ಸಂವಿಧಾನ ಎಲ್ಲಾ ಜಾತಿ, ಧರ್ಮದವರ ರಕ್ಷಣೆಗೆ ಇರುವ ಪ್ರಮುಖ ಗ್ರಂಥ

KannadaprabhaNewsNetwork |  
Published : Mar 04, 2024, 01:19 AM IST
ಎನ್.ಆರ್.ಡಿ1 ಸಂವಿಧಾನ ಸಂವಾದ ಕಾರ್ಯಕ್ರಮವನ್ನು ಎಂ.ಬಿ.ದಳಪತಿ ಉದ್ಘಾಟಿನೆ ಮಾಡುತ್ತಿದ್ದಾರೆ. | Kannada Prabha

ಸಾರಾಂಶ

ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿದ ಸಂವಿಧಾನ ಎಲ್ಲಾ ಜಾತಿ ಮತ್ತು ಧರ್ಮದವರ ಬದುಕಿನ ರಕ್ಷಣೆಗಾಗಿ ಇರುವ ಪ್ರಮುಖ ಗ್ರಂಥ ಎಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜಕ ಎಂ.ಬಿ. ದಳಪತಿ ಹೇಳಿದರು.

ನರಗುಂದ: ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿದ ಸಂವಿಧಾನ ಎಲ್ಲಾ ಜಾತಿ ಮತ್ತು ಧರ್ಮದವರ ಬದುಕಿನ ರಕ್ಷಣೆಗಾಗಿ ಇರುವ ಪ್ರಮುಖ ಗ್ರಂಥ ಎಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜಕ ಎಂ.ಬಿ. ದಳಪತಿ ಹೇಳಿದರು. ಅವರು ಪಟ್ಟಣದ ಯಡೆಯೂರ ಸಿದ್ದಲಿಂಗೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕವಿವಿ ಧಾರವಾಡ ಹಾಗೂ ಎನ್ ಎಸ್ ಎಸ್ ಕೋಶ ಮತ್ತು ಯಡೆಯೂರ ಸಿದ್ದಲಿಂಗೇಶ್ವರ ಶಿಕ್ಷಣ ಮಹಾವಿದ್ಯಾಲಯ, ಎನ್ಎಸ್ಎಸ್ ಘಟಕದ ಅಡಿಯಲ್ಲಿ ಸಂವಿಧಾನ ಕುರಿತು ಸಂವಾದ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸದಲ್ಲಿ ಮಾತನಾಡಿ. ಸಂವಿಧಾನದಲ್ಲಿರುವ ಹಕ್ಕು ಎಲ್ಲರಿಗೂ ಶಕ್ತಿ ನೀಡುತ್ತಿದ್ದು ಸರ್ವರಿಗೂ ಸಮ ಬಾಳ್ವೆ ಸಮಪಾಲು ಎಂಬಂತೆ ಸಮಾಜದಲ್ಲಿ ಮೇಲು ಕೀಳು ಎಂಬ ಭೇದ ಭಾವವಿಲ್ಲದೆ ಎಲ್ಲರೂ ಸಮಾನರು ಎಂಬ ಶಾಂತಿ ತೋಟ ಬೆಳೆಸಬೇಕು ಎಂದು ಅವರು ಹೇಳಿದರು. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಹೇಶಗೌಡ ಪಾಟೀಲ ಮಾತನಾಡಿ, ದೇಶದ ಸ್ವಾತಂತ್ರ್ಯ ನಂತರ ಅವಶ್ಯವಾಗಿರುವ ಎಲ್ಲಾ ಕಾನೂನು ಹಕ್ಕು ಮತ್ತು ಕರ್ತವ್ಯಗಳನ್ನು ಒಳಗೊಂಡ ಸಂವಿಧಾನ ಹೃದಯ ಮತ್ತು ತಾಯಿ ಇದ್ದಂತೆ ಎಂದರು. ಕಾಲೇಜಿನ ಪ್ರಾಚಾರ್ಯ ಆರ್ .ಬಿ. ಪಾಟೀಲ ಮಾತನಾಡಿ, ಸಂವಿಧಾನವು ಶಿಕ್ಷಣ ಉದ್ಯೋಗ ಸಮಾನತೆ ಬದುಕು ಸಾಗಿಸಲು ಎಲ್ಲರಿಗೂ ಮುಕ್ತ ಅವಕಾಶ ನೀಡಿದೆ. ಹಕ್ಕು ಮತ್ತು ಕರ್ತವ್ಯಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಎಲ್ಲರೂ ಒಂದಾಗಿ ಸಂವಿಧಾನದ ಆಶಯವನ್ನು ಈಡೇರಿಸಿ ಘನತೆಯಿಂದ ಬದುಕು ಸಾಗಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಮುನ್ನ ಬಿ.ಇಡಿ. ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳ ಪ್ರಗತಿಯನ್ನು ಪರಿಶೀಲಿಸಲಾಯಿತು. ಶಿಕ್ಷಣ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ಕಾರ್ಯಕ್ರಮಾಧಿಕಾರಿ ಎಂ.ಈ. ವಿಶ್ವಕರ್ಮ ಹಾಗೂ ಸಹ ಕಾರ್ಯಕ್ರಮಾಧಿಕಾರಿ ಡಿ.ಸಿ .ಕೊಣ್ಣೂರ, ಅಕ್ಕಮ್ಮ ವಗ್ಗರ, ಉಪನ್ಯಾಸಕ ಎಸ್ .ಎಸ್. ಹರಪನಹಳ್ಳಿ, ನೇತ್ರಾವತಿ ವಾಗ್ಮೂಡೆ, ಎಂ.ಪಿ.ಕ್ಯಾತನಗೌಡ್ರ, ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದಿನಿಂದ ನೀರು ದರ ಶೇ.3 ಹೆಚ್ಚಳ
ಇಂದು ವರ್ಣರಂಜಿತ ಬೆಂಗಳೂರು ಕರಗ