ಕನ್ನಡಪ್ರಭ ವಾರ್ತೆ ಕೊಪ್ಪಳ
ಅಣೆಕಟ್ಟೆಗೆ ಭೇಟಿ ನೀಡಿ ಮಾತನಾಡಿದ ಅವರು, ಸರ್ಕಾರ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯತೆ ಇಲ್ಲಿ ಎದ್ದು ಕಾಣುತ್ತಿದೆ. ಆದರೆ ಇದು ಆರೋಪ ಮಾಡುವ ಸಂದರ್ಭ ಅಲ್ಲ. ಈ ಕೂಡಲೇ ಈ ಭಾಗದ ರೈತರು, ವಿವಿಧ ಸಂಘಟನೆಗಳು, ಎಲ್ಲ ಪಕ್ಷಗಳ ಮುಖಂಡರ ಸಭೆ ಕರೆದು ರೈತರ ಹಾಗೂ ಬೆಳೆಗಳ ಹಿತದೃಷ್ಟಿಯಿಂದ ಕೈಗೊಳ್ಳಬೇಕಿರುವ ಕ್ರಮಗಳನ್ನು ಅಂತಿಮಗೊಳಿಸಬೇಕು. ಮುಂದಿನ ದಿನಗಳಲ್ಲಿ ನೀರಿಲ್ಲದೆ ರೈತರಿಗೆ ನಷ್ಟವಾಗುವಂತಿದ್ದರೆ ಅದಕ್ಕೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ನನೆಗುದಿಗೆ ಬಿದ್ದಿರುವ ನವಲಿ ಸಮಾನಾಂತರ ಜಲಾಶಯದ ನಿರ್ಮಾಣದ ಭೂಮಿ ಪೂಜೆ ಶೀಘ್ರ ನಡೆಯಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ಜಿಲ್ಲೆಯಲ್ಲಿ ಬಹುತೇಕ ಎಲ್ಲರೂ ಕಾಂಗ್ರೆಸ್ ಶಾಸಕರಿದ್ದಾರೆ. ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರರು ಕೊಪ್ಪಳ ಜಿಲ್ಲೆಯವರೇ. ಇವರೆಲ್ಲರೂ ಸರ್ಕಾರದ ಮೇಲೆ ಒತ್ತಡ ತರಲಿ. ಹಾಗೂ ತಮ್ಮ ಬದ್ಧತೆ ಪ್ರದರ್ಶಿಸಿ ಈ ಭಾಗದ ಹಿತ ಕಾಯಲಿ ಎಂದರು.ಈ ಸಂದರ್ಭ ಜೆಡಿಎಸ್ ಮುಖಂಡರಾದ ಈಶಪ್ಪ ಮಾದಿನೂರ, ಮಲ್ಲನಗೌಡ್ರ ಕೋನನಗೌಡ್ರ, ವಿರೇಶಗೌಡ ಚಿಕ್ಕಬಗನಾಳ, ಶರಣಪ್ಪ ಜಡಿ, ಮೂರ್ತೆಪ್ಪ ಗಿಣಗೇರಿ, ಯಮನಪ್ಪ ಕಟಿಗಿ, ಮಹಮ್ಮದ್ ಹುಸೇನ್ ಬಲ್ಲೆ, ಶ್ರೀನಿವಾಸ ಪೂಜಾರ, ಮಹೇಶ ಅಗಳಕೇರಾ, ಮಾರ್ಕೆoಡೆಪ್ಪ ಗಿಣಗೇರಿ ಸೇರಿದಂತೆ ಇತರರಿದ್ದರು.
ತುಂಗಭದ್ರಾ ನದಿಗೆ ಬಾಗಿನ ಅರ್ಪಿಸಿದ ಶ್ರೀನಾಥ:ಗಂಗಾವತಿ ಸಮೀಪದ ಸಾಣಾಪುರದ ಪ್ರವಾಸಿ ಮಂದಿರ ಹತ್ತಿರ ತುಂಗಭದ್ರಾ ನದಿಗೆ ಕಾಡಾ ಮಾಜಿ ಅಧ್ಯಕ್ಷ ಎಚ್.ಆರ್. ಶ್ರೀನಾಥ ಸೋಮವಾರ ಬಾಗಿನ ಅರ್ಪಿಸಿದರು.
ಈಗಾಗಲೇ ರೈತರು ಲಕ್ಷಾಂತರ ರೂಪಾಯಿ ವ್ಯಯ ಮಾಡಿ ಬತ್ತ ನಾಟಿ ಮಾಡಿದ್ದಾರೆ. ಸರಿಯಾದ ಸಮಯಕ್ಕೆ ಕಾಮಗಾರಿ ಪೂರ್ಣಗೊಂಡು ನೀರಿನ ಸಾಮರ್ಥ್ಯ ನೋಡಿಕೊಂಡು ನೀರು ಬಿಡುಗಡೆಗೆ ಮುಂದಾಗಬೇಕೆಂದರು. ಈ ಸಂದರ್ಭ ಕಾರ್ಯಕರ್ತರು ಇದ್ದರು.