ಬೈಕ್ ಮೇಲೆ ಬಸ್ ಹರಿದು ದಂಪತಿ ಸ್ಥಳದಲ್ಲೇ ಸಾವು

KannadaprabhaNewsNetwork |  
Published : Nov 28, 2024, 12:33 AM IST
ಬೈಕ್  | Kannada Prabha

ಸಾರಾಂಶ

ತಾಲೂಕಿನ ನಾರಾಯಣಪಲ್ಲಿಯಲ್ಲಿ ಸಂಬಂಧಿಕರೊಬ್ಬರ ಇರುಮುಡಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಚಿಂತಾಮಣಿಗೆ ಬರುತ್ತಿದ್ದ ವೇಳೆ ನಗರದ ಆದರ್ಶ ಟಾಕೀಸ್ ಮುಂಭಾಗದ ಶ್ರೀರಾಮ್ ಬೈಕ್ಸ್ ಬಳಿ ಆಯ ತಪ್ಪಿ ರಸ್ತೆಗೆ ಬಿದ್ದ ಬೈಕ್‌ನ ಮೇಲೆ ಹಿಂದಿನಿಂದ ಬಂದ ಸರ್ಕಾರಿ ಬಸ್ ಹರಿದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆಂದು ವರದಿಯಾಗಿದೆ.

ಚಿಂತಾಮಣಿ: ದ್ವಿಚಕ್ರ ವಾಹನದ ಮೇಲೆ ಸರ್ಕಾರಿ ಬಸ್ ಹರಿದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಆದರ್ಶ ಟಾಕೀಸ್ ಮುಂಭಾಗದಲ್ಲಿ ನಡೆದಿದ್ದು ಕೊಮ್ಮಸಂದ್ರ ಗ್ರಾಮದ ವೆಂಕಟೇಶ್ ಹಾಗೂ ಆತನ ಪತ್ನಿ ಸರಸ್ವತಮ್ಮ ಮೃತ ದುರ್ದೈವಿಗಳೆಂದು ಗುರುತಿಸಲಾಗಿದೆ. ಬುಧವಾರ ಮಧ್ಯಾಹ್ನ ೧೨-೩೦ರ ಸಮಯದಲ್ಲಿ ಬುರುಡಗುಂಟೆ ಸಮೀಪದ ಕೊಮ್ಮಸಂದ್ರ ಗ್ರಾಮದ ವೆಂಕಟೇಶ್ ಹಾಗೂ ಆತನ ಪತ್ನಿ ಸರಸ್ವತಮ್ಮ ತಾಲೂಕಿನ ನಾರಾಯಣಪಲ್ಲಿಯಲ್ಲಿ ಸಂಬಂಧಿಕರೊಬ್ಬರ ಇರುಮುಡಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಚಿಂತಾಮಣಿಗೆ ಬರುತ್ತಿದ್ದ ವೇಳೆ ನಗರದ ಆದರ್ಶ ಟಾಕೀಸ್ ಮುಂಭಾಗದ ಶ್ರೀರಾಮ್ ಬೈಕ್ಸ್ ಬಳಿ ಆಯ ತಪ್ಪಿ ರಸ್ತೆಗೆ ಬಿದ್ದ ಬೈಕ್‌ನ ಮೇಲೆ ಹಿಂದಿನಿಂದ ಬಂದ ಸರ್ಕಾರಿ ಬಸ್ ಹರಿದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆಂದು ವರದಿಯಾಗಿದೆ. ನಗರದಲ್ಲಿ ಅಂಗಡಿಗಳ ಮಾಲೀಕರು ರಸ್ತೆಯ ಪುಟ್ ಪಾತ್ ಜಾಗವನ್ನು ಒತ್ತುವರಿ ಮಾಡಿಕೊಂಡಿರುವ ಕಾರಣ ಸಂಚಾರ ದಟ್ಟಣೆ ಹೆಚ್ಚಾಗಿ ಪಾದಚಾರಿಗಳು, ದ್ವಿಚಕ್ರ ವಾಹನ ಸವಾರರು ಮುಖ್ಯರಸ್ತೆಯಲ್ಲೇ ಹೋಗಬೇಕಾಗಿರುವುದರಿಂದ ಈ ರೀತಿಯ ಅವಘಡಗಳು ನಡೆಯುತ್ತವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಡಿವೈಎಸ್ಪಿ ಮುರಳೀಧರ್, ನಗರ ಠಾಣೆಯ ಇನ್ಸ್ಪೆಕ್ಟರ್ ವಿಜಿಕುಮಾರ್ ಮತ್ತು ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದು 2028ರವರೆಗೂ ಸಿಎಂ, ಇಳಿಸಲು ಆಗೋಲ್ಲ: ಜಮೀರ್‌
ಫೆ.೮ರಂದು ಶ್ರೀ ರಾಮಲಿಂಗೇಶ್ವರ ಮಠ ಲೋಕಾರ್ಪಣೆ