ಜಾತಿ ಕಡೆ ಹೊರಳಿದ ಬಡಾವಣೆ ನಾಮಕರಣ ವಿವಾದ

KannadaprabhaNewsNetwork |  
Published : Aug 13, 2025, 12:30 AM IST
ಫೋಟೋ 12ಪಿವಿಡಿ4ಪಾವಗಡ,ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಬಡಾವಣೆಗೆ ಮರುನಾಮಕರಣ ವಿರೋಧಿಸಿ ಪತ್ರಿಕಾಗೋಷ್ಟಿಯಲ್ಲಿ ತಾಲೂಕು ಒಕ್ಕಲಿಗ ಸಂಘಟನೆಯ ಮುಖಂಡರಿಂದ ಆಕ್ಷೇಪ ವ್ಯಕ್ತಪಡಿಸಿದರು.     | Kannada Prabha

ಸಾರಾಂಶ

ಪಟ್ಟಣದ ಕುಮಾರಸ್ವಾಮಿ ಬಡಾವಣೆಯ ಹಸರು ಮರುನಾಮಕರಣಗೊಳಿಸಿದರೆ,ಇಡೀ ಒಕ್ಕಲಿಗ ಸಮುದಾಯಕ್ಕೆವೆಸಗುವ ಮಹಾ ದ್ರೋಹವಾಗಲಿದೆ ಎಂದು ತಾಲೂಕು ಒಕ್ಕಲಿಗ ಕ್ಷೇಮಾಭಿವೃದ್ಧಿ ಸಂಘಟನೆಯ ಅನೇಕ ಮಂದಿ ಮುಖಂಡರು ಆರೋಪಿಸಿದರು.

ಕನ್ನಡಪ್ರಭವಾರ್ತೆ ಪಾವಗಡ

ಪಟ್ಟಣದ ಕುಮಾರಸ್ವಾಮಿ ಬಡಾವಣೆಯ ಹಸರು ಮರುನಾಮಕರಣಗೊಳಿಸಿದರೆ,ಇಡೀ ಒಕ್ಕಲಿಗ ಸಮುದಾಯಕ್ಕೆವೆಸಗುವ ಮಹಾ ದ್ರೋಹವಾಗಲಿದೆ ಎಂದು ತಾಲೂಕು ಒಕ್ಕಲಿಗ ಕ್ಷೇಮಾಭಿವೃದ್ಧಿ ಸಂಘಟನೆಯ ಅನೇಕ ಮಂದಿ ಮುಖಂಡರು ಆರೋಪಿಸಿದರು.

ತಾಲೂಕು ಒಕ್ಕಲಿಗ ಸಮುದಾಯದ ವತಿಯಿಂದ ಮಂಗಳವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಕುಮಾರಸ್ವಾಮಿ ಬಡಾವಣೆಯ ಹೆಸರು ಮರುನಾಮಕರಣ ಗೊಳಿಸಬಾರದೆಂದು ಪುರಸಭೆಗೆ ಒತ್ತಾಯಿಸಿದರು.

ತಾಲೂಕು ಒಕ್ಕಲಿಗ ಸಂಘದ ಅಧ್ಯಕ್ಷ ತಿಪ್ಪೇ ಈರಣ್ಣ ಮಾತನಾಡಿ, ತಿಮ್ಮರಾಯಪ್ಪ ಶಾಸಕರಾಗಿದ್ದ ಕಾಲದಲ್ಲಿ ಪಟ್ಟಣದ ಸುಮಾರು 400ಮಂದಿ ಕಡುಬಡವರಿಗೆ,ಮನೆ ನಿರ್ಮಿಸಿ ಹಸ್ತಾಂತರಿಸಲಾಗಿದೆ. ಆ ಬಡಾವಣೆಗೆ ಮೂಲಭೂತ ಸೌಯರ್ಕ ಕಲ್ಪಿಸಿಕೊಡಲಾಗಿದೆ. ಆಗ ಕುಮಾರಸ್ವಾಮಿ ಸಿಎಂ ಆಗಿದ್ದರು. ಈ ವೇಳೆ ಕುಮಾರಸ್ವಾಮಿ ಇಲ್ಲಿಗೆ ಅಗಮಿಸಿ ಬಡಾವಣೆಯ ನಾಗರಿಕರಿಂದ ಅಭಿನಂದನೆ ಹಾಗೂ ಸನ್ಮಾನ ಸಹ ಸ್ವೀಕರಿಸಿದ್ದಾರೆ. ಇದೇ ವೇಳೆ ಕುಮಾರಸ್ವಾಮಿ ಬಡಾವಣೆ ಎಂದು ಪುರಸಭೆಯಿಂದ ನಾಮಕರಣಗೊಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ದಾಖಲೆಗಳಿವೆ. ಹೀಗಿದ್ದರೂ ರಾಜಕೀಯ ಪಿತೂರಿ ನಡೆಸಿ ಕುಮಾರಸ್ವಾಮಿ ಬಡಾವಣೆಯ ಹೆಸರು ಬದಲಾಯಿಸುವ ಮೂಲಕ ವೆಂಕಟರಮಣಪ್ಪ ಬಡಾವಣೆ ಎಂದು ಮರುನಾಮಕರಣಕ್ಕೆ ಮುಂದಾಗಿರುವುದು ಸರಿಯಲ್ಲ. ಕುಮಾರಸ್ವಾಮಿ ಬಡಾವಣೆಗೆ ಮರು ನಾಮಕರಣಗೊಳಿಸಿದರೆ,ಒಕ್ಕಲಿಗ ಸಮುದಾಯಕ್ಕೆ ದ್ರೋಹವೆಸಗಿದಂತಾಗಲಿದೆ. ಇದನ್ನು ವಿರೋಧಿಸಿ ಒಕ್ಕಲಿಗ ಸಂಘಟನೆಗಳಿಂದ ಉಗ್ರ ಹೋರಾಟಕ್ಕೆ ಸಜ್ಜಾಗುವುದಾಗಿ ಎಚ್ಚರಿಸಿದರು.

ತಾಲೂಕು ಜೆಡಿಎಸ್‌ ಅಧ್ಯಕ್ಷ ಎನ್‌.ಎನ್‌.ಈರಣ್ಣ . ತಾಲೂಕು ಒಕ್ಕಲಿಗ ಸಮುದಾಯದ ಹಿರಿಯ ಮುಖಂಡರಾದ ಮಂಗಳವಾಡ ರಂಗಣ್ಣ,ಕೆ.ಟಿ.ಹಳ್ಳಿ ನಾಗಣ್ಣ,ಚಂದ್ರಣ್ಣ, ಶೇಖರಣ್ಣ, ಕ್ಯಾತನಹಳ್ಳಿಯ ಈರಣ್ಣ ಹಾಗೂ ಇತರೆ ಅನೇಕ ಮಂದಿ ಒಕ್ಕಲಿಗ ಸಂಘದ ಮುಖಂಡರು ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಯ್ಯಪ್ಪನ ಮಾಲೆ ಧರಿಸಿದ ಬಾಲಕನ ಮೇಲೆ ಶಿಕ್ಷಕ ಹಲ್ಲೆ!
ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಆದೇಶ