ಕನ್ನಡಪ್ರಭ ವಾರ್ತೆ ಗುಡಿಬಂಡೆ
ತಾಲೂಕಿನ ಎಲ್ಲೋಡು ಗ್ರಾಮದ ಆದಿನಾರಾಯಣಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಕೇಂದ್ರ ಸರ್ಕಾರದ ಅನುದಾನದಲ್ಲಿ ನಿರ್ಮಿಸುತ್ತಿರುವ ರಸ್ತೆ ಮತ್ತು ಮೂಲಸೌಕರ್ಯ ನಿಧಿ ಅಡಿಯಲ್ಲಿ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಚಿಂತಾಮಣಿ - ಗೌರಿಬಿದನೂರು ರಸ್ತೆಯ (ರಾಜ್ಯ ಹೆದ್ದಾರಿ - 82) ಚೇಳೂರು, ಬಾಗೇಪಲ್ಲಿ, ಎಲ್ಲೋಡು, ಮಲ್ಲೇನಹಳ್ಳಿ ಕ್ರಾಸ್, ವಾಟದಹೊಸಹಳ್ಳಿ ರಸ್ತೆ ಮಾರ್ಗದಲ್ಲಿ 6 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ 3 ಕಿ.ಮಿ. ಉದ್ದದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಕೊಟ್ಟು ಕಿತ್ತುಕೊಳ್ಳುವ ಯೋಜನೆರಾಜ್ಯ ಸರ್ಕಾರ ವಿಧಾನಸಭಾ ಚುನಾವಣಾ ಸಮಯದಲ್ಲಿ ವಿವಿಧ ರೀತಿಯ ಯೋಜನೆಗಳನ್ನು ಜಾರಿ ಮಾಡುವುದಾಗಿ, ಗ್ಯಾರಂಟಿಗಳನ್ನು ಕೊಡುವುದಾಗಿ ಹೇಳಿ ಅಧಿಕಾರ ಗಿಟ್ಟಿಸಿಕೊಂಡಿದೆ. ಆದರೆ ಅಧಿಕಾರಕ್ಕೆ ಬಂದ ಮೇಲೆ ಗ್ಯಾರಂಟಿ ಯೋಜನೆಗಳನ್ನೇನೋ ಜಾರಿ ಮಾಡಿದೆ. ಆದರೆ ಒಂದು ಕಡೆ ಕೊಟ್ಟು ಮತ್ತೊಂದು ಕಡೆ ಕಿತ್ತುಕೊಳ್ಳುವಂತಹ ಕೆಲಸ ಮಾಡುತ್ತಿದೆ. ಶಕ್ತಿ ಯೋಜನೆಯ ಗ್ಯಾರಂಟಿ ಹೆಸರಿನಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಕೊಟ್ಟು, ಪುರುಷರಿಂದ ಹೆಚ್ಚುವರಿ ಟಿಕೆಟ್ ದರ ಪಡೆದುಕೊಳ್ಳುತ್ತಿದೆ. ಜೊತೆಗೆ ಬೆಂಗಳೂರಿನ ಮೆಟ್ರೋ ರೈಲು ಪ್ರಯಾಣ ದರ ಸಹ ಏರಿಕೆ ಮಾಡಿದೆ. ಅದನ್ನು ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುತ್ತಿದೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರದ ಬಜೆಟ್ನಲ್ಲಿ ಮಧ್ಯಮ ವರ್ಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಟ್ಯಾಕ್ಸ್ ಕಡಿತಗೊಳಿಸಿ ಅನುಕೂಲ ಮಾಡಿದೆ. ಮಧ್ಯಮವರ್ಗದ ಜನತೆ ಕಟ್ಟುವಂತಹ ಟ್ಯಾಕ್ಸ್ ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಾಡಿದೆ. ಈ ರೀತಿಯ ಜನಪರವಾದ ನಿರ್ಣಯಗಳನ್ನು ತೆಗೆದುಕೊಳ್ಳುವುದು ಎನ್.ಡಿ.ಎ ಸರ್ಕಾರದಿಂದ ಮಾತ್ರ ಸಾಧ್ಯ. ಆದರೆ ರಾಜ್ಯ ಸರ್ಕಾರ ಮಾತ್ರ ಗ್ಯಾರಂಟಿಗಳ ಹೆಸರಿನಲ್ಲಿ ಸರ್ಕಾರವನ್ನು ದಿವಾಳಿ ಮಾಡಿದೆ ಎಂದರು.
ಜನತೆಗೆ ಮಾಡಿದ ಅವಮಾನ
ಈ ಸಮಯದಲ್ಲಿ ಸಮಾಜ ಸೇವಕ ಹರಿನಾಥರೆಡ್ಡಿ, ಮುಖಂಡರಾದ ಕೋನಪ್ಪರೆಡ್ಡಿ, ಚೆನ್ನಕೃಷ್ಣಾರೆಡ್ಡಿ, ಅಶ್ವತ್ಥರೆಡ್ಡಿ, ಮದ್ದರೆಡ್ಡಿ, ಬೈರಾರೆಡ್ಡಿ, ಕೃಷಿಕ ಸಮಾಜದ ತಾಲೂಕು ಅಧ್ಯಕ್ಷ ಮಂಜುನಾಥರೆಡ್ಡಿ ಸೇರಿದಂತೆ ಹಲವರು ಇದ್ದರು.