ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ 54ರ ಉಳ್ಳಾಲ ಹೊಯ್ಗೆ ಎಂಬಲ್ಲಿ ಕಾಲು ಸಂಕ ಕುಸಿತವಾದ ಸ್ಥಳಕ್ಕೆ ದೋಣಿಯಲ್ಲಿ ಸಂಚರಿಸಿ ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಪರಿಶೀಲನೆ ನಡೆಸಿದರು.
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ 54ರ ಉಳ್ಳಾಲ ಹೊಯ್ಗೆ ಎಂಬಲ್ಲಿ ಕಾಲು ಸಂಕ ಕುಸಿತವಾದ ಸ್ಥಳಕ್ಕೆ ದೋಣಿಯಲ್ಲಿ ಸಂಚರಿಸಿ ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಅವರು ಬುಧವಾರ ಪರಿಶೀಲನೆ ನಡೆಸಿದರು.
ನೇತ್ರಾವತಿ ನದಿ ತೀರದಲ್ಲಿ ಕಾಲುದಾರಿಯ ಮೂಲಕ ಸಾರ್ವಜನಿಕರು ಸಂಚರಿಸಲು ಲೋಹದ ಕಾಲುಸಂಕವನ್ನು ಬಹಳ ವರ್ಷಗಳ ಹಿಂದೆ ನಿರ್ಮಿಸಲಾಗಿತ್ತು. 4 ವರ್ಷಗಳ ಹಿಂದೆ ಈ ಸಂಕ ಕುಸಿದು ಬಿದ್ದಿತ್ತು.ಈ ಪ್ರದೇಶದಲ್ಲಿ ಸುಮಾರು 300ಕ್ಕೂ ಅಧಿಕ ಕುಟುಂಬಗಳು ವಾಸಿಸುತ್ತಿದ್ದು, ಕಾಲು ಸಂಕದ ಮೂಲಕ ನದಿ ಬದಿಯಲ್ಲಿ ಸಮನಾಂತರವಾಗಿ ನಡೆದು, ನಗರ ಸಂಪರ್ಕಿಸಲು ಹತ್ತಿರವಾಗಿತ್ತು. ಕಾಲುಸಂಕ ಕುಸಿದುಬಿದ್ದ ಬಳಿಕ ಸ್ಥಳೀಯರಿಗೆ ದೈನಂದಿನ ಓಡಾಟಕ್ಕೆ ತೊಂದರೆಯಾಗಿತ್ತು. ಈ ಸಂಕವನ್ನು ದುರಸ್ತಿ ಅಥವಾ ಮರುನಿರ್ಮಾಣ ಮಾಡಲು ಸ್ಥಳೀಯರು ಬೇಡಿಕೆ ಇಟ್ಟಿದ್ದರು.ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಅವರು ಮಹಾನಗರ ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಅವರೊಂದಿಗೆ ಬುಧವಾರ ದೋಣಿಯಲ್ಲಿಯೇ ಕಾಲುಸಂಕ ಇದ್ದ ಸ್ಥಳಕ್ಕೆ ತೆರಳಿ ಸಮಗ್ರವಾಗಿ ಪರಿಶೀಲಿಸಿದರು. ಕಾಲುಸಂಕದ ಪುನರ್ ನಿರ್ಮಾಣ ಅಥವಾ ದುರಸ್ತಿ ಬಗ್ಗೆ ಬಗ್ಗೆ ತಾಂತ್ರಿಕ ಅಭಿಪ್ರಾಯ ಪಡೆದು ಶೀಘ್ರದಲ್ಲೇ ನಿರ್ಧರಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.