ಅಧಿಕಾರದಲ್ಲಿದ್ದರೂ ಕಾಂಗ್ರೆಸ್‌ ಸರ್ಕಾರ ಸತ್ತಿದೆ

KannadaprabhaNewsNetwork |  
Published : Jul 11, 2025, 11:48 PM IST
ಜೆಡಿಎಸ್ | Kannada Prabha

ಸಾರಾಂಶ

ರಾಜ್ಯದ ಯಾವುದೋ ಒಂದು ಭಾಗಕ್ಕೆ ಜೆಡಿಎಸ್‌ ಸೀಮಿತವಾಗಿಲ್ಲ. ಬದಲಾಗಿ ರಾಜ್ಯದ ಉದ್ದಗಲಕ್ಕೂ ಪ್ರಾದೇಶಿಕ ಪಕ್ಷಕ್ಕೆ ಜನರ ಮನ್ನಣೆ ದೊರೆತಿದೆ. ಈಗಾಗಲೇ ಎನ್‌ಡಿಎ ಜತೆ ಮೈತ್ರಿ ಮಾಡಿಕೊಂಡಿದ್ದು ಅದನ್ನು ಮುಂದುವರೆಸಿಕೊಂಡು ಹೋಗುವುದರ ಜೊತೆಗೆ ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಚಿಂತಾಮಣಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸತ್ತ ಸರ್ಕಾರವಾಗಿದ್ದು ಗ್ಯಾರಂಟಿ ಯೋಜನೆಗಳ ನೆಪದಲ್ಲಿ ಜನರಿಗೆ ಮಂಕುಬೂದಿ ಎರಚಿ ಅಧಿಕಾರದ ಗದ್ದುಗೆಯನ್ನು ಹಿಡಿದಿದೆ. ಜನ ಸಾಮಾನ್ಯರಿಂದ ಹಲವು ರೀತಿಯ ತೆರಿಗೆ, ದಿನನಿತ್ಯ ಬಳಕೆಯ ವಸ್ತುಗಳ ಮೇಲೆ ಬೆಲೆ ಏರಿಕೆ, ದುಪ್ಪಟ್ಟು ತೆರಿಗೆ ಮೂಲಕ ಜನತೆಯ ಸುಲಿಗೆ ಮಾಡುತ್ತಿದೆ ಎಂದು ರಾಜ್ಯ ಯುವ ಜೆಡಿಎಸ್‌ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.

ಸದಸ್ಯತ್ವಕ್ಕಾಗಿ ಮಿಸ್ಡ್‌ ಕಾಲ್‌

ನಗರದ ಹೊರವಲಯದ ಕಡಪ-ಬೆಂಗಳೂರು ರಸ್ತೆಯ ಜೆ ಕೆ ಭವನದಲ್ಲಿ ಶುಕ್ರವಾರ ಪಕ್ಷದ ಕಾರ್ಯಕರ್ತರ ಸದಸ್ಯತ್ವ ಡಿಜಿಟಲ್ ನೋಂದಣಿ ಅಭಿಯಾನದಲ್ಲಿ ಮಾತನಾಡಿ ಕಾರ್ಯಕರ್ತರಿಗೆ ಬಲ ತುಂಬುವ ಉದ್ದೇಶದಿಂದ ಹಾಗೂ ಕಾರ್ಯಕರ್ತರಿಗೆ ಸದಾ ಬೆಂಬಲವಾಗಿ ನಿಲ್ಲುವ ಉದ್ದೇಶದಿಂದ ಮತ್ತು ಪಕ್ಷ ಸಂಘಟನೆ ಗಾಗಿ ಮಿಸ್ಡ್ ಕಾಲ್ ಅಭಿಯಾನದ ಮೂಲಕ ಸದಸ್ಯತ್ವ ನೋಂದಣಿ ಮಾಡಿಸಿಕೊಳ್ಳಲಾಗುತ್ತಿದೆ ಎಂದರು.

ರಾಜ್ಯದ ಯಾವುದೋ ಒಂದು ಭಾಗಕ್ಕೆ ಜೆಡಿಎಸ್‌ ಸೀಮಿತವಾಗಿಲ್ಲ. ಬದಲಾಗಿ ರಾಜ್ಯದ ಉದ್ದಗಲಕ್ಕೂ ಪ್ರಾದೇಶಿಕ ಪಕ್ಷಕ್ಕೆ ಜನರ ಮನ್ನಣೆ ದೊರೆತಿದೆ. ಈಗಾಗಲೇ ಎನ್‌ಡಿಎ ಜತೆ ಮೈತ್ರಿ ಮಾಡಿಕೊಂಡಿದ್ದು ಅದನ್ನು ಮುಂದುವರೆಸಿಕೊಂಡು ಹೋಗುವುದರ ಜೊತೆಗೆ ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎಂದರು.

ಜಿಪಂ, ತಾಪಂ ಚುನಾವಣೆ

ಯಾವುದೇ ಚುನಾವಣೆಯನ್ನು ಹಗುರವಾಗಿ ಪರಿಗಣಿಸದೇ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಪಣತೊಡಬೇಕು. ಕಾರ್ಯಕರ್ತರಿಗೆ ಪಕ್ಷದಲ್ಲಿ ಉತ್ತಮ ಸ್ಥಾನಮಾನವನ್ನು ನೀಡುವ ನಿಟ್ಟಿನಲ್ಲಿ ಪಕ್ಷ ವಿವಿಧ ಪದಾಧಿಕಾರಿಗಳನ್ನು ಆಯ್ಕೆ ಮಾಡಿದೆ. ಮುಂಬರುವ ಡಿಸೆಂಬರ್– ಜನವರಿಯಲ್ಲಿ ಗ್ರಾಪಂ., ತಾಪಂ., ಜಿಪಂ ಹಾಗೂ ಸ್ಥಳೀಯ ಚುನಾವಣೆಗಳು ಬರಲಿದ್ದು ಸ್ಪರ್ಧಿಸುವ ಆಕ್ಷಾಂಕ್ಷಿಗಳು ಕಾರ್ಯಕರ್ತರಾಗಿರುತ್ತಾರೆ ಎಂದರು.

ನಗರದ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಪಾಠ ಶಾಲಾ ಆವರಣದಲ್ಲಿದ್ದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಯನ್ನು ಸ್ಥಳೀಯ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿ ತೆರವುಗೊಳಿಸಿದ್ದಾರೆ. ಪುತ್ಥಳಿ ತೆರವುಗೊಳಿಸುವುದು ಅಂಬೇಡ್ಕರ್‌ರಿಗೆ ರಾಜ್ಯ ಕಾಂಗ್ರೆಸ್‌ ಮಾಡಿರುವ ಅಪಮಾನವಾಗಿದೆಯೆಂದು ಗುಡುಗಿದರು.

ಇಂಥ ಕೆಟ್ಟ ಸರ್ಕಾರ ನೋಡಿಲ್ಲ

ಮಾಜಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಮಾತನಾಡಿ, ತಮ್ಮ ೩೬ ವರ್ಷಗಳ ರಾಜಕಾರಣದಲ್ಲಿ ಇಂತಹ ಕೆಟ್ಟ ಸರ್ಕಾರವನ್ನು ನೋಡಿಲ್ಲವೆಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲೆಯ ೧೧ ತಾಲೂಕುಳಲ್ಲಿ ೮ ತಾಲೂಕುಗಳನ್ನು ಜೆಡಿಎಸ್ ಗೆದ್ದರೆ ರಾಜ್ಯದ ಗದ್ದುಗೆ ಹಿಡಿಯುತ್ತದೆ. ಈ ನಿಟ್ಟಿನಲ್ಲಿ ಕಾರ್ಯಕರ್ತರು ಸಂಕಲ್ಪ ಮಾಡಬೇಕು ಎಂದರು. ಜಿಲ್ಲಾಧಿಕಾರಿಗಳ ಮುಖಾಂತರ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಬಡಬಗ್ಗರ ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸಿ ಕಚೇರಿ ಸುತ್ತ ಅಲೆದಾಡಿಸುವ ಕಾಯಕ ಮಾಡಿಕೊಂಡಿರುವ ಕಾಂಗ್ರೆಸ್ ಜನರಿಗೆ ಕೊಟ್ಟ ಗ್ಯಾರಂಟಿಗಳನ್ನು ಹಂತ ಹಂತವಾಗಿ ಕಡಿತಗೊಳಿಸುತ್ತಿದೆ. ಎಸ್‌ಸಿ ಎಸ್‌ಟಿ ಜನಾಂಗಕ್ಕೆ ಮೀಸಲಿಟ್ಟಿ ಹಣವನ್ನು ಗ್ಯಾರಂಟಿಗೆ ಬಳಸಲಾಗುತ್ತಿದೆ ಎಂದು ಟೀಕಿಸಿದರು.

ನಿಖಿಲ್‌ಗೆ ಅದ್ಧೂರಿ ಸ್ವಾಗತ

ಕಾರ್ಯಕ್ರಮಕ್ಕೂ ಮುನ್ನಾ ಸಂತೇಕಲ್ಲಹಳ್ಳಿ ಬಳಿ ಬಂದ ನಿಖಿಲ್ ಕುಮಾರಸ್ವಾಮಿಗೆ ಅದ್ಧೂರಿ ಬೃಹತ್ ಹೂವಿನ ಹಾರದೊಂದಿಗೆ ಬರಮಾಡಿಕೊಂಡು ನಂತರ ಶ್ರೀಕ್ಷೇತ್ರ ಕೈವಾರ ತಾತಯ್ಯನವರ ಮಠಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ, ತೆರೆದ ವಾಹನದಲ್ಲಿ ಚಿನ್ನಸಂದ್ರಕ್ಕೆ ಕರೆತರಲಾಯಿತು.

ಈ ಸಂದರ್ಭದಲ್ಲಿ ಸಂಸದ ಎಂ.ಮಲ್ಲೇಶ್‌ಬಾಬು, ಶಾಸಕರಾದ ಜಿ.ಕೆ.ವೆಂಕಟಶಿವಾರೆಡ್ಡಿ, ಬಿ.ಎನ್.ರವಿಕುಮಾರ್, ವಿಧಾನಪರಿಷತ್ ಸದಸ್ಯ ಇಂಚರ ಗೋವಿಂದರಾಜು, ವಿಧಾನಪರಿಷತ್ ಮಾಜಿ ಸದಸ್ಯ ತೂಪಲ್ಲಿ ಆರ್.ಚೌಡರೆಡ್ಡಿ, ಪಕ್ಷದ ರಾಜ್ಯ ಕಾರ್ಯದರ್ಶಿ ಡಾ.ರೋಷನ್ ಅಬ್ಬಾಸ್, ಯುವ ಘಟಕದ ರಾಜ್ಯ ಉಪಾಧ್ಯಕ್ಷ ಸಂತೇಕಲ್ಲಹಳ್ಳಿ ವಿ.ಪ್ರಭಾಕರ್, ತಾಲೂಕು ಅಧ್ಯಕ್ಷ ದಿನ್ನಮಿಂದಹಳ್ಳಿ ಬೈರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬುರುಡೆ ಕೇಸ್‌ ಹಿಂದೆ ಅರ್ಬನ್‌ ನಕ್ಸಲ್‌ : ಬಿಜೆಪಿ
‘ಏಕತಾ ಮಹಲ್‌’ ಬಗ್ಗೆ ಯದುವೀರ್‌, ಪ್ರಮೋದಾದೇವಿ ವೈರುಧ್ಯದ ನಡೆ