ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದಲ್ಲಿ ಭಾನುವಾರ ಬಿಜೆಪಿ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಂಪೂರ್ಣ ನಿಷ್ಕ್ರಯವಾಗಿದ್ದು, ಕೋವಿಡ್ನಿಂದಾಗಿ ಇಡೀ ವಿಶ್ವವೇ ತಲ್ಲಣಿಸಿತ್ತು. ಕೋಟ್ಯಾಂತರ ಜನರು ವಿಶ್ವಾದ್ಯಂತ ಪ್ರಾಣ ಕಳೆದುಕೊಂಡರು. ಆದರೆ, ಮೋದಿ ದೂರದೃಷ್ಟಿಯಿಂದ ದೊಡ್ಡ ಪ್ರಮಾಣದ ಸಾವು, ನೋವು ಸಂಭವಿಸಿಲ್ಲ ಎಂದರು.
ದೇಶದ 140 ಕೋಟಿ ಜನರ ಜೀವ ರಕ್ಷಣೆ ಮಾಡಿದ್ದು ನರೇಂದ್ರ ಮೋದಿ. ಇಂತಹ ಮೋದಿಯವರ ಋಣ ತೀರಿಸುವ ಅವಕಾಶ ಬಂದಿದೆ. ಪ್ರತಿಯೊಬ್ಬ ಮತದಾರರೂ ತಮ್ಮ ಅಮೂಲ್ಯ ಮತ ನೀಡುವ ಮೂಲಕ ನರೇಂದ್ರ ಮೋದಿ ಋಣ ತೀರಿಸಬೇಕು ಎಂದು ಅವರು ಮನವಿ ಮಾಡಿದರು.ದೇಶದ ಜನರ ಹಿತಕ್ಕಾಗಿ ಪ್ರತಿಯೊಬ್ಬ ಮತದಾರರೂ ಬಿಜೆಪಿಗೆ ಮತ ನೀಡಬೇಕು. ನರೇಂದ್ರ ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನಿಯಾಗಿಸಲು ದಾವಣಗೆರೆಯಲ್ಲಿ ತಮಗೆ, ಹಾವೇರಿಯಲ್ಲಿ ಬಸವರಾಜ ಬೊಮ್ಮಾಯಿಯವರಿಗೆ ಮತ ನೀಡಿ, ಭಾರೀ ಮತಗಳ ಅಂತರದಲ್ಲಿ ಗೆಲ್ಲಿಸಬೇಕು. ಮೋದಿ ನಾರಿ ಶಕ್ತಿಯನ್ನು ಸದೃಢಗೊಳಿಸಲು ಹಲವಾರು ಯೋಜನೆ ಜಾರಿಗೆ ತಂದಿದ್ದಾರೆ. ಆದರೆ, ಕಾಂಗ್ರೆಸ್ಸಿನವರು ಅದೇ ನಾರಿ ಶಕ್ತಿಯನ್ನು ಅವಮಾನಿಸುವ ಕೆಲಸ ಮಾಡುತ್ತಿದ್ದಾರೆ.
- ನರೇಂದ್ರ ಮೋದಿ, ಪ್ರಧಾನ ಮಂತ್ರಿ. ಪ್ರಧಾನಿ ನರೇಂದ್ರ ಮೋದಿಗೆ ಶ್ರೀರಾಮನ ಬೆಳ್ಳಿ ಮೂರ್ತಿ ಕಾಣಿಕೆ ನೀಡಿ, ಗೌರವಿಸಲಾಯಿತು. ಶ್ರೀರಾಮ ಮೂರ್ತಿ ನೆನಪಿನ ಕಾಣಿಕೆಯನ್ನು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣದ ಬಳಿಕ ದಾವಣಗೆರೆಗೆ ಆಗಮಿಸುತ್ತಿರುವ ಪ್ರಧಾನಿಗೆ ಶ್ರೀರಾಮನ ಮೂರ್ತಿ ಕಾಣಿಕೆ ನೀಡಿ, ಸಂಸದ ಜಿಎಂ ಸಿದ್ದೇಶ್ವರ, ಸಹೋದರರು, ಕುಟುಂಬ ವರ್ಗ ಸನ್ಮಾನಿಸಿತು.