ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ರಾಜ್ಯದಲ್ಲಿ ಸಾಲು ಸಾಲು ತೆರಿಗೆ
ಕೇಂದ್ರ ಸರ್ಕಾರ ಕಳೆದ ವರ್ಷವೇ ತೈಲದ ಮೇಲಿನ ಸೆಸ್ ಕಡಿಮೆ ಮಾಡಿದೆ. ಆದರೆ ಕಾಂಗ್ರೆಸ್ ಸರ್ಕಾರ ಸೆಸ್ನಲ್ಲಿ ಏರಿಕೆ ಮಾಡಿದೆ. ಜೊತೆಗೆ ಎರಡೇ ವರ್ಷದಲ್ಲಿ ಹಾಲಿನ ದರವನ್ನು ಮೂರು ಬಾರಿ ಏರಿಸಲಾಗಿದೆ. ಆ ಹಣವನ್ನು ರೈತರಿಗೂ ನೀಡಲಿಲ್ಲ. ಒಂದು ಟ್ರಾನ್ಸ್ಫಾರ್ಮರ್ ಹಾಕಲು ರೈತರು ಮೂರು ಲಕ್ಷ ರು. ಖರ್ಚು ಮಾಡಬೇಕು. ಇಂಧನ ಇಲಾಖೆಯಿಂದ ಸ್ಮಾರ್ಟ್ ಆಗಿ ದುಡ್ಡು ಹೊಡೆಯಲು ಸ್ಮಾರ್ಟ್ ಮೀಟರ್ ಯೋಜನೆ ತರಲಾಗಿದೆ. ಮೆಟ್ರೊ, ಬಸ್ ಟಿಕೆಟ್ ದರ ಏರಿಕೆ ಮಾಡಲಾಗಿದೆ. ರಾಜ್ಯದ ಆರೂವರೆ ಕೋಟಿ ಜನರ ಕೈಗೆ ಚೊಂಬು ನೀಡಿರುವುದೇ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದು ಟೀಕಿಸಿದರು.ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ತರಲು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಲಾಗಿದೆ. ಇಡೀ ದೇಶದಲ್ಲಿ ಕರ್ನಾಟಕವೇ ಮೊದಲಿಗೆ ಈ ನೀತಿಯನ್ನು ಜಾರಿ ಮಾಡಿತ್ತು. ಕಾಂಗ್ರೆಸ್ ದ್ವೇಷ ರಾಜಕಾರಣ ಮಾಡಿ ಅದನ್ನು ರದ್ದು ಮಾಡಿದೆ. ರಾಜ್ಯ ಶಿಕ್ಷಣ ನೀತಿ ತರುತ್ತೇವೆಂದು ಹೇಳಿ ಅದನ್ನೂ ತರಲಿಲ್ಲ ಎಂದು ಸಂಸದರು ಟೀಕಿಸಿದರು.ಮಕ್ಕಳಿಗೆ ಭವಿಷ್ಯವೇ ಇಲ್ಲ
ಕೈಗಾರಿಕಾ ಕಾರಿಡಾರ್ ನಿರ್ಮಾಣನಂತರ ಮಾತನಾಡಿ, ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಗೆ ವರ್ಷಕ್ಕೆ 5 ಕೋಟಿ ರೂ. ಅನುದಾನ ಬರುತ್ತದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಅಗತ್ಯ ಇರುವ ತಂಗುದಾಣ ಹಾಗೂ ಇತರೆ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ. ಕ್ಷೇತ್ರದಲ್ಲಿ ಬೆಂಗಳೂರಿನಿಂದ ಹೈದರಾಬಾದ್ಗೆ ಕೈಗಾರಿಕಾ ಕಾರಿಡಾರ್ ನಿರ್ಮಾಣವಾಗಲಿದ್ದು, ಇದು ಬಜೆಟ್ನಲ್ಲೂ ಘೋಷಣೆಯಾಗಿದೆ. ಇದರ ಡಿಪಿಆರ್ ತಯಾರಾಗುತ್ತಿದ್ದು, 2026 ರಿಂದ ಕಾಮಗಾರಿ ಆರಂಭವಾಗಲಿದೆ ಎಂದರು.