ವಿವಿ ಮುಚ್ಚುವ ತೀರ್ಮಾನ ದುರದೃಷ್ಟಕರ: ಸಿದ್ದರಾಮಸ್ವಾಮಿ

KannadaprabhaNewsNetwork |  
Published : Feb 18, 2025, 12:34 AM IST
16ಉಳಉ1 | Kannada Prabha

ಸಾರಾಂಶ

ನೂತನ ವಿಶ್ವವಿದ್ಯಾಲಯಗಳಿಗೆ ಸರ್ಕಾರ ಆರ್ಥಿಕ ನೀಡಿ ಅವುಗಳನ್ನು ಬೆಳೆಸಲು ಉತ್ತೇಜಿಸುವ ಬದಲು ಕುಂಟು ನೆಪವೊಡ್ಡಿ ರಾಜ್ಯದ 9 ವಿವಿ ಮುಚ್ಚಲು ತೀರ್ಮಾನ ತೆಗೆದುಕೊಂಡಿರುವುದು ಖಂಡನೀಯ ಎಂದು ಬಿಜೆಪಿ ಮುಖಂಡ ಸಿದ್ದರಾಮಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಂಗಾವತಿ:

ಕೊಪ್ಪಳ ಸೇರಿದಂತೆ ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಸರ್ಕಾರ ಮುಚ್ಚಲು ಮುಂದಾಗಿರುವುದು ದುರದೃಷ್ಟಕರ ಎಂದು ಬಿಜೆಪಿ ಮುಖಂಡ ಎಚ್.ಎಂ. ಸಿದ್ರಾಮಸ್ವಾಮಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಈಗಾಗಲೇ ಜಿಲ್ಲೆಯಲ್ಲಿ 150ಕ್ಕೂ ಹೆಚ್ಚು ಪದವಿ ಶಿಕ್ಷಣ ಕಾಲೇಜುಗಳು ಇದ್ದು, ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಉನ್ನತ ಶಿಕ್ಷಣಕ್ಕಾಗಿ ಗ್ರಾಮೀಣ ಭಾಗಕ್ಕೂ ವಿಶ್ವವಿದ್ಯಾಲಯ ಸ್ಥಾಪಿಸುವ ಮೂಲಕ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿತ್ತು. ನೂತನ ವಿವಿಗಳಿಗೆ ಸರ್ಕಾರ ಆರ್ಥಿಕ ನೀಡಿ ವಿವಿ ಬೆಳೆಸಲು ಉತ್ತೇಜಿಸುವ ಬದಲು ಕುಂಟು ನೆಪವೊಡ್ಡಿ ರಾಜ್ಯದ 9 ವಿವಿ ಮುಚ್ಚಲು ತೀರ್ಮಾನ ತೆಗೆದುಕೊಂಡಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿರುವ ಅವರು, ಯಾವ ಕಾರಣಕ್ಕೆ ವಿವಿ ಮುಚ್ಚಲಾಗುತ್ತಿದೆ ಎಂಬುದನ್ನು ಸ್ಪಷ್ಟಪಡಿಸಬೇಕೆಂದು ಒತ್ತಾಯಿಸಿದ್ದಾರೆ. ಕೊಪ್ಪಳ ವಿವಿ ಇದೀಗ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. 40ಕ್ಕೂ ಹೆಚ್ಚು ಕಾಲೇಜು ಹೊಂದಿರುವ ಮತ್ತು 5000ಕ್ಕೂ ಹೆಚ್ಚು ವಿದ್ಯಾರ್ಥಿ ಹೊಂದಿರುವ ವಿವಿಯನ್ನು ಮುಚ್ಚುವ ತೀರ್ಮಾನ ತೆಗೆದುಕೊಂಡಿರುವುದು ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ದೂರಿದ್ದಾರೆ. ಜಿಲ್ಲೆಯ ಅಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರು, ಆರ್ಥಿಕ ಸಲಹೆಗಾರರು ಸೇರಿ ವಿಶ್ವವಿದ್ಯಾಲಯ ಉಳಿಸಿಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ