ಕೇರಳ ಪ್ರವಾಹದಲ್ಲಿ ಜಲಸಮಾಧಿಯಾಗಿದ್ದ ಚಾಮರಾಜನಗರದ ರಾಜನ್‌ ಮೃತದೇಹ ಪತ್ತೆ

KannadaprabhaNewsNetwork |  
Published : Aug 01, 2024, 12:25 AM IST
ರಾಜನ್ | Kannada Prabha

ಸಾರಾಂಶ

ಕೇರಳದ ಮೇಪಾಡಿಯ ಚೂರಲ್‌ ಮಲಾದಲ್ಲಿ ಸ್ವಂತ ನೆಲೆ ಖರೀದಿಸಿ 6 ತಿಂಗಳ ಹಿಂದೆ ಗೃಹಪ್ರವೇಶ ಮಾಡಿದ್ದ ದಂಪತಿ ಸೋಮವಾರ ರಾತ್ರಿ ನಡೆದ ದುರಂತದಲ್ಲಿ ಮನೆ ಸಮೇತ ಜಲ ಸಮಾಧಿಯಾಗಿದ್ದರು. ಚಾಮರಾಜನಗರ ತಾಲೂಕಿನ ಇರಸವಾಡಿಯ ರತ್ನಮ್ಮನನ್ನು ವಿವಾಹವಾಗಿದ್ದ ಚೂರಲ್‌ ಮಲಾದ ರಾಜನ್‌ ಪೈಕಿ ರಾಜನ್‌ ಅವರ ಮೃತದೇಹ ಬುಧವಾರ ಸಂಜೆ ನೆಲಂಬೂರು ಬಳಿ ಪತ್ತೆಯಾಗಿದೆ.

ಚಾಮರಾಜನಗರ: ಕೇರಳದ ಮೇಪಾಡಿಯ ಚೂರಲ್‌ ಮಲಾದಲ್ಲಿ ಸ್ವಂತ ನೆಲೆ ಖರೀದಿಸಿ 6 ತಿಂಗಳ ಹಿಂದೆ ಗೃಹಪ್ರವೇಶ ಮಾಡಿದ್ದ ದಂಪತಿ ಸೋಮವಾರ ರಾತ್ರಿ ನಡೆದ ದುರಂತದಲ್ಲಿ ಮನೆ ಸಮೇತ ಜಲ ಸಮಾಧಿಯಾಗಿದ್ದರು.

ಚಾಮರಾಜನಗರ ತಾಲೂಕಿನ ಇರಸವಾಡಿಯ ರತ್ನಮ್ಮನನ್ನು ವಿವಾಹವಾಗಿದ್ದ ಚೂರಲ್‌ ಮಲಾದ ರಾಜನ್‌ (ರಾಜೇಂದ್ರ), ರಜನಿ (ರತ್ನಮ್ಮ) ದಂಪತಿಗ‍ಳು ಕಳೆದ ಹಲವಾರು ವರ್ಷದ ಹಿಂದೆ ಕೂಲಿ ಮಾಡಿ ಬದುಕು ಕಟ್ಟಿಕೊಂಡಿದ್ದರು. ಕೂಲಿ ಹಣದಲ್ಲಿ ಉಳಿತಾಯ ಮಾಡಿ ಪೆಬ್ರವರಿಯಲ್ಲಿ ಸ್ವಂತ ಮನೆ ಕಟ್ಟಿಸಿ 6 ತಿಂಗಳ ಹಿಂದೆ ಬಂಧು ಬಾಂಧವರ ಕರೆಸಿ ಗೃಹ ಪ್ರವೇಶ ಮಾಡಿದ್ದರು.ಈ ಬಗ್ಗೆ ಮೇಪಾಡಿಯಲ್ಲಿ ಬೀಡು ಬಿಟ್ಟಿರುವ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಹಸೀಲ್ದಾರ್ ರಮೇಶ್ ಬಾಬು ಮಾಹಿತಿ ನೀಡಿದ್ದು, ನಾಪತ್ತೆಯಾಗಿರುವ ದಂಪತಿಗಳ ಪೈಕಿ ರಾಜನ್‌ ಮೃತದೇಹ ಬುಧವಾರ ಸಂಜೆ ನೆಲಂಬೂರು ಬಳಿ ಪತ್ತೆಯಾಗಿದೆ. ರತ್ನಮ್ಮ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ಮೃತ ರಾಜೇಂದ್ರ ಅವರ ತಂದೆ ಚಾಮರಾಜನಗರ ತಾಲೂಕಿನ ಚಿಕ್ಕಮೋಳೆಯವರಾಗಿದ್ದು ಇವರ ಕುಟುಂಬ 50 ವರ್ಷದ ಹಿಂದೆಯೇ ಚೂರಲ್‌ ಮಾಲಾದ ಟೀ ಎಸ್ಟೇಟ್‌ಗೆ ತೆರಳಿ ಗಾರೆ ಕೆಲಸ ಮಾಡಿಕೊಂಡಿದ್ದರು. ರಾಜೇಂದ್ರ ಅವರ ತಾಯಿ ಮತ್ತು ತಂಗಿ ಕೇರಳದ ಕಡೂರು ಎಸ್ಟೇಟ್‌ನಲ್ಲಿ ನೆಲೆಸಿದ್ದರೆಂದು ಅವರ ಸಂಬಂಧಿ ವೆಂಕಟಯ್ಯನ ಛತ್ರ ಗ್ರಾಪಂ ಸದಸ್ಯ ಶಶಿಕುಮಾರ್‌ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ