ಕನ್ನಡಪ್ರಭ ವಾರ್ತೆ ಚಿಕ್ಕೋಡಿ
ಬುಧವಾರ ಯಕ್ಸಂಬಾ ಪಟ್ಟಣದ ಬೀರೇಶ್ವರ ಸಭಾಭವನದಲ್ಲಿ ಆಯೋಜಿಸಿದ್ದ ನಾರಿ ಶಕ್ತಿ ವಂದನಾ ಅಭಿಯಾನ ಹಾಗೂ ಮಹಿಳಾ ಸಂಪರ್ಕ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು. ದೇಶದಲ್ಲಿ ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಕಳೆದ 10 ವರ್ಷಗಳಿಂದ ಮೋದಿಯವರ ನೇತೃತ್ವದಲ್ಲಿ ದೇಶದಲ್ಲಿ ಅಭಿವೃದ್ಧಿ ಪರ್ವ ಸೃಷ್ಟಿಯಾಗಿದೆ ಎಂದು ಹೇಳಿದರು.
ದೇಶ ಸ್ವಾತಂತ್ರ್ಯಗೊಂಡು ಈಗಾಗಲೇ 77 ವರ್ಷಗಳು ಕಳೆದಿವೆ. ಅದರಲ್ಲಿ 67 ವರ್ಷ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿತ್ತು. ಆದರೆ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗ ನಿಜವಾದ ಅಭಿವೃದ್ಧಿಯನ್ನು ನೋಡಿದೆವು. ತದ ನಂತರ ಅಭಿವೃದ್ಧಿ ಮುಂದುವರೆಯಲಿಲ್ಲ. ಈಗ ಮತ್ತೆ ಕಳೆದ 9 ವರ್ಷಗಳಿಂದ ದೇಶದಲ್ಲಿ ಅಭಿವೃದ್ಧಿಯನ್ನು ಕಾಣುತ್ತಿದ್ದೇವೆ ಎಂದರು.ನಮ್ಮ ದೇಶದ ಚುಕ್ಕಾಣಿ ಹಿಡಿದಿರುವ ನರೇಂದ್ರ ಮೋದಿಯವರು ಸ್ವಾಮಿ ವಿವೇಕಾನಂದರಂತೆ ನಮ್ಮ ನಡುವೆ ಇದ್ದಾರೆ. ಇಂತಹ ಮಹಾನ್ ವ್ಯಕ್ತಿಗಳು ಮತ್ತೆ ದೇಶದ ಪ್ರಧಾನಿಯಾಗಿ ಮಾಡಲು ನಾವೆಲ್ಲರೂ ಪಣ ತೊಡಬೇಕು ಎಂದು ಆಶಿಸಿದರು.
ನಾವೆಲ್ಲರೂ ನಮ್ಮ ಮಕ್ಕಳು, ಕುಟುಂಬಕ್ಕೋಸ್ಕರ ಕೆಲಸ ಮಾಡುತ್ತೇವೆ. ಆದರೆ ಪ್ರಧಾನಿಗಳಿಗೆ ಯಾವುದೇ ಕುಟುಂಬ ಇಲ್ಲ. ಅವರು ಹಗಲಿರುಳು ಸೇವೆ ಮಾಡುತ್ತಿರುವುದು ದೇಶದ ಜನರಿಗೋಸ್ಕರ. ಭಾರತವನ್ನು ವಿಶ್ವದ ಗುರುವಿನ ಸಿಂಹಾಸನದ ಮೇಲೆ ರಾರಾಜಿಸುವಂತೆ ಮಾಡುವ ಕಾಲ ಸಮೀಪಿಸುತ್ತಿದೆ ಎಂದು ಹೇಳಿದರು.
ಬಿಜೆಪಿ ಮಹಿಳಾ ಮೊರ್ಚಾ ಜಿಲ್ಲಾಧ್ಯಕ್ಷೆ ಶಾಂಭವಿ ಅಶ್ವಥಪುರ ಪ್ರಾಸ್ತಾವಿಕ ಮಾತನಾಡಿದರು. ಬಿಜೆಪಿ ಮಹಿಳಾ ಮಂಡಳ ಅಧ್ಯಕ್ಷ ಶಕುಂತಲಾ ಡೋಣವಾಡೆ, ಬೀರೇಶ್ವರ ಚೇರಮನ್ ಜಯಾನಂದ ಜಾಧವ, ಸಂಜಯ ಪಾಟೀಲ ಉಪಸ್ಥಿತರಿದ್ದರು.