ಎಲ್ಲರಿಗೂ ಬದುಕುವ ಸ್ವಾತಂತ್ರ‍್ಯಕೊಟ್ಟಿದ್ದು ಸಂವಿಧಾನ

KannadaprabhaNewsNetwork |  
Published : Feb 05, 2024, 01:52 AM IST
ಫೋಟೋ : 4 ಹೆಚ್‌ಎಸ್‌ಕೆ 1 ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಹೋಬಳಿಯ ಖಾಜಿ ಹೊಸಹಳ್ಳಿ ಗ್ರಾಮದಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾಗೆ ಗ್ರಾಮ  ಪಂಚಾಯಿತಿ ಅಧ್ಯಕ್ಷ ರಾಮಣ್ಣ ಚಾಲನೆ ನೀಡಿದರು. | Kannada Prabha

ಸಾರಾಂಶ

ಹೊಸಕೋಟೆ: ದೇಶದಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ತನ್ನದೇ ಆದ ಇಚ್ಛೆಯಂತೆ ಸ್ವತಂತ್ರವಾಗಿ ಬದುಕುವ ಹಕ್ಕನ್ನ ಕೊಟ್ಟಿದ್ದು ಅಂಬೇಡ್ಕರ್ ರಚಿಸಿರುವ ಸಂವಿಧಾನ ಎಂದು ಗ್ರಾಪಂ ಅಧ್ಯಕ್ಷ ರಾಮಣ್ಣ ತಿಳಿಸಿದರು.

ಹೊಸಕೋಟೆ: ದೇಶದಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ತನ್ನದೇ ಆದ ಇಚ್ಛೆಯಂತೆ ಸ್ವತಂತ್ರವಾಗಿ ಬದುಕುವ ಹಕ್ಕನ್ನ ಕೊಟ್ಟಿದ್ದು ಅಂಬೇಡ್ಕರ್ ರಚಿಸಿರುವ ಸಂವಿಧಾನ ಎಂದು ಗ್ರಾಪಂ ಅಧ್ಯಕ್ಷ ರಾಮಣ್ಣ ತಿಳಿಸಿದರು.

ತಾಲೂಕಿನ ಖಾಜಿ ಹೊಸಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು, ಸಂವಿಧಾನ ರಚನೆಗೆ ಮುನ್ನ ದೇಶದಲ್ಲಿ ಮನುಷ್ಯನಿಗೆ ಸ್ವತಂತ್ರವಾಗಿ ಬದುಕುವ ಹಕ್ಕಿರಲಿಲ್ಲ. ಅಸ್ಪೃಶ್ಯತೆ, ಅಸಮಾನತೆ ತಾಂಡವವಾಡುತ್ತಿತ್ತು. ಅಂಬೇಡ್ಕರ್ ಅವರು ಸರ್ವರಿಗೂ ಸಮಾನತೆ ದಕ್ಕುವ ದೃಷ್ಟಿಯಿಂದ ಸಂವಿಧಾನ ರಚನೆ ಮಾಡಿದರು. ಇದರ ಪರಿಣಾಮ ಎಲ್ಲಾ ಧರ್ಮದವರು ಸಮಾನತೆ ಮತ್ತು ಸಹಬಾಳ್ವೆಯಿಂದ ಜೀವಿಸುವಂತಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಸಂವಿಧಾನವನ್ನ ಅರ್ಥೈಸಿಕೊಂಡು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಆದಾಗ ಮಾತ್ರ ನಮ್ಮ ಜೀವನ ಸಾರ್ಥಕತೆ ಕಾಣುತ್ತದೆ ಎಂದರು.

ಗ್ರಾಪಂ ಸದಸ್ಯ ಅಭಿಮಾನಿ ಮುನಿರಾಜು ಮಾತನಾಡಿ, ಪ್ರಮುಖವಾಗಿ ಮಹಿಳಾ ಮೀಸಲಾತಿ ಕೊಟ್ಟು ಮಹಿಳೆಯರನ್ನ ಸಮಾಜದ ಮುಖ್ಯ ವಾಹಿನಿಗೆ ತಂದಂತಹ ಕೀರ್ತಿ ಅಂಬೇಡ್ಕರ್ ಅವರ ಸಂವಿಧಾನಕ್ಕೆ ಸಲ್ಲಬೇಕು ಎಂದರು.

ಗ್ರಾಪಂ ಅಭಿವೃದ್ಧಿ ಅಧಿಕಾರಿ ಮುನಿರಾಜು ಮಾತನಾಡಿ, ತಮ್ಮಿಚ್ಚೆಯಂತೆ ರೀತಿ ಬದುಕುವ ಹಕ್ಕನ್ನು ಕೊಟ್ಟಿರುವ ಸಂವಿಧಾನ ನಮ್ಮ ಭಾರತ ದೇಶದ ಸಂವಿಧಾನ ಆಗಿದೆ. ಆದ್ದರಿಂದ ದೇಶದ ಪ್ರತಿಯೊಂದು ಮನೆಯಲ್ಲಿ ಸಂವಿಧಾನದ ಪುಸ್ತಕ ಇಟ್ಟು ಓದುವ ಮೂಲಕ ಸಂವಿಧಾನಕ್ಕೆ ಗೌರವ ಸಲ್ಲಿಸುವ ಕಾರ್ಯ ಆಗಬೇಕು. ಆಗ ಮಾತ್ರ ಭಾರತೀಯರಾದ ನಾವು ಅಂಬೇಡ್ಕರ್ ಅವರ ಋಣ ತೀರಿಸಿದಂತಾಗುತ್ತದೆ ಎಂದರು.ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಸಿದ್ದರಾಜು, ಗ್ರಾಪಂ ಉಪಾಧ್ಯಕ್ಷ ಶ್ರೀನಿವಾಸ್, ಪಿಡಿಒ ಮುನಿರಾಜು, ದಲಿತಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಚಿನ್ನಸ್ವಾಮಿ, ಗ್ರಾಪಂ ಸದಸ್ಯರಾದ ಅಭಿಮಾನಿ ಮುನಿರಾಜು, ಫಸ್ಸಿ, ಮುಖಂಡ ಖಾಜಿ ಹೊಸಹಳ್ಳಿ ಶಿವಕುಮಾರ್, ದಸಂಸ ಕರ್ನಾಟಕ ಜಿಲ್ಲಾ ಸಂಚಾಲಕ ಲೋಕೇಶ್‌ ಹಾಜರಿದ್ದರು.

ಫೋಟೋ : 4 ಹೆಚ್‌ಎಸ್‌ಕೆ 1

ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಹೋಬಳಿಯ ಖಾಜಿ ಹೊಸಹಳ್ಳಿಯಲ್ಲಿ ಸಂವಿಧಾನ ಜಾಗೃತಿ ಜಾಥಾಗೆ ಗ್ರಾಪಂ ಅಧ್ಯಕ್ಷ ರಾಮಣ್ಣ ಚಾಲನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ