ಹಿರೇಕೆರೂರು: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶ್ರಾವಣ ಮಾಸದಲ್ಲಿ ನಡೆಯುವ ಈ ಗೋಷ್ಠಿಗಳು ಉತ್ತಮವಾಗಿ ನಡೆಯುತ್ತಿರುವುದು ಖುಷಿಯ ವಿಚಾರ ಎಂದು ಶಾಸಕ ಯು.ಬಿ. ಬಣಕಾರ್ ಹೇಳಿದರು.ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಿಇಎಸ್ ವಿದ್ಯಾಸಂಸ್ಥೆಯ ಶಾಲಾ ಆವರಣದಲ್ಲಿ ಸೋಮವಾರ ಶ್ರಾವಣ ಸಂಜೆಯ ನಾಲ್ಕನೇ ಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಳ್ಳಿಗಳಲ್ಲಿ ಎಲ್ಲ ಜನರು ಶ್ರಾವಣ ಮಾಸವನ್ನು ಅತ್ಯಂತ ಪವಿತ್ರ ಹಾಗೂ ಭಕ್ತಿಯಿಂದ ದೇವರನ್ನು ಪೂಜಿಸಿ, ಪುರಾಣ ಪ್ರವಚನಗಳನ್ನು ಏರ್ಪಡಿಸುವ ಮೂಲಕ ಸಮಾಜದಲ್ಲಿ ಶಾಂತಿ ನೆಲೆಸುವಂತೆ ಮಾಡುವರು. ಇಂಥ ಮಾಸದಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇಂಥ ಗೋಷ್ಠಿಗಳನ್ನು ಏರ್ಪಡಿಸಿ ಜನರಲ್ಲಿ ಅರಿವು ಮೂಡಿಸುವ ಕಾರ್ಯ ಶ್ಲಾಘನೀಯ ಎಂದರು.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎನ್. ಸುರೇಶಕುಮಾರ, ಸಂಸ್ಥೆಯ ಆಡಳಿತಾಧಿಕಾರಿ ವೀರಭದ್ರಯ್ಯ, ಸಂಸ್ಥೆಯ ಅಧ್ಯಕ್ಷ ಎಸ್.ಬಿ. ತಿಪ್ಪಣ್ಣನವರ, ಪಪಂ ಅಧ್ಯಕ್ಷ ಸುಧಾ ಚಿಂದಿ, ಉಪಾಧ್ಯಕ್ಷ ರಾಜು ಕರಡರೆ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬುರುಡಿಕಟ್ಟಿ, ಈರಣ್ಣ ಬಣಕಾರ, ಕನ್ನಡ ಸಾಹಿತ್ಯ ಪರಿಷತ್ ಗೌರವ ಕೋಶಾಧ್ಯಕ್ಷ ಮಹೇಂದ್ರ ಬಡಳ್ಳಿ, ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಶ್ರೀಧರ್, ಬಿಇಡಿ ಕಾಲೇಜಿನ ಪ್ರಾಂಶುಪಾಲ ಬಿ.ಪಿ. ಹಳ್ಳೇರ, ಕಾರ್ಯದರ್ಶಿ ಡಾ. ಎಸ್. ಬಿ. ಚನ್ನಗೌಡ್ರ ಮಾತನಾಡಿದರು. ಪಿ.ಎಸ್. ಸಾಲಿ ಕಾರ್ಯಕ್ರಮ ನಿರೂಪಿಸಿದರು. ಎಮ್.ಎಮ್. ಮತ್ತೂರ ವಂದಿಸಿದರು. ಕಾರ್ಯಕ್ರಮದಲ್ಲಿ ಕಸಾಪ ಪದಾಧಿಕಾರಿಗಳು, ಸಿಇಎಸ್ ವಿದ್ಯಾಸಂಸ್ಥೆಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ, ಗುರುಬಳಗ, ಬಿಇಡಿ ಕಾಲೇಜು, ಕೆ.ಎಚ್. ಪಾಟೀಲ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಪ್ರೌಢಶಾಲೆಯ ಮುಖ್ಯ ಶಿಕ್ಷಕರು, ಇದ್ದರು.