ರಾಮನಗರ: ನಗರದ 2ನೇ ವಾರ್ಡ್ ವ್ಯಾಪ್ತಿಯ ವಿನಾಯಕ ನಗರ ಬಡಾವಣೆಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಸೋಮವಾರ ಭೂಮಿಪೂಜೆ ನೆರವೇರಿಸಿದರು.
ನಗರದ ಸರ್ವಾಂಗೀಣ ಅಭಿವೃದ್ಧಿಗೆ ನಗರಸಭೆ ಬದ್ಧವಾಗಿದ್ದು, ಯುಐಡಿಎಫ್ ಹಾಗೂ ನಗರೋತ್ಥಾನ ಯೋಜನೆ ಅಡಿಯಲ್ಲಿ ಆದ್ಯತೆ ಮೇರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ನಗರದ ಎಲ್ಲ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದರು.
ರಸ್ತೆ ನಿರ್ಮಾಣ ಕಾಮಗಾರಿಯ ಗುಣಮಟ್ಟದಲ್ಲಿ ರಾಜಿ ಪ್ರಶ್ನೆಯೇ ಇಲ್ಲ. ಗುತ್ತಿಗೆದಾರರು ಸ್ಥಳೀಯರೇ ಆಗಿರುವುದರಿಂದ ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡುವ ನಂಬಿಕೆ ಇದೆ. ಇಲ್ಲಿವರೆಗೆ ಅವರು ನಿರ್ವಹಿಸಿರುವ ಕಾಮಗಾರಿಯಲ್ಲಿ ಎಲ್ಲೂ ಅಪಸ್ವರ ಕೇಳಿ ಬಂದಿಲ್ಲ. ಎಂಜಿನಿಯರ್ ಗಳು ಗುಣಮಟ್ಟದ ವಿಚಾರದಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಕೆ.ಶೇಷಾದ್ರಿ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಗೋವಿಂದರಾಜು, ಎಇಇ ವಿಶ್ವನಾಥ್ , ಜೆಇ ನಿರ್ಮಲಾ, ರಾಮನಗರ ಟಿಎಪಿಸಿಎಂಎಸ್ ಅಧ್ಯಕ್ಷ ದೊಡ್ಡಿ ಸುರೇಶ್ , ಮುಖಂಡರಾದ ರಾಜು, ಶಿವರಾಜು, ಲೋಕೇಶ್ , ಮಲ್ಲಿಕಾರ್ಜುನ್ ಮತ್ತಿತರರು ಹಾಜರಿದ್ದರು.
ರಾಮನಗರದ ವಿನಾಯಕನಗರ ಬಡಾವಣೆಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಭೂಮಿ ಪೂಜೆ ನೆರವೇರಿಸಿದರು.