ಕನ್ನಡಪ್ರಭ ವಾರ್ತೆ ನಾಗಮಂಗಲ
ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ನೂತನವಾಗಿ ಆರಂಭಿಸಿರುವ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಉದ್ಘಾಟನಾ ಸಮಾರಂಭದಲ್ಲಿ ಸಾಲುಮರದ ತಿಮ್ಮಕ್ಕ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದರು.
ಸಾಲುಮರದ ತಿಮ್ಮಕ್ಕ ಅವರು ಪರಿಸರ ಕಾಳಜಿ ಇಟ್ಟುಕೊಂಡಿದ್ದ ದಿಟ್ಟ ಮಹಿಳೆ. ಸಾವಿರಾರು ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಣೆ ಮಾಡಿ ಬೆಳೆಸುವ ಮೂಲಕ ನಾಡಿಗೆ ಮಾರ್ಗದರ್ಶನ ಮಾಡಿದ ಮಹಾನ್ ಮಾತೆ. ಅವರು ಅಂದು ನೆಟ್ಟು ಬೆಳೆಸಿರುವ ಸಸಿಗಳು ಇಂದು ಹೆಮ್ಮರವಾಗಿ ಬೆಳೆದು ಮಾನವರಿಗೆ ನೆರಳಾದರೆ, ಪ್ರಾಣಿ, ಪಕ್ಷಿ ಸಂಕುಲಕ್ಕೆ ಆಶ್ರಯ ತಾಣವಾಗಿವೆ ಎಂದರು.ತಿಮ್ಮಕ್ಕ ಅವರು ಪರಿಸರಕ್ಕೆ ನೀಡಿರುವ ಕೊಡುಗೆಯನ್ನು ಗುರುತಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಹಲವು ಪ್ರಶಸ್ತಿಗಳನ್ನು ನೀಡಿ ಗೌರವಿಸಿವೆ. ಇವರ ಸಾಧನೆಯನ್ನು ಹಲವು ಸಂಘ- ಸಂಸ್ಥೆಗಳು ಶ್ಲಾಘಿಸಿ ಸನ್ಮಾನಿಸಿವೆ. ವೃಕ್ಷ ಮಾತೆ ತಿಮ್ಮಕ್ಕನ ಸಾಧನೆಗಳು ಮತ್ತು ಪರಿಸರ ಪ್ರೇಮ ಇಂದಿನ ಯುವಕರಿಗೆ ಆದರ್ಶಪ್ರಾಯವಾಗಲಿ ಎಂದರು.
ಜಿಲ್ಲಾ ಕೇಂದ್ರದಲ್ಲಿ ತೆರೆಯಬೇಕಿದ್ದ ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ತೆರೆಯಲಾಗಿದೆ ಎಂದರು.
ಈ ವೇಳೆ ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ವಿ.ದಿನೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಕೆ.ಮಂಜುಳ, ತಹಸೀಲ್ದಾರ್ ಜಿ.ಆದರ್ಶ, ಬಿಜಿಎಸ್ ಐಟಿ ಉಪ ಪ್ರಾಂಶುಪಾಲ ಆನಂದ್ ರಾಜ್, ಜಂಟಿ ರಿಜಿಸ್ಟ್ರಾರ್ ಉಮೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ದಾಸಪ್ಪ ಭೋವಿ ಸೇರಿದಂತೆ ಹಲವರು ಇದ್ದರು.