಿವಾರ ಕಚೇರಿಯನ್ನು ಸ್ವಚ್ಛಗೊಳಿಸಿ ಸುಂದರ ವಾತಾವರಣವನ್ನು ನಿರ್ಮಾಣ ಮಾಡೋಣ ಎಂದು ಹೇಳಿದರು.

ಜಿಪಂ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಉಪಕಾರ್ಯದರ್ಶಿ ಬಿ.ಎಸ್.ಮೂಗನೂರಮಠ, ಯೋಜನಾ ನಿರ್ದೇಶಕ ಸಿ.ಆರ್‌.ಮುಂಡರಗಿ, ಸಹಾಯಕ ಕಾರ್ಯದರ್ಶಿ ಅನುಸೂಯಾ ಚಲವಾದಿ, ಜಿಲ್ಲಾ ಪಂಚಾಯತಿಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ವೇಳೆ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!