ಸಂಘದ ಅಭಿವೃದ್ಧಿಗೆ ಸದಸ್ಯರು, ಆಡಳಿತ ಮಂಡಳಿ ಶ್ರಮ ಕಾರಣ

KannadaprabhaNewsNetwork |  
Published : Sep 09, 2025, 01:00 AM IST
ಕೆ ಕೆ ಪಿ ಸುದ್ದಿ 02:ನಗರದ ಶ್ರೀ  ನಿರ್ವಾಣೇಶ್ವರ ಹಿರಿಯ ವಿದ್ಯಾರ್ಥಿಗಳ ಮತ್ತು ನೌಕರರ ಸೌಹಾರ್ದ ಸಹಕಾರಿ ಸಂಘ ನಿ ದ 19  ನೇ ವರ್ಷದ ವಾರ್ಷಿಕ ಸರ್ವ ಸದಸ್ಯರ ಮಹಾಸಭೆ ನಗರದ ಶ್ರೀ ನಿರ್ವಾಣೇಶ್ವರ ಸಮುದಾಯ ಭವನದಲ್ಲಿ  ನಡೆಯಿತು.  | Kannada Prabha

ಸಾರಾಂಶ

ಕನಕಪುರ: ಸದಸ್ಯರ ಸಹಕಾರ, ಆಡಳತ ಮಂಡಳಿ ಹಾಗೂ ಸಿಬ್ಬಂದಿಯ ಅವಿರತ ಶ್ರಮದ ಫಲವಾಗಿ ಸಂಸ್ಥೆ ಉತ್ತಮ ಲಾಭಗಳಿಸಲು ಸಾಧ್ಯವಾಗಿದೆ ಎಂದು ಶ್ರೀ ದೇಗುಲಮಠದ ಕಿರಿಯ ಶ್ರೀಗಳಾದ ಶ್ರೀ ಚನ್ನಬಸವ ಸ್ವಾಮೀಜಿ ತಿಳಿಸಿದರು.

ಕನಕಪುರ: ಸದಸ್ಯರ ಸಹಕಾರ, ಆಡಳತ ಮಂಡಳಿ ಹಾಗೂ ಸಿಬ್ಬಂದಿಯ ಅವಿರತ ಶ್ರಮದ ಫಲವಾಗಿ ಸಂಸ್ಥೆ ಉತ್ತಮ ಲಾಭಗಳಿಸಲು ಸಾಧ್ಯವಾಗಿದೆ ಎಂದು ಶ್ರೀ ದೇಗುಲಮಠದ ಕಿರಿಯ ಶ್ರೀಗಳಾದ ಶ್ರೀ ಚನ್ನಬಸವ ಸ್ವಾಮೀಜಿ ತಿಳಿಸಿದರು.

ನಗರದ ಶ್ರೀ ದೇಗುಲ ಮಠದ ನಿರ್ವಾಣೇಶ್ವರ ಸಮುದಾಯ ಭವನದಲ್ಲಿ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿಯ ಉಪಸ್ಥಿತಿಯಲ್ಲಿ ನಡೆದ ಸಂಸ್ಥೆಯ 19ನೇ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ತಾಲೂಕಿನ ಜನತೆಗೆ ಉತ್ತಮ ಸೇವೆ ಸಲ್ಲಿಸಬೇಕೆಂಬ ಉದ್ದೇಶದಿಂದ ಲಿಂಗೈಕ್ಯ ಸ್ವಾಮೀಜಿಯ ಮಹದಾಸೆ ಹಾಗೂ ದೂರದೃಷ್ಟಿಯಿಂದ ಆರಂಭಿಸಿದ ಈ ಸಹಕಾರ ಸಂಘ ಹಲವು ವಿಘ್ನಗಳು ಬಂದರೂ ಸದಸ್ಯರ ಸಹಕಾರ ಹಾಗೂ ಆಡಳಿತ ಮಂಡಳಿಯ ಧೃಡ ಸಂಕಲ್ಪದಿಂದ ಉತ್ತಮ ವಹಿವಾಟಿನಿಂದ ಲಾಭದತ್ತ ಸಾಗುತ್ತಿದೆ. ಸಂಸ್ಥೆಯಲ್ಲಿ ಸಾಲ ಪಡೆದ ಸದಸ್ಯರು ಸಕಾಲದಲ್ಲಿ ಸಾಲ ಮರುಪಾವತಿಸುತ್ತಿರುವುದು ಲಾಭ ಗಳಿಸಲು ಪ್ರಮುಖ ಕಾರಣ ಎಂದರು.

ಸಹಕಾರ ಸಂಘದ ಅಧ್ಯಕ್ಷ ಪರಮೇಶಯ್ಯ ಮಾತನಾಡಿ, ಸದಸ್ಯರ ನಂಬಿಕೆ, ಸಹಕಾರದಿಂದ ಒಂದು ಸಂಸ್ಥೆ ಆರ್ಥಿಕವಾಗಿ ಲಾಭ ಗಳಿಸಲು ಸಾಧ್ಯ. ಸಂಸ್ಥೆಯ ಆದಾಯ ಹೆಚ್ಚಿಸಲು ಸದಸ್ಯರ ಸಂಖ್ಯೆಯನ್ನು ಹೆಚ್ಚಿಸುವುದರ ಜೊತೆಗೆ ಯಶಸ್ವಿನಿ ಯೋಜನೆ ಸೇರಿ ಹಲವು ಯೋಜನೆಗಳನ್ನು ಸದಸ್ಯರ ಅನುಕೂಲಕ್ಕಾಗಿ ಜಾರಿಗೆ ತರಲಾಗಿದೆ. ಸದಸ್ಯರು ಇದರ ಉಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.

ಸಂಸ್ಥೆ ಸಿಇಒ ಅವಿನಾಶ್ 2024-25ನೇ ಸಾಲಿನ ವಾರ್ಷಿಕ ವರದಿ ಮಂಡಿಸಿ ಸಂಸ್ಥೆ 6.30 ಲಕ್ಷ ಲಾಭ ಗಳಿಸಿರುವ ಬಗ್ಗೆ ಮಾಹಿತಿ ಹಾಗೂ 25/26ನೇ ಸಾಲಿನ ಬಜೆಟ್ ಮಂಡಿಸಿ ಸರ್ವ ಸದಸ್ಯರ ಸಭೆಯ ಅನುಮೋದನೆ ಪಡೆದುಕೊಂಡರು. ನಿತ್ಯನಿಧಿ ಠೇವಣಿ ಸಂಗ್ರಹಕಾರರು ಹಾಗೂ ಎಸ್ಸೆಸ್ಸೆಲ್ಸಿ/ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿದ ಸದಸ್ಯರ ಪ್ರತಿಭಾನ್ವಿತ ಮಕ್ಕಳನ್ನು ಗೌರವಿಸಲಾಯಿತು.

ಈ ವೇಳೆ ಉಪಾಧ್ಯಕ್ಷ ಶ್ರೀನಿವಾಸ್, ನಿರ್ದೇಶಕರಾದ ಶಿವಮೂರ್ತಿ, ಜಗದೀಶ್ ಕುಮಾರ್, ಚನ್ನವೀರಯ್ಯ, ಮಹದೇವ್ ಪ್ರಸಾದ್, ಮಹದೇವ್ ಪ್ರಸಾದ್, ನಾಗೇಂದ್ರ ಸ್ವಾಮಿ, ಕಬ್ಬಾಳೇಗೌಡ, ಮಂಜುನಾಥ್, ನಾಗಮಣಿ, ಮಹದೇವಮ್ಮ ಹಾಗೂ ಸಂಸ್ಥೆಯ ಸಿಬ್ಬಂದಿ ಭಾಗವಹಿಸಿದ್ದರು.

ಕೆ ಕೆ ಪಿ ಸುದ್ದಿ 02:

ಕನಕಪುರದ ಶ್ರೀ ನಿರ್ವಾಣೇಶ್ವರ ಹಿರಿಯ ವಿದ್ಯಾರ್ಥಿಗಳ ಮತ್ತು ನೌಕರರ ಸೌಹಾರ್ದ ಸಹಕಾರಿ ಸಂಘದ 19ನೇ ವಾರ್ಷಿಕ ಸರ್ವ ಸದಸ್ಯರ ಮಹಾಸಭೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ