ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಊಟಿ ರಸ್ತೆಯಲ್ಲಿರುವ ಜೆಎಸ್ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಮಂಗಳವಾರ ನಡೆದ 17ನೇ ಪದವೀಧರರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಇಂದಿನ ಆಧುನಿಕ ಯುಗದಲ್ಲಿ ಶಿಕ್ಷಣದ ಅಗತ್ಯಗಳು ವಿಭಿನ್ನವಾಗಿವೆ. ವಿದ್ಯಾರ್ಥಿಗಳು ಶಿಕ್ಷಣ ಪಡೆಯುವುದರ ಹಿಂದೆ ಕೇವಲ ಪದವಿ ಪ್ರಮಾಣ ಪತ್ರ ಪಡೆಯುವ ಉದ್ದೇಶವಿರಬಾರದು. ನಿಮ್ಮ ಶಿಕ್ಷಣದಿಂದ ಹೊಸ ಅನ್ವೇಷಣೆಗಳು ಸಾಧ್ಯವಾಗಬೇಕು ಎಂದರು.
ಸ್ವಾತಂತ್ರ್ಯಪೂರ್ವ ಭಾರತದ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿ ಬೇರೆಯಿತ್ತು. ಇವುಗಳಲ್ಲಿ ಇಂದು ಸಾಕಷ್ಟು ಬದಲಾವಣೆಯಾಗಿದೆ. ಸಾಕ್ಷರತೆಯ ಪ್ರಮಾಣ ಹೆಚ್ಚಿದೆ. ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗಳು ಸುಧಾರಿಸಿವೆ. ಕೈಗಾರಿಕೆ, ವಿಜ್ಞಾನ ಮತ್ತು ತಂತ್ರಜ್ಞಾನಗಳಲ್ಲಿ ಹೊಸ ಅನ್ವೇಷಣೆಗಳಿಂದ ಅಚ್ಚರಿಯಾಗುವಂತೆ ಬೆಳವಣಿಗೆಯನ್ನು ಸಾಧಿಸಿದೆ. ಇದೆಲ್ಲದರ ಹಿಂದೆ ಸಮಗ್ರ ರಾಷ್ಟ್ರ ನಿರ್ಮಾಣದ ಕನಸು ಇದೆ ಎಂದರು.ಶಿಕ್ಷಣ ಪಡೆದು ಪದವೀಧರರಾಗುವ ವಿದ್ಯಾರ್ಥಿಗಳಿಗೆ ಇದೆಲ್ಲದರ ಅರಿವು ಸದಾ ಇರಬೇಕು. ಪದವಿಗಳು ಕೇವಲ ಅಂಕ ಗಳಿಸುವುದಕ್ಕೆ ಸೀಮಿತವಾಗಬಾರದು. ಆಯಾ ಕ್ಷೇತ್ರಗಳಲ್ಲಿ ಹೊಸ ಅನ್ವೇಷಣೆಯ ಸಾಧ್ಯತೆಗಳನ್ನು ಕಂಡುಕೊಳ್ಳುವುದಕ್ಕೆ ಆದ್ಯತೆ ನೀಡಬೇಕು ಎಂದರು.
903 ಜನರಿಗೆ ಪದವಿ:
ಸುತ್ತೂರು ಮಠದ ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕಾಲೇಜಿನ ಪರೀಕ್ಷಾ ನಿಯಂತ್ರಣಾಧಿಕಾರಿ ಡಾ.ಬಿ. ಪ್ರಭುಸ್ವಾಮಿ, ವಿಶ್ರಾಂತ ಕುಲಪತಿ ಡಾ.ಎಂ. ಮುನಿಯಮ್ಮ ಇದ್ದರು. ಮುಖ್ಯ ಕಾರ್ಯನಿರ್ವಾಹಕ ಪ್ರೊ.ಬಿ.ವಿ. ಸಾಂಬಶಿವಯ್ಯ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಕ್ಷೀರಾ ಶಾನುಭೋಗ್ ಮತ್ತು ಅದಿತಿ ಹೆಗ್ಡೆ ಪ್ರಾರ್ಥಿಸಿದರು. ಪ್ರಾಂಶುಪಾಲ ಡಾ.ಎಂ. ಪ್ರಭು ವಂದಿಸಿದರು. ಡಾ.ಎನ್. ರಾಜೇಂದ್ರ ಪ್ರಸಾದ್ ನಿರೂಪಿಸಿದರು.