ರಾಗಿ ಖರೀದಿ ನಡೆದಿದೆ ಎಂದು ಡಿಸಿಗೇ ಸುಳ್ಳು!

KannadaprabhaNewsNetwork |  
Published : Mar 20, 2025, 01:15 AM IST
19ಕೆಡಿವಿಜಿ6, 7-ದಾವಣಗೆರೆಯಲ್ಲಿ ರಾಗಿ ಖರೀದಿ ಕೇಂದ್ರಕ್ಕೆ ಬುಧವಾರ ರೈತ ಮುಖಂಡರ ಮನವಿ ಮೇರೆಗೆ ದಿಢೀರ್ ಭೇಟಿ ನೀಡಿ, ರಾಗಿ ಖರೀದಿಸದಿದ್ದರೂ ಖರೀದಿಸಿದ್ದಾಗಿ ತಮಗೆ ಸುಳ್ಳು ಮಾಹಿತಿ ನೀಡಿದ್ದ ಅಧಿಕಾರಿಗಳನ್ನು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತೀವ್ರ ತರಾಟೆಗೆ ತೆಗೆದುಕೊಂಡಿರುವುದು. ................19ಕೆಡಿವಿಜಿ8-ದಾವಣಗೆರೆಯಲ್ಲಿ ರಾಗಿ ಖರೀದಿ ಕೇಂದ್ರಕ್ಕೆ ಬುಧವಾರ ರೈತ ಮುಖಂಡರಾದ ಬಿ.ಎಂ.ಸತೀಶ ಕೊಳೇನಹಳ್ಳಿ, ಮೆಳ್ಳೆಕಟ್ಟೆ ಎ.ಈ.ನಾಗರಾಜ ಇತರರು ಭೇಟಿ ನೀಡಿದ್ದರು. | Kannada Prabha

ಸಾರಾಂಶ

ಕಳೆದ ಮಳೆಗಾಲದ ಹಂಗಾಮಿನ ರಾಗಿಯನ್ನು ಕನಿಷ್ಠ ಬೆಂಬಲ ಬೆಲೆಯಡಿ ಮಾರಾಟಕ್ಕೆ ನೋಂದಾಯಿಸಿ 3 ತಿಂಗಳಾದರೂ ಖರೀದಿ ಪ್ರಕ್ರಿಯೆ ಕೈಗೊಂಡಿಲ್ಲ ಎಂಬ ದೂರುಗಳ ಮೇರೆಗೆ ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ರೈತರೊಂದಿಗೆ ಬುಧವಾರ ನಗರದ ರಾಗಿ ಖರೀದಿ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದರು. ಈ ಸಂದರ್ಭ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

- ರೈತ ಮುಖಂಡರ ಆರೋಪಗಳ ಮೇರೆಗೆ ಕೇಂದ್ರಕ್ಕೆ ದಿಢೀರ್‌ ಭೇಟಿ ನೀಡಿದ ಜಿಲ್ಲಾಧಿಕಾರಿ । ಶಿಸ್ತುಕ್ರಮ ನಿಶ್ಚಿತ ಎಂದು ಎಚ್ಚರಿಕೆ

- - - ಕನ್ನಡಪ್ರಭ ವಾರ್ತೆ ದಾವಣಗೆರೆ

ಕಳೆದ ಮಳೆಗಾಲದ ಹಂಗಾಮಿನ ರಾಗಿಯನ್ನು ಕನಿಷ್ಠ ಬೆಂಬಲ ಬೆಲೆಯಡಿ ಮಾರಾಟಕ್ಕೆ ನೋಂದಾಯಿಸಿ 3 ತಿಂಗಳಾದರೂ ಖರೀದಿ ಪ್ರಕ್ರಿಯೆ ಕೈಗೊಂಡಿಲ್ಲ ಎಂಬ ದೂರುಗಳ ಮೇರೆಗೆ ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ರೈತರೊಂದಿಗೆ ಬುಧವಾರ ನಗರದ ರಾಗಿ ಖರೀದಿ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದರು. ಈ ಸಂದರ್ಭ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ನಗರದ ರಾಗಿ ಖರೀದಿ ಕೇಂದ್ರದ ಅ‍ವ್ಯವಸ್ಥೆ ಬಗ್ಗೆ ರೈತ ಮುಖಂಡರಾದ ಬಿ.ಎಂ.ಸತೀಶ ಕೊಳೇನಹಳ್ಳಿ, ಮೆಳ್ಳೆಕಟ್ಟೆ ಎ.ಈ. ನಾಗರಾಜ ಇತರರು ಜಿಲ್ಲಾಧಿಕಾರಿ ಅವರನ್ನು ಭೇಟಿ ಮಾಡಿ, ಬೆಳೆಗಾರರ ಸಂಕಷ್ಟದ ಬಗ್ಗೆ ವಿವರಿಸಿದ್ದರು. ಆಗ ರಾಗಿ ಖರೀದಿ ನಡೆಯುತ್ತಿದೆಯೆಲ್ಲಾ ಎಂಬುದಾಗಿ ಡಿಸಿ ಪ್ರಶ್ನಿಸಿದ್ದಾರೆ. ಡಿಸಿ ಮಾತಿಗೆ ರೈತರು ನೀವೇ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲಿಸಿ ಸರ್‌ ಎಂಬ ಮನವಿಗೆ ತಕ್ಷಣವೇ ಡಿಸಿ ಸ್ಪಂದಿಸಿದರು. ಖರೀದಿ ಕೇಂದ್ರಕ್ಕೆ ಹೊರಟೇಬಿಟ್ಟರು. ಕೇಂದ್ರದ ಬಳಿ ಬಂದಾಗಲೇ ಅಲ್ಲಿನ ಅವ್ಯವಸ್ಥೆಗಳ ಕಂಡು ಕೆಂಡಾಮಂಡಲರಾದರು.

ಜಿಲ್ಲೆಯಲ್ಲಿ ಪ್ರತಿ ಕ್ವಿಂಟಲ್‌ಗೆ ₹4290 ನಂತೆ ₹8363 ಕ್ವಿಂ. ರಾಗಿ ಮಾರಾಟಕ್ಕೆ 457 ರೈತರು ನೋಂದಾಯಿಸಿದ್ದಾರೆ. ಆದರೂ, ಖರೀದಿ ಪ್ರಕ್ರಿಯೆ ಕೈಗೊಳ್ಳದ ಬಗ್ಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಸಿದ್ದರಾಮ ಮರಿಯಾಳ, ವ್ಯವಸ್ಥಾಪಕ ನಿರ್ದೇಶಕ ಮಹೇಂದ್ರ ಪಾಟೀಲ, ಖರೀದಿ ಕೇಂದ್ರದ ಅಧಿಕಾರಿಗಳನ್ನು ಸ್ಥಳದಲ್ಲೇ ತರಾಟೆಗೆ ತೆಗೆದುಕೊಂಡರು.

ಕೇಂದ್ರದಲ್ಲಿ ರಾಗಿ ಖರೀದಿ ನಡೆಯುತ್ತಿದೆ ಎಂದು ಅಧಿಕಾರಿಗಳಾದ ನೀವೇ ನನಗೇ ಸುಳ್ಳು ಹೇಳಿದ್ದೀರಿ. ರೈತರನ್ನು ಸತಾಯಿಸುವ ನಿಮ್ಮ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇನೆ. ನಾನು ಜಿಲ್ಲಾಧಿಕಾರಿ, ಎಪಿಎಂಸಿ ಆಡಳಿತಾಧಿಕಾರಿ, ಕನಿಷ್ಠ ಬೆಂಬಲ ಬೆಲೆ ಯೋಜನೆ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷ ಕೂಡ ಆಗಿದ್ದೇನೆ. ನೀವು ನನಗೇ ತಪ್ಪು ಮಾಹಿತಿ ನೀಡಿದ್ದೀರಿ. ನಿಮ್ಮ ವಿರುದ್ಧ ಮುಲಾಜಿಲ್ಲದೇ ಕಾನೂನು ಕ್ರಮ ಜರುಗಿಸುತ್ತೇನೆ ಎಂದು ಅಧಿಕಾರಿಗಳಿಗೆ ಬಿಸಿಮುಟ್ಟಿಸಿದರು.

ನಾಳೆ (ಗುರುವಾರ)ಯಿಂದಲೇ ಖರೀದಿ ಕೇಂದ್ರದಲ್ಲಿ ರಾಗಿ ಖರೀದಿ ಪ್ರಕ್ರಿಯೆ ಶುರುವಾಗಬೇಕು. ಕೇಂದ್ರದಲ್ಲಿ ರೈತರಿಗೆ ಶುದ್ಧ ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಬೇಕು. ಯಾವುದೇ ಕಾರಣಕ್ಕೂ ಅನವಶ್ಯಕವಾಗಿ ರೈತರನ್ನು ಅಲೆದಾಡಿಸಬೇಡಿ ಎಂದ ಅವರು, ಸುಳ್ಳು ಮಾಹಿತಿ ನೀಡಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತಪ್ಪಿದ್ದಲ್ಲ ಎಂದೂ ಜಿಲ್ಲಾಧಿಕಾರಿ ಎಚ್ಚರಿಸಿಯೇ ತಮ್ಮ ವಾಹವದಲ್ಲಿ ತೆರಳಿದರು.

ಜಿಲ್ಲಾಧಿಕಾರಿ ಸ್ಥಳದಿಂದ ತೆರಳಿದ ನಂತರ ಆಹಾರ ಮತ್ತು ನಾಗರೀಕ ಪೂರೈಕೆ ಜಂಟಿ ನಿರ್ದೇಶಕ ಸಿದ್ದರಾಮ ಮರಿಯಳ ಮಾತನಾಡಿ, ಜಿಲ್ಲೆಯಲ್ಲಿ 1.80 ಲಕ್ಷ ಕ್ವಿಂ. ಅಕ್ಕಿ ಇದೆ. ತಿಂಗಳೊಳಗೆ ಪಡಿತರ ಚೀಟಿದಾರರಿಗೆ ಅದನ್ನು ಹಂಚಿಕೆ ಮಾಡಬೇಕು. ಅಕ್ಕಿ ಭಾರತೀಯ ಆಹಾರ ನಿಗಮದಿಂದ ಜಿಲ್ಲೆಯ ಗೋದಾಮಿಗೆ, ಜಿಲ್ಲಾ ಗೋದಾಮಿನಿಂದ ಎಲ್ಲ ನ್ಯಾಯಬೆಲೆ ಅಂಗಡಿಗಳಿಗೆ ತಲುಪಿಸಿ, ಅಲ್ಲಿಂದ ಪಡಿತರ ಚೀಟಿದಾರರಿಗೆ ಹಂಚಿಕೆ ಮಾಡಬೇಕು. ಇದರಿಂದ ನಮ್ಮ ಮೇಲೆ ಸಾಕಷ್ಟು ಕಾರ್ಯಭಾರ ಇದೆ. ರೈತರು ಸಹ ಸುಧಾರಿಸಿಕೊಳ್ಳಬೇಕು. ಮಾರ್ಚ್‌ ಅಂತ್ಯದೊಳಗೆ ನೋಂದಾಯಿಸಿಕೊಳ್ಳುವ ರೈತರ ರಾಗಿಯನ್ನು ಜೂ.30 ರೊಳಗೆ ಖರೀದಿಸಲು ದಿನಾಂಕ ಮುಂದೂಡಿ ಸರ್ಕಾರ ಆದೇಶ ಮಾಡಿದೆ ಎಂದು ರೈತ ಮುಖಂಡರು, ರೈತರಿಗೆ ಮನವರಿಕೆ ಮಾಡಿಕೊಡಲು ಯತ್ನಿಸಿದರು.

- - - -19ಕೆಡಿವಿಜಿ6, 7.ಜೆಪಿಜಿ:

ದಾವಣಗೆರೆಯಲ್ಲಿ ರೈತ ಮುಖಂಡರ ಮನವಿ ಮೇರೆಗೆ ಬುಧವಾರ ಜಿಲ್ಲಾಧಿಕಾರಿ ರಾಗಿ ಖರೀದಿ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ, ತಮಗೆ ಸುಳ್ಳು ಮಾಹಿತಿ ನೀಡಿದ್ದ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. -19ಕೆಡಿವಿಜಿ8.ಜೆಪಿಜಿ:

ದಾವಣಗೆರೆಯಲ್ಲಿ ರಾಗಿ ಖರೀದಿ ಕೇಂದ್ರಕ್ಕೆ ಬುಧವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಜತೆಗೆ ರೈತ ಮುಖಂಡರಾದ ಬಿ.ಎಂ.ಸತೀಶ ಕೊಳೇನಹಳ್ಳಿ, ಮೆಳ್ಳೆಕಟ್ಟೆ ಎ.ಈ.ನಾಗರಾಜ ಇತರರು ಆಗಮಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ ತೆಬಿಯಾ ರೋಸಿಯಾ ಹೂ ವೈಭವ!
ನಿವೇಶನ ರಹಿತರಿಗೆ ಸರ್ಕಾರದಿಂದ ಸೈಟ್‌