ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಆಶ್ರಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ನ್ಯಾಯಾಲಯ ಪ್ರಕರಣ ಇತ್ಯರ್ಥವಾಗಿರುವ ಹಿನ್ನೆಲೆಯಲ್ಲಿ ಬಡವರಿಗೆ ಆದಷ್ಟು ಬೇಗ ನಿವೇಶನ ಹಂಚಿಕೆ ಮಾಡಲು ಕ್ರಮವಹಿಸಲಾಗುವುದು ಎಂದು ಹೇಳಿದರು.
ಈ ಹಿಂದೆ ಆಯ್ಕೆ ಮಾಡಲಾದ ಎಲ್ಲಾ ಫಲಾನುಭವಿಗಳಿಗೆ ಸೂಕ್ತ ದಾಖಲಾತಿ ಪರಿಶೀಲನೆ ನಡೆಸಿ, ನಿವೇಶನ ಹಂಚಿಕೆ ಮಾಡಲಾಗುವುದು. ನಿವೇಶನ ಹಂಚಿಕೆ ಸಂಬಂಧ ಯಾವುದಾದರೂ ದೂರು ಬಂದರೆ ಪರಿಶೀಲಿಸಲಾಗುವುದು ಎಂದರು.ಹೊಸ ಬಡಾವಣೆ ನೀಲಿನಕ್ಷೆ ತಯಾರಿಕೆ ಹಾಗೂ ನಿವೇಶನವನ್ನು ಅಭಿವೃದ್ಧಿಗೊಳಿಸಲು ಅನುದಾನ ನೀಡುವಂತೆ ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಪತ್ರ ಬರೆಯುವಂತೆ ಶಿಫಾರಸ್ಸು ಮಾಡಲಾಗಿದೆ ಎಂದು ಹೇಳಿದರು.
20 ಮೀ. ರಸ್ತೆಯಲ್ಲಿ ನೀರು, ವಿದ್ಯುತ್ ಹಾಗೂ ಚರಂಡಿ ನೀಡಲು ಸಾಧ್ಯವಿಲ್ಲ. ಈ ಹಿಂದೆ ಮಾಡಲಾಗಿರುವ ನೀಲಿನಕ್ಷೆ ಅವೈಜ್ಞಾನಿಕವಾಗಿದೆ. ಹಳೆಯ ನೀಲಿನಕ್ಷೆ ರದ್ದುಗೊಳಿಸಿ 30 ಮೀಟರ್ ಸುಸಜ್ಜಿತ ರಸ್ತೆ ಸೇರಿದಂತೆ ಮೂಲ ಸೌಲಭ್ಯ ಒಳಗೊಂಡಂತೆ ಹೊಸ ನಕ್ಷೆ ತಯಾರಿಸಲು ಆಶ್ರಯ ಸಮಿತಿ ಸಭೆ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಅಧ್ಯಕ್ಷ ಪುಟ್ಟಸ್ವಾಮಿ, ಪುರಸಭೆ ಮುಖ್ಯಾಧಿಕಾರಿ ನಾಗರತ್ನ, ಪ್ರಭಾರ ತಹಸೀಲ್ದಾರ್ ಕುಮಾರ್ ಇದ್ದರು.