ಭಾರತದ ಸಂವಿಧಾನ ಜಗತ್ತಿನಲ್ಲೇ ಅಗ್ರಮಾನ್ಯ-ಸಚಿವ ಶಿವಾನಂದ ಪಾಟೀಲ

KannadaprabhaNewsNetwork |  
Published : Jan 27, 2026, 03:15 AM IST
ಹಾವೇರಿ ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ 77ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಸಚಿವ ಶಿವಾನಂದ ಪಾಟೀಲ ಅವರು ಧ್ವಜಾರೋಹಣ ನೆರವೇರಿಸಿ ಧ್ವಜವಂದನೆ ಸಲ್ಲಿಸಿದರು. | Kannada Prabha

ಸಾರಾಂಶ

ಭಾರತದ ಸಂವಿಧಾನ ಜಗತ್ತಿನಲ್ಲೇ ಅಗ್ರಮಾನ್ಯ ಸಂವಿಧಾನಗಳಲ್ಲಿ ಒಂದಾಗಿದೆ. ಸ್ವಾತಂತ್ರ್ಯh, ಸಮಾನತೆ, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯದ ಧ್ಯೇಯಗಳನ್ನು ಪ್ರತಿಪಾದಿಸುವ ಈ ಸಂವಿಧಾನ ಜಗತ್ತಿಗೇ ದಾರಿದೀವಿಗೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.

ಹಾವೇರಿ: ಭಾರತದ ಸಂವಿಧಾನ ಜಗತ್ತಿನಲ್ಲೇ ಅಗ್ರಮಾನ್ಯ ಸಂವಿಧಾನಗಳಲ್ಲಿ ಒಂದಾಗಿದೆ. ಸ್ವಾತಂತ್ರ‍್ಯ, ಸಮಾನತೆ, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯದ ಧ್ಯೇಯಗಳನ್ನು ಪ್ರತಿಪಾದಿಸುವ ಈ ಸಂವಿಧಾನ ಜಗತ್ತಿಗೇ ದಾರಿದೀವಿಗೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ 77ನೇ ಗಣರಾಜ್ಯೋತ್ಸವ ದಿನಾಚರಣೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸಂವಿಧಾನ ಕಾಲದ ಅಗತ್ಯಕ್ಕೆ ತಕ್ಕಂತೆ ಬದಲಾವಣೆ, ತಿದ್ದುಪಡಿಗಳನ್ನು ಕಾಣುತ್ತಿದ್ದರೂ ಮೂಲಭೂತ ಸ್ವರೂಪವನ್ನು ಉಳಿಸಿಕೊಂಡು ಭಾರತೀಯತ್ವವನ್ನು ಮೆರೆಯುತ್ತಿದೆ ಎಂದರು.ಡಾ. ಬಾಬಾಸಾಹೇಬ್ ಅಂಬೇಡ್ಕರ್‌ರವರು ಪ್ರತಿಪಾದಿಸಿರುವ ಸಾಮಾಜಿಕ ನ್ಯಾಯ, ಸ್ವಾತಂತ್ರ್ಯ ಸಮಾನತೆ ಮತ್ತು ಭ್ರಾತೃತ್ವದಲ್ಲಿ ನಂಬಿಕೆಯನ್ನು ಸ್ಥಾಪಿಸಲು ನಾವು ಬದ್ಧರಾಗಿದ್ದೇವೆ. ಗಣತಂತ್ರದ ಅತಿದೊಡ್ಡ ಹಬ್ಬವನ್ನು ಆಚರಿಸುತ್ತಿರುವ ಈ ಹೊತ್ತಿನಲ್ಲಿ ಅಸಮಾನತೆ ರಹಿತ ಸಮಾಜ ನಿರ್ಮಾಣಕ್ಕೆ, ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಮತ್ತು ಪತ್ರಿಕಾರಂಗ ತನ್ನ ಹೊಣೆಗಾರಿಕೆ ಮತ್ತು ಕರ್ತವ್ಯವನ್ನು ಸರಿಯಾಗಿ ನಿರ್ವಹಿಸಬೇಕಾಗಿದೆ. ಇದೇ ಸಂವಿಧಾನಕ್ಕೆ ಸಲ್ಲಿಸಬಹುದಾದ ದೊಡ್ಡ ಗೌರವ. ಈ ನಿಟ್ಟಿನಲ್ಲಿ ನಾವೆಲ್ಲ ಸಂಕಲ್ಪಮಾಡೋಣ ಎಂದರು.ವೈದ್ಯಕೀಯ ವಿಜ್ಞಾನಗಳ ಸಂಸ್ಥೆ: ಜಿಲ್ಲೆಯಲ್ಲಿ ₹500 ಕೋಟಿ ವೆಚ್ಚದಲ್ಲಿ ಸುಜ್ಜಿತವಾಗಿ ನಿರ್ಮಾಣ ಮಾಡಲಾದ ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಲೋಕಾರ್ಪಣೆಗೊಳಿಸಲಾಗಿದೆ. ರಾಜ್ಯದಲ್ಲೇ ಮಾದರಿ ವೈದ್ಯಕೀಯ ಕಾಲೇಜ್ ಇದಾಗಿದೆ. ಜಿಲ್ಲೆಗೆ ಸೂಪರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಜಿಲ್ಲೆಯ ಜನತೆಗೆ ಉತ್ತಮ ಆರೋಗ್ಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೆಚ್ಚಿಸಲಾಗುತ್ತಿದೆ. ಜಿಲ್ಲಾ ಆಸ್ಪತ್ರೆಯ 330 ಹಾಸಿಗೆಗಳನ್ನು 500 ಹಾಸಿಗೆಗೆ ಉನ್ನತೀಕರಿಸಲಾಗಿದೆ. ಶೀಘ್ರದಲ್ಲೇ ಜಿಲ್ಲೆಗೆ ಎಂಆರ್‌ಐ ಯಂತ್ರ ಬರಲಿದೆ. ಇದರಿಂದ ರೋಗಿಗಳು ಚಿಕಿತ್ಸೆಗೆ ದಾವಣಗೆರೆ ಹಾಗೂ ಹುಬ್ಬಳ್ಳಿಗೆ ಹೋಗುವುದು ತಪ್ಪಲಿದೆ ಎಂದರು.ಜಿಲ್ಲಾಧಿಕಾರಿಗಳಿಗೆ ಸನ್ಮಾನ: ಇದೇ ಸಂದರ್ಭದಲ್ಲಿ ಉತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ ಪಡೆದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರನ್ನು ಗಣ್ಯರು ಸನ್ಮಾನಿಸಿದರು. ಕ್ರೀಡೆ, ಶಿಕ್ಷಣ, ಸಮಾಜ ಸೇವೆ, ಪರಿಸರ ರಕ್ಷಣೆ, ಮಾಧ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಮಾಡಿದ 28 ಜನ ಸಾಧಕರನ್ನು, ಎಸ್.ಎಲ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳು, ಆರೋಗ್ಯ ಇಲಾಖೆಯಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು.

ಆಕರ್ಷಕ ಪಥಸಂಚಲನ: ಪರೇಡ ಕಮಾಂಡೆಂಟ್ ಶಂಕರಗೌಡ ಪಾಟೀಲ ನೇತೃತ್ವದಲ್ಲಿ ಸಶಸ್ತ್ರ ಮೀಸಲು ಪಡೆ, ನಾಗರೀಕ ಸೇವಾ, ಅಗ್ನಿಶಾಮಕ, ಅಬಕಾರಿ ದಳ, ಗೃಹರಕ್ಷಕ ದಳ, ಎನ್.ಎಸ್.ಎಸ್, ಸ್ಕೌಟ್ಸ್ ಆಂಡ್ ಗೈಡ್ಸ್ ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಸೇರಿದಂತೆ ವಿವಿಧ 15 ತಂಡಗಳಿಂದ ಆಕರ್ಷಕ ಪಥಸಂಚಲನ ಜರುಗಿತು.ನಗರದ ಕೇಂದ್ರೀಯ ವಿದ್ಯಾಲಯ, ಸರ್ಕಾರಿ ಉರ್ದು ಪ್ರೌಢಶಾಲೆ ಸೇರಿದಂತೆ ವಿವಿಧ ಶಾಲಾ ವಿದ್ಯಾರ್ಥಿಗಳು “ವಂದೇ ಮಾತರಂ” ಸೇರಿದಂತೆ ರಾಷ್ಟ್ರಾಭಿಮಾನ ಬಿಂಬಿಸುವ ದೇಶ ಭಕ್ತಗೀತೆಗಳಿಗೆ ಆಕರ್ಷಕ ನೃತ್ಯ ಮಾಡಿದರು. ವಿದ್ಯಾರ್ಥಿಗಳ ಕೈಯಲ್ಲಿ ರಾಷ್ಟ್ರಧ್ವಜ ರಾರಾಜಿಸಿದವು.ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ವಿಧಾನಸಭೆ ಉಪಾಧ್ಯಕ್ಷರಾದ ರುದ್ರಪ್ಪ ಲಮಾಣಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್.ಗಾಜಿಗೌಡ್ರ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಎಂ.ಮೈದೂರ, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ, ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ, ಡಿಎಫ್‌ಒ ಅಕ್ಷಯ ಪ್ರಭಾಕರ, ಉಪ ವಿಭಾಗಾಧಿಕಾರಿ ಕಲ್ಯಾಣಿ ಕಾಂಬ್ಳೆ, ತಹಸೀಲ್ದಾರ್ ಶರಣಮ್ಮ, ಕೊಟ್ರೇಶಪ್ಪ ಬಸೇಗಣ್ಣಿ, ಸಂಜೀವಕುಮಾರ ನೀರಲಗಿ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

₹400 ಕೋಟಿ ದರೋಡೆ ಕೇಸ್‌ನ ಸಂಭಾಷಣೆ ಆಡಿಯೋ ವೈರಲ್‌!
ಇಂದಿನಿಂದ ಮತ್ತೆ ಕಲಾಪ : ಭಾರೀ ಕೋಲಾಹಲ ನಿರೀಕ್ಷೆ