ಶಿಗ್ಗಾಂವಿ: ಶ್ರೇಷ್ಠ ಸಂವಿಧಾನವನ್ನು ಹೊಂದಿದ ನಮ್ಮ ದೇಶ ಇಡಿ ಜಗತ್ತಿಗೆ ಮಾದರಿಯಾದ ಪ್ರಜಾಪ್ರಭುತ್ವ ಹೊಂದಿದೆ ಎಂದು ಮಾಜಿ ಸಂಸದ ಮಂಜುನಾಥ ಸಿ. ಕುನ್ನೂರ ಹೇಳಿದರು.
ಪ್ರತಿಯೊಬ್ಬರೂ ದೇಶಪ್ರೇಮ ಬೆಳೆಸಿಕೊಳ್ಳಬೇಕು. ಭ್ರಾತೃತ್ವ ಹಾಗೂ ಸೌಹಾರ್ದದ ಬದುಕು ರೂಢಿಸಿಕೊಳ್ಳಬೇಕಾಗಿದೆ. ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲಿ ಸಾಮಾನ್ಯರು ಅಸಾಮಾನ್ಯರಾಗಬಹುದಾದ ಅದ್ಬುತ ಅವಕಾಶಗಳನ್ನು ಮಾಡಿಕೊಟ್ಟ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ನಮ್ಮಲ್ಲಿ ಅಳವಡಿಸಿಕೊಂಡು ಅವರು ನಮಗಾಗಿ ಕೊಟ್ಟಿರುವ ಸಂವಿಧಾನ ರಕ್ಷಿಸಿ ದೇಶ ಉಳಿಸಬೇಕಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಚಾರ್ಯ ನಾಗರಾಜ ದ್ಯಾಮನಕೊಪ್ಪ ಅವರು ಇವತ್ತು ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ತುಂಬಬೇಕಾದ ಕಾರ್ಯ ನಡೆಯಬೇಕಾಗಿದೆ ಎಂದು ಹೇಳಿದರು.ಮುಖ್ಯೋಪಾಧ್ಯಾಯೆ ಜಿ.ಎಂ. ಅರಗೋಳ, ಎಂ.ಎ. ಗಾಣಿಗೇರ, ಎಂ.ಬಿ. ನೀರಲಗಿ, ಶಿವಪುತ್ರಪ್ಪ ಜಕ್ಕಣ್ಣವರ, ಮಂಜು ಯಲಿಗಾರ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕೆ. ಬಸಣ್ಣ ವಂದಿಸಿದರು, ಕೆ.ಜಿ. ಮಲ್ಲೂರ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.