- ಹೊನ್ನಾಳಿ ತಾಲೂಕು ಕಚೇರಿಯಲ್ಲಿ ಕಾರ್ಯಕ್ರಮದಲ್ಲಿ ಎಸಿ ವಿ.ಅಭಿಷೇಕ್ ಅಭಿಮತ
ಕನ್ನಡಪ್ರಭ ವಾರ್ತೆ ಹೊನ್ನಾಳಿ
ಬೆಂಗಳೂರು ನಿರ್ಮಾತೃ ಕೆಂಪೇಗೌಡರ ದೂರದೃಷ್ಟಿತ್ವದ ಆಡಳಿತದ ಫಲವಾಗಿ ಅವರನ್ನು ಅತ್ಯಂತ ಗೌರವಪೂರ್ವಕವಾಗಿ ನಾಡಪ್ರಭು ಎನ್ನುವ ಬಿರುದಾಂಕಿತದಿಂದ ಇಡೀ ರಾಜ್ಯದ ಜನತೆ ಗೌರವಿಸುತ್ತಿದೆ ಎಂದು ಉಪವಿಭಾಗಾಧಿಕಾರಿ ವಿ.ಅಭಿಷೇಕ್ ಹೇಳಿದರು.ರಾಷ್ಟ್ರೀಯ ಹಬ್ಬಗಳ ಸಮಿತಿ ಹಾಗೂ ತಾಲೂಕು ಅಡಳಿತ ವತಿಯಿಂದ ತಾಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯುತ್ಸವ ಕಾರ್ಯಕ್ರಮ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ನಗರ, ಕೆರೆ-ಕಟ್ಟೆಗಳ ನಿರ್ಮಾಣ, ರಸ್ತೆ ಹಾಗೂ ಉದ್ಯಾನವನಗಳ ನಿರ್ಮಾಣ, ಕಲೆ, ಸಾಹಿತ್ಯ, ಶಿಕ್ಷಣಗಳಂತಹ ಪ್ರಮುಖ ಕ್ಷೇತ್ರಗಳಿಗೆ ಹೆಚ್ಚಿನ ಒತ್ತು ನೀಡಿ ಬೆಂದಕಾಳೂರನ್ನು ಇಂದು ಬೃಹತ್ ಬೆಂಗಳೂರನ್ನಾಗಿಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಟಿ.ನಿಂಗಪ್ಪ ಪ್ರಾಸ್ತವಿಕವಾಗಿ ಮಾತನಾಡಿದರು. ಗ್ರೇಡ್ -2 ತಹಶೀಲ್ದಾರ್ ಸುರೇಶ್, ಕ್ಷೇತ್ರ ಸಮನ್ವಯ ಅಧಿಕಾರಿ ತಿಪ್ಪೇಶಪ್ಪ ಸೇರಿದಂತೆ ತಾಲೂಕುಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
- - -