ಕನ್ನಡಪ್ರಭ ವಾರ್ತೆ ಬೈಲಹೊಂಗಲ
ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ನಿರ್ದೇಶಕ ಡಾ.ಮಹಾಂತೇಶ ಶಾಸ್ತ್ರೀ ಆರಾದ್ರಿಮಠ ಸಾನಿಧ್ಯ ವಹಿಸಿದ್ದರು. ವಿಶ್ವ ಮಾನವ ಬಂದುತ್ವ ವೇದಿಕೆಯ ಅಧ್ಯಕ್ಷ ಮಂಜುನಾಥ ಶಿಡ್ಲೆವ್ವಗೋಳ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ತಹಸೀಲ್ದಾರ್ ಹನುಮಂತ ಶಿರಹಟ್ಟಿ, ಜಿಪಂ ಮಾಜಿ ಸದಸ್ಯೆ ರೋಹಿಣಿ ಪಾಟೀಲ, ಡಿಸಿಸಿ ಬ್ಯಾಂಕ್ ನಿರ್ದೇಶಕ ನಾನಾಸಾಹೇಬ ಪಾಟೀಲ, ಆರ್ಇಎಸ್ ಪೌಢಶಾಲೆ ಚೇರಮನ್ ಶಂಕ್ರೆಪ್ಪ ಸಿದ್ನಾಳ, ಗಣ್ಯರಾದ ಡಾ.ಬಿ.ಬಿ.ಪುಟ್ಟಿ, ದುಂಡಪ್ಪ ಒಕ್ಕುಂದ, ಎಸ್.ಜಿ.ಸಿದ್ನಾಳ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಮಹಾದೇವಿ ಕುಡಒಕ್ಕಲಿಗ, ಸಹಾಯಕ ಕಾರ್ಯನಿರ್ವಾಹಕಾಧಿಕಾರಿ ಮಹೇಶ್ ಹೂಲಿ, ಪಿಡಿಒ ವಿಜಯಲಕ್ಷ್ಮಿ ಆನಿಗೋಳ, ಗ್ರಾಪಂ ಮಾಜಿ ಅಧ್ಯಕ್ಷ ಅನಿಲ್ ನೇಸರಗಿ, ಎಸ್ಡಿಎಂಸಿ ಅಧ್ಯಕ್ಷ ಹನುಮಂತ ಶಿಡ್ಲೆವ್ವಗೋಳ ಆಗಮಿಸಿದ್ದರು. ಈ ವೇಳೆ ಸಂಪಗಾಂವ ಜಿಪಂ ಕ್ಷೇತ್ರ ವ್ಯಾಪ್ತಿಯ 12 ಗ್ರಾಮಗಳ ತಲಾ ಮೂರು ಜನ ಆದರ್ಶ ರೈತರು, ಸೈನಿಕರು, ಹಾಗೂ ಶಿಕ್ಷಕರನ್ನು ಆಯ್ಕೆ ಮಾಡಿ ಅವರಿಗೆ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಪಗಾಂವ, ಚಿಕ್ಕಬಾಗೇವಾಡಿ, ಹನ್ನಿಕೇರಿ ಕ್ಲಸ್ಟರ್ನಲ್ಲಿ ಸೇವೆ ಸಲ್ಲಿಸುತ್ತಿರುವ ಆದರ್ಶ ಶಿಕ್ಷಕರನ್ನು ಗುರುತಿಸಿ ಅವರಿಗೆ ಅಕ್ಷರ ಮಾತೆ ಸಾವಿತ್ರಿ ಬಾಯಿ ಜೋತಿರಾವ ಪುಲೆ ದಂಪತಿ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮುಖ್ಯೋಪಾಧ್ಯಾಯ ಎಸ್.ಡಿ.ಗಂಗಣ್ಣವರ ಸ್ವಾಗತಿಸಿದರು. ಶಿಕ್ಷಕ ಬಿ.ಎಸ್.ಚಿವಟಗುಂಡಿ, ಶಿಕ್ಷಕ ಶ್ರೀಕಾಂತ ಉಳ್ಳೆಗಡ್ಡಿ ವಂದಿಸಿದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.ಸವಿನೆನಪಿಗಾಗಿ ನೂತನ ಶಾಲಾ ಕೊಠಡಿ, ದ್ವಾರಬಾಗಿಲು, ಅಡುಗೆ ದಾಸ್ತಾನ ಕೊಠಡಿ ಹಾಗೂ ಮೈದಾನದ ಪೇವರ್ಸ್ ಮತ್ತು ಟೈಲ್ಸ್ ಜೋಡಣೆಯ ಕಾರ್ಯವನ್ನು ಶಾಸಕರು ಇದೇ ಸಂದರ್ಭದಲ್ಲಿ ಉದ್ಗಾಟಿಸಿದರು. ಗ್ರಾಪಂ. ಆಡಳಿತ ಮಂಡಳಿಯ ಮಾಜಿ ಸದಸ್ಯರು, ಗ್ರಾಮದ ಹಿರಿಯರು, ಅಂಗನವಾಡಿ, ಆರೋಗ್ಯ ಇಲಾಖೆಯ ಕಾರ್ಯಕರ್ತರು, ಶಾಲೆಯ ಹಳೇಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.