ಕನ್ನಡಪ್ರಭ ವಾರ್ತೆ ವಿಜಯಪುರ
ಅವರು ವಿಜಯಪುರ ಪಟ್ಟಣದ ಗಾಂಧಿ ಚೌಕದಲ್ಲಿ ಶ್ರೀ ವಿನಾಯಕ ಭಕ್ತ ಮಂಡಳಿ ವತಿಯಿಂದ ಏರ್ಪಡಿಸಲಾಗಿದ್ದ ೯೦ನೇ ವರ್ಷದ ವಿನಾಯಕ ವಾರ್ಷಿಕೋತ್ಸವದ ಸಂದರ್ಭದಲ್ಲಿ
ವನಜ ಪುಟ್ಟಣ್ಣ ವೇದಿಕೆಯಲ್ಲಿ ವಿಶೇಷ ಧಾರ್ಮಿಕ ಉಪನ್ಯಾಸ ನೀಡಿ ಮಾತನಾಡಿದರು.ದೇಶದ ಸ್ವಾತಂತ್ರ್ಯಕ್ಕಾಗಿ ಈ ಗಣೇಶೋತ್ಸವವನ್ನು ಬಾಲಗಂಗಾಧರ ತಿಲಕ್, ಗೋಪಾಲಕೃಷ್ಣ ಗೋಖಲೆ ಮುಂತಾದವರು ೧೩೩ ವರ್ಷಗಳ ಹಿಂದೆ ಹುಟ್ಟು ಹಾಕಿದ್ದು, ಭಗತ್ ಸಿಂಗ್, ಸುಖದೇವ್, ರಾಜಗುರು, ಸಾವರ್ಕರ್, ಚಂದ್ರಶೇಖರ್ ಆಜಾದ್ ಮೊದಲಾದ ಹಲವಾರು ಕ್ರಾಂತಿಕಾರಿಗಳನ್ನು ಹುಟ್ಟು ಹಾಕಲು ಗಣೇಶೋತ್ಸವದಿಂದ ಸಾಧ್ಯವಾಯಿತು ಎಂದು ತಿಳಿಸಿದರು.
ಪುರಸಭಾ ಸದಸ್ಯರಾದ ಶಿಲ್ಪಾ ಅಜಿತ್, ರೋಟರಿ ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿ ಬಿ. ಸಿ. ಸಿದ್ದರಾಜು, ಇನ್ನರ್ವಿಲ್ ಮಾಜಿ ಅಧ್ಯಕ್ಷೆ ದೀಪಾ ಮುರಳೀಧರ್, ನಿವೃತ್ತ ಪೌರಾಯುಕ್ತರಾದ ವಿ. ಶಿವಕುಮಾರ್, ಬಸವೇಶ್ವರ ಪ್ರಿಂಟರ್ಸ್ ಪ್ರಭಾಕರ್, ಮಹಾಂತಿನ ಮಠದ ಕಾರ್ಯದರ್ಶಿ ವಿಶ್ವನಾಥ್, ನಿರ್ದೇಶಕರಾದ ವಿಜಯ್ ಕುಮಾರ್, ಜೆಆರ್ಪಿ ಮುರಳೀಧರ್, ಗ್ಯಾಸ್ ರಾಜು, ಅಜಿತ್ ಕುಮಾರ್ , ಶಿವಪ್ರಸಾದ್, ಪ್ರವೀಣ್, ಸುರೇಶ ಬಾಬು ,ಬಸವರಾಜು ಉಪಸ್ಥಿತರಿದ್ದರು.