ಸಂವಿಧಾನ ಕಾನೂನುಗಳ ತಾಯಿ ಬೇರಿದ್ದಂತೆ: ರಿಶ್ವಂತ್ ರಾಮು

KannadaprabhaNewsNetwork |  
Published : Dec 01, 2025, 01:15 AM IST
ಪೋಟೋ 4 : ದಾಬಸ್‍ಪೇಟೆ ಪಟ್ಟಣದ ಎಸ್ ಆರ್ ಎಸ್ ವಿದ್ಯಾನಿಕೇತನ ಶಾಲೆಯಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆಯನ್ನು ಶಿಕ್ಷಕರು ಬೋಧಿಸಿದರು. | Kannada Prabha

ಸಾರಾಂಶ

ಸಂವಿಧಾನದಲ್ಲಿ ಸಮಾನತೆ, ಸಾಮಾಜಿಕ, ರಾಜಕೀಯ, ಆರ್ಥಿಕ, ಭ್ರಾತೃತ್ವ ಪದಗಳಿವೆ. ಎಲ್ಲರೂ ಯಾವುದರಿಂದಲೂ ವಂಚಿತರಾಗಬಾರದು ಎಂಬ ಕಾರಣಕ್ಕೆ ದೂರಾಲೋಚನೆಯಿಂದ ಸಮಾನ ಪ್ರಾತಿನಿಧ್ಯ ನೀಡಲಾಗಿದೆ.

ದಾಬಸ್‍ಪೇಟೆ: ಭಾರತೀಯ ಸಂವಿಧಾನ ಎಲ್ಲ ಕಾನೂನುಗಳ ತಾಯಿ ಬೇರು. ಅದು ಧರ್ಮ ಗ್ರಂಥವಲ್ಲ, ಸರ್ವರಿಗೂ, ಸರ್ವ ಕಾಲಕ್ಕೂ ಅನ್ವಯವಾಗುವ ಕಾನೂನು ಎಂದರೆ ಅದು ಸಂವಿಧಾನ ಮಾತ್ರ ಎಂದು ಎಸ್ ಆರ್ ಎಸ್ ಶಾಲೆಯ ಆಡಳಿತಾಧಿಕಾರಿ ರಿಶ್ವಂತ್ ರಾಮು ತಿಳಿಸಿದರು. ಪಟ್ಟಣದ ಎಸ್ ಆರ್ ಎಸ್ ವಿದ್ಯಾನಿಕೇತನ ಶಾಲೆಯಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆ ಬೋಧಿಸಿ ಮಾತನಾಡಿ, ಸಂವಿಧಾನದಲ್ಲಿ ಸಮಾನತೆ, ಸಾಮಾಜಿಕ, ರಾಜಕೀಯ, ಆರ್ಥಿಕ, ಭ್ರಾತೃತ್ವ ಪದಗಳಿವೆ. ಎಲ್ಲರೂ ಯಾವುದರಿಂದಲೂ ವಂಚಿತರಾಗಬಾರದು ಎಂಬ ಕಾರಣಕ್ಕೆ ದೂರಾಲೋಚನೆಯಿಂದ ಸಮಾನ ಪ್ರಾತಿನಿಧ್ಯ ನೀಡಲಾಗಿದೆ. ಕಾನೂನು ತತ್ವಗಳ ಜೊತೆಗೆ ಮಾನವೀಯ ಗುಣ ಬೆಳೆಸಿಕೊಂಡಾಗ ಸಂವಿಧಾನದ ತತ್ವ ತಿಳಿಯುತ್ತದೆ ಎಂದು ಹೇಳಿದರು.

ಮುಖ್ಯಶಿಕ್ಷಕಿ ಮೀನಾಕುಮಾರಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪುಸ್ತಕಗಳಲ್ಲಿ ಬೆಂಗಳೂರು ನಗರಕ್ಕೆ ಬರೋಬ್ಬರಿ ₹38 ಕೋಟಿ ಡ್ರಗ್ಸ್‌ ಸಾಗಾಟ
ಸರ್ಕಾರದಿಂದ ಗೋಬ್ಯಾಕ್‌ ಗೌರ್ನರ್‌ ಅಭಿಯಾನ ಚಿಂತನೆ